Homeಮುಖಪುಟ'ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಇರಲಿಲ್ಲ..'; ರಾಹುಲ್ ಗಾಂಧಿ

‘ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಇರಲಿಲ್ಲ..’; ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಹತ್ರಾಸ್‌ಗೆ ಭೇಟಿ ನೀಡಿ, ಕಾಲ್ತುಳಿತದಿಂದ ಮೃತಪಟ್ಟ ಹಾಗೂ ಗಾಯಗೊಂಡ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು. “ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಲ್ಲ ಎಂದು ಮೃತರ ಸಂಬಂಧಿಕರು ಹೇಳಿದ್ದು, ಕಾಲ್ತುಳಿತಕ್ಕೆ ಕಾರಣವಾಯಿತು” ಎಂದು ಅವರು ಹೇಳಿದರು.

ಮಂಗಳವಾರ ಹತ್ರಾಸ್ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ್ದು, ಹೆಚ್ಚಾಗಿ ಮಹಿಳೆಯರು ಬಳಿಯಾಗಿದ್ದಾರೆ.

“ದುರಂತವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ; ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.

“ಇದೊಂದು ದುಃಖದ ಘಟನೆ; ಹಲವಾರು ಜನರು ಸಾವನ್ನಪ್ಪಿದ್ದಾರೆ. ನಾನು ಇದನ್ನು ರಾಜಕೀಯ ದೃಷ್ಟಿಕೋನದಿಂದ ಹೇಳಲು ಬಯಸುವುದಿಲ್ಲ. ಆದರೆ, ಆಡಳಿತದ ಕಡೆಯಿಂದ ಲೋಪಗಳಿವೆ, ಮುಖ್ಯ ವಿಷಯವೆಂದರೆ ಅವರು ಬಡವರಾಗಿರುವುದರಿಂದ ಗರಿಷ್ಠ ಪರಿಹಾರವನ್ನು ನೀಡಬೇಕು. ಪರಿಹಾರದಲ್ಲಿ ವಿಳಂಬವಾದರೆ, ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ನಾನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೇಳುತ್ತೇನೆ. ನಾನು ಸತ್ತವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದೇನೆ, ಅವರು ಆಘಾತಕ್ಕೊಳಗಾಗಿದ್ದಾರೆ ಮತ್ತು ನಾನು ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ” ಎಂದು ಅವರು ಭೇಟಿಯ ನಂತರ ಹೇಳಿದರು.

ರಾಹುಲ್ ಗಾಂಧಿಯವರ ಜೊತೆಗಿದ್ದ ಕಾಂಗ್ರೆಸ್ ನಾಯಕ ಡ್ಯಾನಿಶ್ ಅಲಿ, ಯುಪಿ ಸರ್ಕಾರವು ದುರಂತವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಹೇಳಿದರು.

“ಇದೊಂದು ದುರದೃಷ್ಟಕರ ಘಟನೆ. ನಾವು ಬೆಳಗ್ಗೆ 5 ಗಂಟೆಗೆ ರಾಹುಲ್ ಗಾಂಧಿ ಅವರೊಂದಿಗೆ ಹೊರಟೆವು. ಸಂತ್ರಸ್ತರ ಕಥೆಗಳು ಹೃದಯ ವಿದ್ರಾವಕವಾಗಿವೆ… ಆಡಳಿತದ ಯಾವುದೇ ಜವಾಬ್ದಾರಿಯನ್ನು ನಿಗದಿಪಡಿಸಲಾಗಿಲ್ಲ ಅಥವಾ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ” ಎಂದು ಅವರು ಹೇಳಿದರು.

ಭೋಲೆ ಬಾಬಾ ಅವರಿಗೆ ಅರ್ಪಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯ ಆರು ಸಂಘಟಕರನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಅಚ್ಚರಿ ಎಂದರೆ, ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರಿಲ್ಲ.

ಶುಕ್ರವಾರ ಬೆಳಗ್ಗೆ ರಾಹುಲ್ ಗಾಂಧಿ ಹತ್ರಾಸ್‌ಗೆ ತೆರಳಿದರು. ದಾರಿಯಲ್ಲಿ ಎರಡು ಅಲಿಗಢ್ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕಾಲ್ತುಳಿತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಭೇಟಿ ಮಾಡಿದರು.

ಇದನ್ನೂ ಓದಿ; ಅಲಿಘರ್‌ನ ಪಿಲಾಖ್ನಾ ಗ್ರಾಮದಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...