Homeಕರ್ನಾಟಕ'ರೋಹಿತ್ ಕಾಯ್ದೆ'ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

‘ರೋಹಿತ್ ಕಾಯ್ದೆ’ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

- Advertisement -
- Advertisement -

ಏಪ್ರಿಲ್ 14 ರಂದು ಅಥವಾ ಅದಕ್ಕೂ ಮೊದಲು ಕರ್ನಾಟಕದಲ್ಲಿ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಿ, ರಾಜ್ಯದ ಹಲವು ವಿವಿಗಳ ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, “ರೋಹಿತ್ ಕಾಯ್ದೆಗಾಗಿ ಈ ಆಂದೋಲನ ಒಂದು ಜನಾಂದೋಲನವಾಗಬೇಕು. ದೇಶದ ವಿಶ್ವವಿದ್ಯಾನಿಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅವರ ಜೀವ ಕಳೆದಕೊಳ್ಳುತ್ತಲೇ ಇದ್ದಾರೆ. ಸಮಾನತೆ ಬಗ್ಗೆ ಮಾತನಾಡುವ ನಮ್ಮ ಪ್ರಧಾನಮಂತ್ರಿಗಳು ಈ ಬಗ್ಗೆ ಮಾತನಾಡುವುದಿಲ್ಲ. ಅವರ ಸಂಘಟನೆಯವರು (ಆರ್‌ಎಸ್‌ಎಸ್‌) ದಲಿತ ವಿದ್ಯಾರ್ಥಿಗಳ ಸಾವಿಗೆ ಕಾರಣವಾದಾಗ ಅವರು ಖಂಡಿಸುವುದೇ ಇಲ್ಲ. ಕರ್ನಾಟಕದಾದ್ಯಂತ ವಿಶ್ವವಿದ್ಯಾನಿಲಯಗಳನ್ನು ಈಗ ವ್ಯವಸ್ಥಿತವಾಗಿ ಕೇಸರಿಕರಣ ಮಾಡಲಾಗುತ್ತಿದೆ; ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ದಲಿತ ಹೋರಾಟಗಾರರರಾದ ಬಸವರಾಜ್ ಕೌತಾಳ್ ಮಾತನಾಡಿ, ಈ ಆಂದೋಲನದಲ್ಲಿ ಎಲ್ಲ ದಲಿತ ಸಂಘಟನೆಗಳು ಕೈಜೋಡಿಸಬೇಕು ಎಂದು ಕರೆ ಕೊಟ್ಟರು. “2014 ರಿಂದ 2024 ರವರೆಗೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಕ್ರೌರ್ಯ ಮತ್ತು ದಬ್ಬಾಳಿಕೆಯಿಂದಾಗಿ ಸುಮಾರು 122 ದಲಿತ, ಆದಿವಾಸಿ ಒಬಿಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಾವುಗಳನ್ನು ತಡೆಯಲು ರಾಜ್ಯದಲ್ಲಿ ರೋಹಿತ್ ಕಾಯ್ದೆ ಜಾರಿಯಾಗಲೇಬೇಕು” ಎಂದರು.

