Homeಕರ್ನಾಟಕರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು - ಸಿದ್ದರಾಮಯ್ಯ

ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು- ಸಿದ್ದರಾಮಯ್ಯ

- Advertisement -
- Advertisement -

“ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಕಾಮನ್‍ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ “ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ” ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ” ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ” ಎಂದು ಹೇಳಿದರು.

 

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಹೇಳಿದರು.

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದು ವಿವರಿಸಿದರು.

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.


ಇದನ್ನೂ ಓದಿ: ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...