Homeಮುಖಪುಟ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ - ಕಮಲ್ ಹಾಸನ್

‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

- Advertisement -
- Advertisement -

ಐತಿಹಾಸಿಕ ಚೋಳ ಸಾಮ್ರಾಜ್ಯದ ಖ್ಯಾತ ಸಾಮ್ರಾಟ ‘ರಾಜ ರಾಜ ಚೋಳ’ ಹಿಂದೂ ರಾಜನೇ ಎಂಬ ಚರ್ಚೆಗೆ ಹಿರಿಯ ನಟ ಕಮಲ್ ಹಾಸನ್ ಅವರು ಕೂಡಾ ಸೇರಿಕೊಂಡಿದ್ದು, “ಅವನು ಹಿಂದೂ ರಾಜ ಅಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಮೂಲಕ ತಮಿಳು ಚಲನಚಿತ್ರ ನಿರ್ದೇಶಕ ವೆಟ್ರಿಮಾರನ್ ಅವರ ವಾದವನ್ನು ಕಮಲ್ ಹಾಸನ್ ಬೆಂಬಲಿಸಿದ್ದಾರೆ.

“ರಾಜ ರಾಜ ಚೋಳ ಹಿಂದೂ ರಾಜನಲ್ಲ ಮತ್ತು ಹಿಂದೂ ಧರ್ಮ”ದ ಬಗ್ಗೆ ಹಲವು ದಿನಗಳಿಂದ ತಮಿಳುನಾಡಿನದಲ್ಲಿ ಚರ್ಚೆ ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊನ್ನಿಯಿನ್ ಸೆಲ್ವನ್” ಚಲನಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ದೇಶಕ ವೆಟ್ರಿಮಾರನ್,“ರಾಜ ರಾಜ ಚೋಜ್ಲಾನ್ ಹಿಂದೂ ಅಲ್ಲ. ತಿರುವಳ್ಳುವರ್ ಅವರನ್ನು ಕೇಸರಿಕರಣ ಮಾಡಲು ಪ್ರಯತ್ನಿಸಿದ ಬಿಜೆಪಿ ‘ನಮ್ಮ ಅಸ್ಮಿತೆ’ಯನ್ನು ಕದಿಯಲು ಪ್ರಯತ್ನಿಸುತ್ತಿದೆ” ಎಂದು ಪ್ರತಿಪಾದಿಸಿದ್ದರು. ‘ನಾವು ಅದನ್ನು ಎಂದಿಗೂ ಅನುಮತಿಸಬಾರದು’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ವೆಟ್ರಿಮಾರನ್ ಅವರ ಹೇಳಿಕೆಯನ್ನು ಬೆಂಬಲಿಸಿದ ಕಮಲ್ ಹಾಸನ್‌, ರಾಜ ರಾಜ ಚೋಳನ ಕಾಲದಲ್ಲಿ ‘ಹಿಂದೂ ಧರ್ಮ’ ಇರಲಿಲ್ಲ, ಆದರೆ ವೈನವಂ, ಶಿವಂ ಮತ್ತು ಸಮಾನಂ ಇತ್ತು ಎಂದು  ಹೇಳಿದ್ದಾರೆ.

ಬ್ರಿಟಿಷರು ತುತ್ತುಕುಡಿಯನ್ನು ಟುಟಿಕೋರಿನ್ ಆಗಿ ಹೇಗೆ ಬದಲಾಯಿಸಿದರೋ ಅದೇ ರೀತಿ ಒಂದು ಸಾಮೂಹಿಕ ಪದವನ್ನು ಉಲ್ಲೇಖಿಸಲು ‘ಹಿಂದೂ’ ಪದವನ್ನು ಸೃಷ್ಟಿಸಿದರು ಎಂದು ಅವರು ಹೇಳಿದ್ದಾರೆ.

ವೆಟ್ರಿಮಾರನ್‌ ಅವರ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹೆಚ್.ರಾಜಾ, ‘ರಾಜ ರಾಜ ಚೋಳ ನಿಜವಾಗಿಯೂ ಹಿಂದೂ ರಾಜ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ರಾಜ ರಾಜ ಚೋಳನು ನಿರ್ಮಿಸಿದ ಎರಡು ಚರ್ಚ್ ಮತ್ತು ಮಸೀದಿಗಳನ್ನು ತೋರಿಸುವಂತೆ ಎಚ್ ರಾಜಾ ಅವರು ವೆಟ್ರಿಮಾರನ್‌ ಅವರಿಗೆ ಕೇಳಿದ್ದಾರೆ. ರಾಜ ರಾಜ ಚೋಳನನ್ನು ಶಿವಪಾದ ಶೇಖರನ್ ಎಂದು ಕರೆದ ಅವರು, ‘ಹಾಗಾದರೆ, ಆತ ಹಿಂದೂ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳು ಯಾವತ್ತೂ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಹೇಳುವ ಸುಳ್ಳುಗಳನ್ನು ನಾವು ನಿಜ ಎಂದು ನಂಬಿದ್ದೇವೆ. ಇನ್ನು ಮುಂದಾದರೂ ನಾವು ಜಾಗೃತರಾಗಿ, ಸತ್ಯವನ್ನು ಪ್ರತಿಪಾದಿಸಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....