Homeಕರೋನಾ ತಲ್ಲಣವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರ; ಶ್ವೇತಪತ್ರ ಹೊರಡಿಸಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ.ಗಳ ಅವ್ಯವಹಾರ ನಡೆದಿದ್ದು ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆಯೆಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು.

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕೊರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.
ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕೊರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕೊರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ.

ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ.

ರಾಜ್ಯದಲ್ಲಿ 9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ. ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ತಕ್ಷಣ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಎಚ್ಚರಿಸಿದ್ದಾರೆ.


ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...