ಕೆ.ಪಿ. ಅಶ್ವಿನಿ ಮಾತನಾಡಿ “ರೋಹಿತ್ ವೇಮುಲಾ ಅವರ ಸಾಂಸ್ಥಿಕ ಹತ್ಯೆಯನ್ನು ಸಾಧ್ಯವಾದಷ್ಟು ಕಠಿಣವಾಗಿ ಖಂಡಿಸಬೇಕು. ರಾಜ್ಯ ಮತ್ತು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ, ವಿದ್ಯಾರ್ಥಿಗಳು ಹೇಳಲಾಗದ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿರಲಿ, ಜಾತಿ ತಾರತಮ್ಯದ ಬಗ್ಗೆ ಮಾತನಾಡಲು ಅವಕಾಶವೇ ಇಲ್ಲ . ಜಾತಿ ತಾರತಮ್ಯವು ಹಿಂದಿನಕಾಲದ ಸಮಸ್ಯೆ ಎಂಬ ಅಭಿಪ್ರಾಯದಲ್ಲಿ ಜನರು ಬದುಕುತ್ತಿದ್ದಾರೆ. ಆದರೆ, ಅದು ನಿಜವಲ್ಲ. ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ, ಸಾಮಾಜಿಕ ಮತ್ತು ಆರ್ಥಿಕ ಚಲನಶೀಲತೆಯನ್ನು ಪಡೆಯಲು ಶಿಕ್ಷಣವು ಏಕೈಕ ಮಾರ್ಗವಾಗಿದೆ. ಅದನ್ನು ಸಹ ನಮ್ಮಿಂದ ಕಸಿದುಕೊಳ್ಳಲಾಗುತ್ತಿದೆ. ದೌರ್ಜನ್ಯ ತಡೆ ಕಾಯ್ದೆಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ಪರಿಹರಿಸಲು ಯಾವುದೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿಲ್ಲದ ಕಾರಣ ನಾವು ಪ್ರತ್ಯೇಕ ಕಾನೂನಿಗೆ ಒತ್ತಾಯಿಸುತ್ತಿದ್ದೇವೆ. ಶಿಕ್ಷಣವು ಪ್ರಗತಿಪರ ಸ್ಥಳವಾಗಿರಬೇಕು. ಏಪ್ರಿಲ್ 14 ರ ಮೊದಲು, ರಾಜ್ಯ ಸರ್ಕಾರವು ರೋಹಿತ್ ಕಾಯ್ದೆಯ ಬಗ್ಗೆ ಚರ್ಚಿಸಲು ಕನಿಷ್ಠ ಒಂದು ಸಮಿತಿಯನ್ನು ರಚಿಸಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀಪಾದ್ ಭಟ್ ಮಾತನಾಡಿ, “ರಾಜ್ಯ ಸರ್ಕಾರವು ಎಸ್‌ಸಿ/ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವ ಮೂಲಕ ಅಂಚಿನಲ್ಲಿರುವ ವರ್ಗಗಳಿಗೆ ತನ್ನ ಬದ್ಧತೆಯನ್ನು ತೋರಿಸಬೇಕು. ಇತ್ತೀಚೆಗೆ, ಯುಜಿಸಿ ಕರಡು ತಾರತಮ್ಯ ವಿರೋಧಿ ನಿಯಂತ್ರಣವನ್ನು ಮಂಡಿಸಿತು. ಆದರೆ, ಈ ಕರಡು ಜಾತಿ, ಲಿಂಗ, ಧರ್ಮದ ತಾರತಮ್ಯವನ್ನು ಒಟ್ಟಿಗೆ ನೋಡುತ್ತದೆ. ಈ ಎಲ್ಲ ತಾರತಮ್ಯಗಳನ್ನು ನಿಯಂತ್ರಿಸಬೇಕು. ಆದರೆ, ಜಾತಿ ತಾರತಮ್ಯವನ್ನು ನಿರ್ದಿಷ್ಟ ಗಮನದಿಂದ ನೋಡಬೇಕು ಮತ್ತು ನಿರ್ದಿಷ್ಟವಾಗಿ ಪರಿಹರಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಯುಜಿಸಿ ಕರಡು ಈ ದೃಷ್ಟಿಕೋನವನ್ನು ದುರ್ಬಲಗೊಳಿಸುತ್ತದೆ. ಈ ಕಾಯ್ದೆಯ ಜೊತೆಗೆ, ನಾವು ವಿಶ್ವವಿದ್ಯಾಲಯಗಳಲ್ಲಿನ ರೋಸ್ಟರ್ ಪಾಯಿಂಟ್ ವ್ಯವಸ್ಥೆಯನ್ನು ಗಂಭೀರವಾಗಿ ಮರುಪರಿಶೀಲಿಸಬೇಕು. ನಾವು ಕಾಯ್ದೆಯ ಮೇಲೆ ಮಾತ್ರ ಗಮನಹರಿಸಲು ಸಾಧ್ಯವಿಲ್ಲ. ಆದರೆ, ಯುಜಿಸಿ ಏನು ಮಾಡುತ್ತಿದೆ ಎಂಬುದನ್ನು ನೋಡಲು ಮತ್ತು ಅದಕ್ಕೆ ಪ್ರತಿಕ್ರಿಯಿಸುತ್ತಲೇ ಇರಲು ಸಾಧ್ಯವಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...