Homeಕರ್ನಾಟಕರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು - ಸಿದ್ದರಾಮಯ್ಯ

ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು- ಸಿದ್ದರಾಮಯ್ಯ

- Advertisement -
- Advertisement -

“ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಕಾಮನ್‍ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ “ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ” ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ” ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ” ಎಂದು ಹೇಳಿದರು.

 

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಹೇಳಿದರು.

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದು ವಿವರಿಸಿದರು.

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.


ಇದನ್ನೂ ಓದಿ: ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...