Homeಮುಖಪುಟ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ - ಕಮಲ್ ಹಾಸನ್

‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

- Advertisement -
- Advertisement -

ಐತಿಹಾಸಿಕ ಚೋಳ ಸಾಮ್ರಾಜ್ಯದ ಖ್ಯಾತ ಸಾಮ್ರಾಟ ‘ರಾಜ ರಾಜ ಚೋಳ’ ಹಿಂದೂ ರಾಜನೇ ಎಂಬ ಚರ್ಚೆಗೆ ಹಿರಿಯ ನಟ ಕಮಲ್ ಹಾಸನ್ ಅವರು ಕೂಡಾ ಸೇರಿಕೊಂಡಿದ್ದು, “ಅವನು ಹಿಂದೂ ರಾಜ ಅಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಮೂಲಕ ತಮಿಳು ಚಲನಚಿತ್ರ ನಿರ್ದೇಶಕ ವೆಟ್ರಿಮಾರನ್ ಅವರ ವಾದವನ್ನು ಕಮಲ್ ಹಾಸನ್ ಬೆಂಬಲಿಸಿದ್ದಾರೆ.

“ರಾಜ ರಾಜ ಚೋಳ ಹಿಂದೂ ರಾಜನಲ್ಲ ಮತ್ತು ಹಿಂದೂ ಧರ್ಮ”ದ ಬಗ್ಗೆ ಹಲವು ದಿನಗಳಿಂದ ತಮಿಳುನಾಡಿನದಲ್ಲಿ ಚರ್ಚೆ ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊನ್ನಿಯಿನ್ ಸೆಲ್ವನ್” ಚಲನಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ದೇಶಕ ವೆಟ್ರಿಮಾರನ್,“ರಾಜ ರಾಜ ಚೋಜ್ಲಾನ್ ಹಿಂದೂ ಅಲ್ಲ. ತಿರುವಳ್ಳುವರ್ ಅವರನ್ನು ಕೇಸರಿಕರಣ ಮಾಡಲು ಪ್ರಯತ್ನಿಸಿದ ಬಿಜೆಪಿ ‘ನಮ್ಮ ಅಸ್ಮಿತೆ’ಯನ್ನು ಕದಿಯಲು ಪ್ರಯತ್ನಿಸುತ್ತಿದೆ” ಎಂದು ಪ್ರತಿಪಾದಿಸಿದ್ದರು. ‘ನಾವು ಅದನ್ನು ಎಂದಿಗೂ ಅನುಮತಿಸಬಾರದು’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ವೆಟ್ರಿಮಾರನ್ ಅವರ ಹೇಳಿಕೆಯನ್ನು ಬೆಂಬಲಿಸಿದ ಕಮಲ್ ಹಾಸನ್‌, ರಾಜ ರಾಜ ಚೋಳನ ಕಾಲದಲ್ಲಿ ‘ಹಿಂದೂ ಧರ್ಮ’ ಇರಲಿಲ್ಲ, ಆದರೆ ವೈನವಂ, ಶಿವಂ ಮತ್ತು ಸಮಾನಂ ಇತ್ತು ಎಂದು  ಹೇಳಿದ್ದಾರೆ.

ಬ್ರಿಟಿಷರು ತುತ್ತುಕುಡಿಯನ್ನು ಟುಟಿಕೋರಿನ್ ಆಗಿ ಹೇಗೆ ಬದಲಾಯಿಸಿದರೋ ಅದೇ ರೀತಿ ಒಂದು ಸಾಮೂಹಿಕ ಪದವನ್ನು ಉಲ್ಲೇಖಿಸಲು ‘ಹಿಂದೂ’ ಪದವನ್ನು ಸೃಷ್ಟಿಸಿದರು ಎಂದು ಅವರು ಹೇಳಿದ್ದಾರೆ.

ವೆಟ್ರಿಮಾರನ್‌ ಅವರ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹೆಚ್.ರಾಜಾ, ‘ರಾಜ ರಾಜ ಚೋಳ ನಿಜವಾಗಿಯೂ ಹಿಂದೂ ರಾಜ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ರಾಜ ರಾಜ ಚೋಳನು ನಿರ್ಮಿಸಿದ ಎರಡು ಚರ್ಚ್ ಮತ್ತು ಮಸೀದಿಗಳನ್ನು ತೋರಿಸುವಂತೆ ಎಚ್ ರಾಜಾ ಅವರು ವೆಟ್ರಿಮಾರನ್‌ ಅವರಿಗೆ ಕೇಳಿದ್ದಾರೆ. ರಾಜ ರಾಜ ಚೋಳನನ್ನು ಶಿವಪಾದ ಶೇಖರನ್ ಎಂದು ಕರೆದ ಅವರು, ‘ಹಾಗಾದರೆ, ಆತ ಹಿಂದೂ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳು ಯಾವತ್ತೂ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಹೇಳುವ ಸುಳ್ಳುಗಳನ್ನು ನಾವು ನಿಜ ಎಂದು ನಂಬಿದ್ದೇವೆ. ಇನ್ನು ಮುಂದಾದರೂ ನಾವು ಜಾಗೃತರಾಗಿ, ಸತ್ಯವನ್ನು ಪ್ರತಿಪಾದಿಸಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...