Homeಮುಖಪುಟಮುಡಾ ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿಲ್ಲ, ರಾಜಕೀಯ ದುರುದ್ದೇಶಕ್ಕೆ ಇಡಿ ವರದಿಯಲ್ಲಿ ನನ್ನ ಹೆಸರು: ಸಿಎಂ

ಮುಡಾ ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿಲ್ಲ, ರಾಜಕೀಯ ದುರುದ್ದೇಶಕ್ಕೆ ಇಡಿ ವರದಿಯಲ್ಲಿ ನನ್ನ ಹೆಸರು: ಸಿಎಂ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ (ಮುಡಾ) ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿಲ್ಲ, ರಾಜಕೀಯ ದುರುದ್ಙೇಶದಿಂದ ಜಾರಿ ನಿರ್ದೇಶನಾಲಯ (ಇಡಿ) ವರದಿಯಲ್ಲಿ ನನ್ನ ಹೆಸರು ಉಲ್ಲೇಖಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ ಕ್ರಮ ಕಾನೂನು ಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇಡಿಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸಿದ್ದಾರೆ. ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ” ಎಂದರು.

“ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಪತ್ನಿಗೆ ಇಡಿಯವರ ನೋಟೀಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ. ಆದರೆ, ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ” ಎಂದರು.

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಯಾವುದೇ ಹಣ ವರ್ಗಾವಣೆ ನಡೆದಿಲ್ಲ ಎಂದು ಹೈಕೋರ್ಟ್ ಗಮನಿಸಿದೆ. ಇದು ಪಿಎಂಎಲ್‌ಎ ಅಡಿಯಲ್ಲಿ ಬರುವುದಿಲ್ಲ. ಇದು ಇಡೀ ಮುಡಾ ಪ್ರಕರಣಕ್ಕೆ ಅನ್ವಯಿಸುತ್ತದೆ” ಎಂದು ಅವರು ಹೇಳಿದರು.

“ಇದನ್ನು ಹೈಕೋರ್ಟ್ ಗಮನಿಸಿದೆ ಮತ್ತು ನಟೇಶ್‌ಗೆ ನೋಟಿಸ್ ಜಾರಿ ಮಾಡಲು, ಅವರ ಮನೆಯನ್ನು ಶೋಧಿಸಲು, ಅವರನ್ನು ಸಮನ್ಸ್ ಮಾಡಲು ಜಾರಿ ನಿರ್ದೇಶನಾಲಯ ತೆಗೆದುಕೊಂಡ ಕ್ರಮ ಕಾನೂನುಬದ್ಧವಲ್ಲ, ಅದು ತಪ್ಪು” ಎಂದು ಅವರು ಹೇಳಿದರು.

ಗುರುವಾರ ಬಿಡುಗಡೆಯಾದ ಇಡಿ ವರದಿಯಲ್ಲಿ ಉಲ್ಲೇಖಿಸಲಾದ ಅವರ ಹೆಸರು ಮತ್ತು ಅವರ ಕುಟುಂಬ ಸದಸ್ಯರ ಹೆಸರುಗಳ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರಕರಣದಲ್ಲಿ ಹಣ ವರ್ಗಾವಣೆ ನಡೆದಿದೆ ಎಂದು ತೋರಿಸಲು ಪುರಾವೆ ಏನು? ಅದರಲ್ಲಿ ಯಾವುದೇ ಅಕ್ರಮವಿಲ್ಲ” ಎಂದರು.

“ಗುರುವಾರ (ಜನವರಿ 30) ಇಡಿ ಬಿಡುಗಡೆ ಮಾಡಿದ ವರದಿಯು ಮುಟ್ಟುಗೋಲು ವರದಿಯಾಗಿದೆ. ಅವರು ಉದ್ದೇಶಪೂರ್ವಕವಾಗಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದರಿಂದ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಏಕೆಂದರೆ, ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ನನ್ನ ಹೆಸರನ್ನು ಕೆಡಿಸಲು, ಜನರಿಗೆ ಸುಳ್ಳು ಸಂದೇಶ ನೀಡಲು ಇದರ ಹಿಂದೆ ಗಂಭೀರ ರಾಜಕೀಯ ಪ್ರಯತ್ನ ಮತ್ತು ದುರುದ್ದೇಶಪೂರಿತ ಉದ್ದೇಶವಿದೆ. ಅವರು ಅದರಲ್ಲಿ ಯಶಸ್ವಿಯಾಗುವುದಿಲ್ಲ” ಎಂದು ಅವರು ಹೇಳಿದರು.

“ನಾವು ನ್ಯಾಯಾಲಯವನ್ನು ಸಂಪರ್ಕಿಸಿದ್ದೇವೆ. ನನ್ನ ಪತ್ನಿಗೆ ಇಡಿ ಸಮನ್ಸ್ ಜಾರಿ ಸಂಬಂಧ ನ್ಯಾಯಾಲಯ ಎರಡು ಬಾರಿ ತಡೆಯಾಜ್ಞೆ ನೀಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ನನ್ನ ವಿರುದ್ಧ ಮೊಕದ್ದಮೆ ಹೂಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಲೋಕಾಯುಕ್ತರು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತವು ಸ್ವತಂತ್ರ ಸಂಸ್ಥೆಯಲ್ಲವೇ” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...