Homeಕರೋನಾ ತಲ್ಲಣವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ.ಗಳ ಅವ್ಯವಹಾರ ನಡೆದಿದ್ದು ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆಯೆಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು.

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.
ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ.

ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ.

ರಾಜ್ಯದಲ್ಲಿ 9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ. ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಎಚ್ಚರಿಸಿದ್ದಾರೆ.


ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...