Homeಮುಖಪುಟ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ - ಕಮಲ್ ಹಾಸನ್

‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

- Advertisement -
- Advertisement -

ಐತಿಹಾಸಿಕ ಚೋಳ ಸಾಮ್ರಾಜ್ಯದ ಖ್ಯಾತ ಸಾಮ್ರಾಟ ‘ರಾಜ ರಾಜ ಚೋಳ’ ಹಿಂದೂ ರಾಜನೇ ಎಂಬ ಚರ್ಚೆಗೆ ಹಿರಿಯ ನಟ ಕಮಲ್ ಹಾಸನ್ ಅವರು ಕೂಡಾ ಸೇರಿಕೊಂಡಿದ್ದು, “ಅವನು ಹಿಂದೂ ರಾಜ ಅಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಮೂಲಕ ತಮಿಳು ಚಲನಚಿತ್ರ ನಿರ್ದೇಶಕ ವೆಟ್ರಿಮಾರನ್ ಅವರ ವಾದವನ್ನು ಕಮಲ್ ಹಾಸನ್ ಬೆಂಬಲಿಸಿದ್ದಾರೆ.

“ರಾಜ ರಾಜ ಚೋಳ ಹಿಂದೂ ರಾಜನಲ್ಲ ಮತ್ತು ಹಿಂದೂ ಧರ್ಮ”ದ ಬಗ್ಗೆ ಹಲವು ದಿನಗಳಿಂದ ತಮಿಳುನಾಡಿನದಲ್ಲಿ ಚರ್ಚೆ ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊನ್ನಿಯಿನ್ ಸೆಲ್ವನ್” ಚಲನಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ದೇಶಕ ವೆಟ್ರಿಮಾರನ್,“ರಾಜ ರಾಜ ಚೋಜ್ಲಾನ್ ಹಿಂದೂ ಅಲ್ಲ. ತಿರುವಳ್ಳುವರ್ ಅವರನ್ನು ಕೇಸರಿಕರಣ ಮಾಡಲು ಪ್ರಯತ್ನಿಸಿದ ಬಿಜೆಪಿ ‘ನಮ್ಮ ಅಸ್ಮಿತೆ’ಯನ್ನು ಕದಿಯಲು ಪ್ರಯತ್ನಿಸುತ್ತಿದೆ” ಎಂದು ಪ್ರತಿಪಾದಿಸಿದ್ದರು. ‘ನಾವು ಅದನ್ನು ಎಂದಿಗೂ ಅನುಮತಿಸಬಾರದು’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ವೆಟ್ರಿಮಾರನ್ ಅವರ ಹೇಳಿಕೆಯನ್ನು ಬೆಂಬಲಿಸಿದ ಕಮಲ್ ಹಾಸನ್‌, ರಾಜ ರಾಜ ಚೋಳನ ಕಾಲದಲ್ಲಿ ‘ಹಿಂದೂ ಧರ್ಮ’ ಇರಲಿಲ್ಲ, ಆದರೆ ವೈನವಂ, ಶಿವಂ ಮತ್ತು ಸಮಾನಂ ಇತ್ತು ಎಂದು  ಹೇಳಿದ್ದಾರೆ.

ಬ್ರಿಟಿಷರು ತುತ್ತುಕುಡಿಯನ್ನು ಟುಟಿಕೋರಿನ್ ಆಗಿ ಹೇಗೆ ಬದಲಾಯಿಸಿದರೋ ಅದೇ ರೀತಿ ಒಂದು ಸಾಮೂಹಿಕ ಪದವನ್ನು ಉಲ್ಲೇಖಿಸಲು ‘ಹಿಂದೂ’ ಪದವನ್ನು ಸೃಷ್ಟಿಸಿದರು ಎಂದು ಅವರು ಹೇಳಿದ್ದಾರೆ.

ವೆಟ್ರಿಮಾರನ್‌ ಅವರ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹೆಚ್.ರಾಜಾ, ‘ರಾಜ ರಾಜ ಚೋಳ ನಿಜವಾಗಿಯೂ ಹಿಂದೂ ರಾಜ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ರಾಜ ರಾಜ ಚೋಳನು ನಿರ್ಮಿಸಿದ ಎರಡು ಚರ್ಚ್ ಮತ್ತು ಮಸೀದಿಗಳನ್ನು ತೋರಿಸುವಂತೆ ಎಚ್ ರಾಜಾ ಅವರು ವೆಟ್ರಿಮಾರನ್‌ ಅವರಿಗೆ ಕೇಳಿದ್ದಾರೆ. ರಾಜ ರಾಜ ಚೋಳನನ್ನು ಶಿವಪಾದ ಶೇಖರನ್ ಎಂದು ಕರೆದ ಅವರು, ‘ಹಾಗಾದರೆ, ಆತ ಹಿಂದೂ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳು ಯಾವತ್ತೂ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಹೇಳುವ ಸುಳ್ಳುಗಳನ್ನು ನಾವು ನಿಜ ಎಂದು ನಂಬಿದ್ದೇವೆ. ಇನ್ನು ಮುಂದಾದರೂ ನಾವು ಜಾಗೃತರಾಗಿ, ಸತ್ಯವನ್ನು ಪ್ರತಿಪಾದಿಸಬೇಕು.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....