Homeಕರೋನಾ ತಲ್ಲಣವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ.ಗಳ ಅವ್ಯವಹಾರ ನಡೆದಿದ್ದು ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆಯೆಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು.

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.
ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ.

ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ.

ರಾಜ್ಯದಲ್ಲಿ 9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ. ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಎಚ್ಚರಿಸಿದ್ದಾರೆ.


ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...