Homeಮುಖಪುಟ'ಕಾರುಗಳ ಮೇಲೆ ಕಬ್ಬಿಣದ ಸರಳುಗಳು ಬಿದ್ದಾಗ ದೊಡ್ಡ ಶಬ್ದವಿರಲಿಲ್ಲ..'; ದೆಹಲಿ ವಿಮಾನ ನಿಲ್ದಾಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

‘ಕಾರುಗಳ ಮೇಲೆ ಕಬ್ಬಿಣದ ಸರಳುಗಳು ಬಿದ್ದಾಗ ದೊಡ್ಡ ಶಬ್ದವಿರಲಿಲ್ಲ..’; ದೆಹಲಿ ವಿಮಾನ ನಿಲ್ದಾಣದ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

- Advertisement -
- Advertisement -

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ನಲ್ಲಿ ಛಾವಣಿಯ ಒಂದು ಭಾಗದ ರಾಡ್‌ಗಳು ಕುಸಿದು ಬಿದ್ದಾಗ ಏನೂ ಮುರಿಯುವ ದೊಡ್ಡ ಶಬ್ದವಿರಲಿಲ್ಲ ಎಂದು ಘಟನೆಯ ಸ್ಥಳದಲ್ಲಿದ್ದ ಕ್ಯಾಬ್ ಚಾಲಕ ಶುಕ್ರವಾರ ತಿಳಿಸಿದ್ದಾರೆ.

ಸ್ಥಳದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ರಾಡ್‌ಗಳು ಬಿದ್ದ ನಂತರವೆ ಘಟನೆ ನಡೆದಿರುವ ಬಗ್ಗೆ ಜನರಿಗೆ ತಿಳಿಯಿತು. ಸ್ಥಳದಲ್ಲಿದ್ದವರು ಸಹಾಯಕ್ಕಾಗಿ ಕೂಗಿಕೊಂಡಿದ್ದರಿಂದ ಗೊಂದಲ ಉಂಟಾಯಿತು ಎಂದು ಅವರು ಹೇಳಿದರು.

ಶುಕ್ರವಾರ ದೆಹಲಿಯಲ್ಲಿ ಭಾರೀ ಮಳೆಯ ನಡುವೆ, ಟರ್ಮಿನಲ್-1 ನಿರ್ಗಮನ ಪ್ರದೇಶದಲ್ಲಿನ ಮೇಲ್ಛಾಣವಣಿಯು ಮುಂಜಾನೆ 5 ಗಂಟೆಯ ಸುಮಾರಿಗೆ ಕುಸಿದು, ಆರು ಮಂದಿ ಗಾಯಗೊಂಡಿದ್ದು; ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೇಲ್ಛಾವಣಿ ಕುಸಿದಿದ್ದರಿಂದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ ಕಾರುಗಳಿಗೆ ಹಾನಿಯಾಗಿದೆ.

ಘಟನೆ ನಡೆದಾಗ ಕಡಿಮೆ ಜನರು ಮತ್ತು ಕಡಿಮೆ ದಟ್ಟಣೆಯಿದ್ದರು ಎಂದು ಸ್ಥಳದಲ್ಲಿದ್ದ ಇನ್ನೊಬ್ಬ ಕ್ಯಾಬ್ ಚಾಲಕ ಹೇಳಿದರು.

ಕರ್ತವ್ಯದಲ್ಲಿದ್ದ ಹಲವಾರು ಸಿಆರ್‌ಪಿಎಫ್ ಸಿಬ್ಬಂದಿ ಕೂಡಲೇ ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಸ್ಥಳೀಯ ಪೊಲೀಸರಿಗೆ ಮತ್ತು ಅಗ್ನಿಶಾಮಕ ಇಲಾಖೆಗೆ ಎಚ್ಚರಿಕೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಬೀಮ್‌ಗಳು ತುಂಬಾ ಭಾರವಾಗಿರುವುದರಿಂದ, ನಾವು ಅಗ್ನಿಶಾಮಕ ಇಲಾಖೆಯನ್ನು ತಕ್ಷಣವೇ ‘ಅರ್ಥ್‌ ಮೂವರ್ಸ್‌’ ಕಳುಹಿಸಲು ಹೇಳಿದೆವು. ಅಗ್ನಿಶಾಮಕ ಟೆಂಡರ್‌ಗಳು ಮತ್ತು ಅವರ ಅಧಿಕಾರಿಗಳು ಸಹ 5.30 ರ ಸುಮಾರಿಗೆ ಯಂತ್ರಗಳೊಂದಿಗೆ ಸ್ಥಳಕ್ಕೆ ತಲುಪಿದರು” ಎಂದು ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೇಳಿದರು.

ಉಪ ಪೊಲೀಸ್ ಕಮಿಷನರ್ (ಐಜಿಐ) ಉಷಾ ರಂಗಣ್ಣಿ ಮಾತನಾಡಿ, ಛಾವಣಿ ಕುಸಿದ ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಘಟನಾ ಸ್ಥಳದ ಬಳಿ ಯಾರೂ ನಿಲ್ಲದಂತೆ ಖಚಿತಪಡಿಸಿಕೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ.

“ಪೊಲೀಸ್ ಮತ್ತು ಸರ್ಕಾರದ ವಿವಿಧ ತಂಡಗಳು ತನಿಖೆಗಾಗಿ ಈ ಸ್ಥಳಕ್ಕೆ ಭೇಟಿ ನೀಡುತ್ತವೆ. ನಾವು ಉದ್ದೇಶಕ್ಕಾಗಿ ಪ್ರದೇಶವನ್ನು ಸುತ್ತುವರೆದಿದ್ದೇವೆ. ನಮ್ಮ ಪೊಲೀಸ್ ಸಿಬ್ಬಂದಿ, ಭದ್ರತಾ ಪಡೆಗಳು ಮತ್ತು ಡಿಎಫ್‌ಎಸ್‌ಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು” ಎಂದು ಡಿಸಿಪಿ ಹೇಳಿದರು.

ಪ್ರಸ್ತುತ, ಎಲ್ಲ ಎಲಿವೇಟರ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಪ್ರಯಾಣಿಕರಿಗೆ ಮೆಟ್ಟಿಲುಗಳನ್ನು ಬಳಸಲು ಸೂಚಿಸಲಾಗಿದೆ ಎಂದು ಡಿಸಿಪಿ ರಂಗಾನಿ ತಿಳಿಸಿದ್ದಾರೆ.

ಗಾಯಗೊಂಡವರನ್ನು ಆರಂಭದಲ್ಲಿ ಹರಿಯಾಣದ ಗುರುಗ್ರಾಮ್‌ನಲ್ಲಿರುವ ಮೇದಾಂತ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಇಲ್ಲಿನ ಸಫ್ದರ್‌ಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ಕಳಪೆ ಮೂಲಸೌಕರ್ಯಕ್ಕೆ ಕ್ರಿಮಿನಲ್ ನಿರ್ಲಕ್ಷ್ಯ ಕಾರಣ..’; ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತಕ್ಕೆ ಖರ್ಗೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...