Homeಕರೋನಾ ತಲ್ಲಣವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ.ಗಳ ಅವ್ಯವಹಾರ ನಡೆದಿದ್ದು ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆಯೆಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು.

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.
ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ.

ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ.

ರಾಜ್ಯದಲ್ಲಿ 9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ. ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಎಚ್ಚರಿಸಿದ್ದಾರೆ.


ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...