Homeಕರ್ನಾಟಕರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು - ಸಿದ್ದರಾಮಯ್ಯ

ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು- ಸಿದ್ದರಾಮಯ್ಯ

- Advertisement -
- Advertisement -

“ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಕಾಮನ್‍ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ “ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ” ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ” ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ” ಎಂದು ಹೇಳಿದರು.

 

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಹೇಳಿದರು.

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದು ವಿವರಿಸಿದರು.

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.


ಇದನ್ನೂ ಓದಿ: ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...