Homeಕರ್ನಾಟಕಶೌಚಾಲಯದಲ್ಲಿ ಹಿಡನ್ ಕ್ಯಾಮರ ಇರಲಿಲ್ಲ, ಸುಳ್ಳು ಸುದ್ದಿ ಹರಡಲಾಗುತ್ತಿದೆ: ಖುಷ್ಬೂ ಸುಂದರ್

ಶೌಚಾಲಯದಲ್ಲಿ ಹಿಡನ್ ಕ್ಯಾಮರ ಇರಲಿಲ್ಲ, ಸುಳ್ಳು ಸುದ್ದಿ ಹರಡಲಾಗುತ್ತಿದೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮರ ಇರಲಿಲ್ಲ, ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಖುಷ್ಬೂ ಸುಂದರ್ ರಾಷ್ಟ್ರೀಯ ಮಹಿಳಾ ಆಯೋಗದ ಪ್ರತಿನಿಧಿ ಖುಷ್ಬೂ ಸುಂದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಮಾತನಾಡಿರುವ ಅವರು, “ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬ ವದಂತಿ ಹರಡಿದೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸುಳ್ಳು ವೀಡಿಯೋ ಹರಿದಾಡುತ್ತಿದೆ. ಇದೊಂದು ಶೈಕ್ಷಣಿಕ ಸಂಸ್ಥೆ. ಹಾಗಾಗಿ ಹಿಡನ್‌ ಕ್ಯಾಮೆರಾಗಳು ಇರಲು ಸಾಧ್ಯವಿಲ್ಲ” ಎಂದಿದ್ದಾರೆ.

ಯಾರಾದರೂ ಆರೋಪ ಮಾಡಿದ್ದಾರೆ ಎಂಬ ಕಾರಣಕ್ಕೆ ಅದನ್ನು ನಾವು ಪುರಸ್ಕರಿಸಲು ಆಗಲ್ಲ. ನಮಗೆ ದಾಖಲೆಗಳು ಬೇಕು. ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕು ಎಂದು ಖುಷ್ಬೂ ತಿಳಿಸಿದರು.

‘ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬುದು ಕೇವಲ ವದಂತಿಯಷ್ಟೇ. ಮಾಧ್ಯಮದವರೂ ಕೂಡ ಇದೇ ವದಂತಿಯನ್ನು ನಂಬಿಕೊಂಡು ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಇದು ಬೇಸರ ತರಿಸುತ್ತಿದೆ. ಈ ಪ್ರಕರಣದ ಕುರಿತು ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಕಾಲೇಜಿನಲ್ಲಿ ನಾಲ್ಕು ಗಂಟೆ ತಪಾಸಣೆ ನಡೆಸಿಯೂ ಏನೂ ಸಿಕ್ಕಿಲ್ಲವೇ ಎಂದು ಕೇಳಿದ ಪತ್ರಕರ್ತನಿಗೆ ಉತ್ತರ ನೀಡಿದ ಖುಷ್ಬೂ ಸುಂದರ್, ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಇದು ವಿದ್ಯಾರ್ಥಿಗಳ ಬಗೆಗಿನ ವಿಷಯ. ಮಹಿಳೆಯರ ವಿಚಾರ. ಎಲ್ಲರೂ ತಾಳ್ಮೆಯಿಂದ ವರ್ತಿಸಬೇಕು. ಇದು ಎರಡು ನಿಮಿಷದಲ್ಲಿ ತಯಾರಾಗುವ ನೂಡಲ್ಸ್ ಅಲ್ಲ” ಎಂದು ಖಡಕ್ ಆಗಿಯೇ ಉತ್ತರಿಸಿದರು.

‘ರಾಷ್ಟ್ರೀಯ ಮಹಿಳಾ ಆಯೋಗವು ಪೊಲೀಸರೊಂದಿಗೆ ಸೇರಿ ಕೆಲಸ ಮಾಡುತ್ತಿದೆ. ನಾವೂ ಕೂಡ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಮೊಬೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದೇವೆ. ಹಾಗಾಗಿ ಯಾವುದೇ ಮಾಹಿತಿಗಳನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಅವರು, ‘ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ’ ಎಂದಿದ್ದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ತಿಳಿಸಿದ್ದರು.

ಕಾಲೇಜಿನ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್, ಆಡಳಿತಾಧಿಕಾರಿಗಳು, ಸಂತ್ರಸ್ತೆ ಹಾಗೂ ಪೊಲೀಸರು ಸೇರಿದಂತೆ ಹಲವು ಜನರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...