Homeಕರ್ನಾಟಕಶೌಚಾಲಯದಲ್ಲಿ ಹಿಡನ್ ಕ್ಯಾಮರ ಇರಲಿಲ್ಲ, ಸುಳ್ಳು ಸುದ್ದಿ ಹರಡಲಾಗುತ್ತಿದೆ: ಖುಷ್ಬೂ ಸುಂದರ್

ಶೌಚಾಲಯದಲ್ಲಿ ಹಿಡನ್ ಕ್ಯಾಮರ ಇರಲಿಲ್ಲ, ಸುಳ್ಳು ಸುದ್ದಿ ಹರಡಲಾಗುತ್ತಿದೆ: ಖುಷ್ಬೂ ಸುಂದರ್

- Advertisement -
- Advertisement -

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮರ ಇರಲಿಲ್ಲ, ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಖುಷ್ಬೂ ಸುಂದರ್ ರಾಷ್ಟ್ರೀಯ ಮಹಿಳಾ ಆಯೋಗದ ಪ್ರತಿನಿಧಿ ಖುಷ್ಬೂ ಸುಂದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಮಾತನಾಡಿರುವ ಅವರು, “ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬ ವದಂತಿ ಹರಡಿದೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಸುಳ್ಳು ವೀಡಿಯೋ ಹರಿದಾಡುತ್ತಿದೆ. ಇದೊಂದು ಶೈಕ್ಷಣಿಕ ಸಂಸ್ಥೆ. ಹಾಗಾಗಿ ಹಿಡನ್‌ ಕ್ಯಾಮೆರಾಗಳು ಇರಲು ಸಾಧ್ಯವಿಲ್ಲ” ಎಂದಿದ್ದಾರೆ.

ಯಾರಾದರೂ ಆರೋಪ ಮಾಡಿದ್ದಾರೆ ಎಂಬ ಕಾರಣಕ್ಕೆ ಅದನ್ನು ನಾವು ಪುರಸ್ಕರಿಸಲು ಆಗಲ್ಲ. ನಮಗೆ ದಾಖಲೆಗಳು ಬೇಕು. ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕು ಎಂದು ಖುಷ್ಬೂ ತಿಳಿಸಿದರು.

‘ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ ಇದೆ ಎಂಬುದು ಕೇವಲ ವದಂತಿಯಷ್ಟೇ. ಮಾಧ್ಯಮದವರೂ ಕೂಡ ಇದೇ ವದಂತಿಯನ್ನು ನಂಬಿಕೊಂಡು ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಇದು ಬೇಸರ ತರಿಸುತ್ತಿದೆ. ಈ ಪ್ರಕರಣದ ಕುರಿತು ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಕಾಲೇಜಿನಲ್ಲಿ ನಾಲ್ಕು ಗಂಟೆ ತಪಾಸಣೆ ನಡೆಸಿಯೂ ಏನೂ ಸಿಕ್ಕಿಲ್ಲವೇ ಎಂದು ಕೇಳಿದ ಪತ್ರಕರ್ತನಿಗೆ ಉತ್ತರ ನೀಡಿದ ಖುಷ್ಬೂ ಸುಂದರ್, ‘ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಇದು ವಿದ್ಯಾರ್ಥಿಗಳ ಬಗೆಗಿನ ವಿಷಯ. ಮಹಿಳೆಯರ ವಿಚಾರ. ಎಲ್ಲರೂ ತಾಳ್ಮೆಯಿಂದ ವರ್ತಿಸಬೇಕು. ಇದು ಎರಡು ನಿಮಿಷದಲ್ಲಿ ತಯಾರಾಗುವ ನೂಡಲ್ಸ್ ಅಲ್ಲ” ಎಂದು ಖಡಕ್ ಆಗಿಯೇ ಉತ್ತರಿಸಿದರು.

‘ರಾಷ್ಟ್ರೀಯ ಮಹಿಳಾ ಆಯೋಗವು ಪೊಲೀಸರೊಂದಿಗೆ ಸೇರಿ ಕೆಲಸ ಮಾಡುತ್ತಿದೆ. ನಾವೂ ಕೂಡ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಮೊಬೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದೇವೆ. ಹಾಗಾಗಿ ಯಾವುದೇ ಮಾಹಿತಿಗಳನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಅವರು, ‘ಉಡುಪಿ ಪ್ರಕರಣವನ್ನು ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ’ ಎಂದಿದ್ದರು.

ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ತಿಳಿಸಿದ್ದರು.

ಕಾಲೇಜಿನ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್, ಆಡಳಿತಾಧಿಕಾರಿಗಳು, ಸಂತ್ರಸ್ತೆ ಹಾಗೂ ಪೊಲೀಸರು ಸೇರಿದಂತೆ ಹಲವು ಜನರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ ಪ್ರಕರಣ ರಾಜಕೀಕರಣಗೊಳಿಸಬೇಡಿ, ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ: ಖುಷ್ಬೂ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...