Homeಕರ್ನಾಟಕರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು - ಸಿದ್ದರಾಮಯ್ಯ

ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು- ಸಿದ್ದರಾಮಯ್ಯ

- Advertisement -
- Advertisement -

“ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಕಾಮನ್‍ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ “ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ” ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ” ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ” ಎಂದು ಹೇಳಿದರು.

 

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಹೇಳಿದರು.

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದು ವಿವರಿಸಿದರು.

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.


ಇದನ್ನೂ ಓದಿ: ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...