Homeಮುಖಪುಟ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ - ಕಮಲ್ ಹಾಸನ್

‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

- Advertisement -
- Advertisement -

ಐತಿಹಾಸಿಕ ಚೋಳ ಸಾಮ್ರಾಜ್ಯದ ಖ್ಯಾತ ಸಾಮ್ರಾಟ ‘ರಾಜ ರಾಜ ಚೋಳ’ ಹಿಂದೂ ರಾಜನೇ ಎಂಬ ಚರ್ಚೆಗೆ ಹಿರಿಯ ನಟ ಕಮಲ್ ಹಾಸನ್ ಅವರು ಕೂಡಾ ಸೇರಿಕೊಂಡಿದ್ದು, “ಅವನು ಹಿಂದೂ ರಾಜ ಅಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಮೂಲಕ ತಮಿಳು ಚಲನಚಿತ್ರ ನಿರ್ದೇಶಕ ವೆಟ್ರಿಮಾರನ್ ಅವರ ವಾದವನ್ನು ಕಮಲ್ ಹಾಸನ್ ಬೆಂಬಲಿಸಿದ್ದಾರೆ.

“ರಾಜ ರಾಜ ಚೋಳ ಹಿಂದೂ ರಾಜನಲ್ಲ ಮತ್ತು ಹಿಂದೂ ಧರ್ಮ”ದ ಬಗ್ಗೆ ಹಲವು ದಿನಗಳಿಂದ ತಮಿಳುನಾಡಿನದಲ್ಲಿ ಚರ್ಚೆ ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊನ್ನಿಯಿನ್ ಸೆಲ್ವನ್” ಚಲನಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ದೇಶಕ ವೆಟ್ರಿಮಾರನ್,“ರಾಜ ರಾಜ ಚೋಜ್ಲಾನ್ ಹಿಂದೂ ಅಲ್ಲ. ತಿರುವಳ್ಳುವರ್ ಅವರನ್ನು ಕೇಸರಿಕರಣ ಮಾಡಲು ಪ್ರಯತ್ನಿಸಿದ ಬಿಜೆಪಿ ‘ನಮ್ಮ ಅಸ್ಮಿತೆ’ಯನ್ನು ಕದಿಯಲು ಪ್ರಯತ್ನಿಸುತ್ತಿದೆ” ಎಂದು ಪ್ರತಿಪಾದಿಸಿದ್ದರು. ‘ನಾವು ಅದನ್ನು ಎಂದಿಗೂ ಅನುಮತಿಸಬಾರದು’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ವೆಟ್ರಿಮಾರನ್ ಅವರ ಹೇಳಿಕೆಯನ್ನು ಬೆಂಬಲಿಸಿದ ಕಮಲ್ ಹಾಸನ್‌, ರಾಜ ರಾಜ ಚೋಳನ ಕಾಲದಲ್ಲಿ ‘ಹಿಂದೂ ಧರ್ಮ’ ಇರಲಿಲ್ಲ, ಆದರೆ ವೈನವಂ, ಶಿವಂ ಮತ್ತು ಸಮಾನಂ ಇತ್ತು ಎಂದು  ಹೇಳಿದ್ದಾರೆ.

ಬ್ರಿಟಿಷರು ತುತ್ತುಕುಡಿಯನ್ನು ಟುಟಿಕೋರಿನ್ ಆಗಿ ಹೇಗೆ ಬದಲಾಯಿಸಿದರೋ ಅದೇ ರೀತಿ ಒಂದು ಸಾಮೂಹಿಕ ಪದವನ್ನು ಉಲ್ಲೇಖಿಸಲು ‘ಹಿಂದೂ’ ಪದವನ್ನು ಸೃಷ್ಟಿಸಿದರು ಎಂದು ಅವರು ಹೇಳಿದ್ದಾರೆ.

ವೆಟ್ರಿಮಾರನ್‌ ಅವರ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹೆಚ್.ರಾಜಾ, ‘ರಾಜ ರಾಜ ಚೋಳ ನಿಜವಾಗಿಯೂ ಹಿಂದೂ ರಾಜ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ರಾಜ ರಾಜ ಚೋಳನು ನಿರ್ಮಿಸಿದ ಎರಡು ಚರ್ಚ್ ಮತ್ತು ಮಸೀದಿಗಳನ್ನು ತೋರಿಸುವಂತೆ ಎಚ್ ರಾಜಾ ಅವರು ವೆಟ್ರಿಮಾರನ್‌ ಅವರಿಗೆ ಕೇಳಿದ್ದಾರೆ. ರಾಜ ರಾಜ ಚೋಳನನ್ನು ಶಿವಪಾದ ಶೇಖರನ್ ಎಂದು ಕರೆದ ಅವರು, ‘ಹಾಗಾದರೆ, ಆತ ಹಿಂದೂ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳು ಯಾವತ್ತೂ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಹೇಳುವ ಸುಳ್ಳುಗಳನ್ನು ನಾವು ನಿಜ ಎಂದು ನಂಬಿದ್ದೇವೆ. ಇನ್ನು ಮುಂದಾದರೂ ನಾವು ಜಾಗೃತರಾಗಿ, ಸತ್ಯವನ್ನು ಪ್ರತಿಪಾದಿಸಬೇಕು.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...