Homeಕರ್ನಾಟಕರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು - ಸಿದ್ದರಾಮಯ್ಯ

ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು- ಸಿದ್ದರಾಮಯ್ಯ

- Advertisement -
- Advertisement -

“ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಕಾಮನ್‍ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ “ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ” ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ” ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ” ಎಂದು ಹೇಳಿದರು.

 

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಹೇಳಿದರು.

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದು ವಿವರಿಸಿದರು.

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.


ಇದನ್ನೂ ಓದಿ: ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...