Homeಕರ್ನಾಟಕರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ:...

ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ: ಡಿಕೆ ಶಿವಕುಮಾರ್

- Advertisement -
- Advertisement -

“ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಮ್ಮ ಪಕ್ಷ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಶನಿವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿದರು.

“ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ” ಎಂದು ಹೇಳಿದರು.

“ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಭರತ್ ರೆಡ್ಡಿ ಅವರು ಮನೆಗೆ ಬೆಂಕಿ ಹಚ್ಚುವ ಕುರಿತು ಮಾತನಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಯಾರೂ ಮನೆಗೆ ಬೆಂಕಿ ಹಚ್ಚುವುದಿಲ್ಲ, ಅದನ್ನು ಒಪ್ಪುವುದಿಲ್ಲ. ಮೊದಲು ಅವರ ಹೇಳಿಕೆ ಏನಿದೆ ಎಂದು ಪರಿಶೀಲನೆ ಮಾಡುತ್ತೇನೆ” ಎಂದರು.

ಜನಾರ್ಧನ ರೆಡ್ಡಿ ಮನೆ ಮುಂದೆ ಭರತ್ ರೆಡ್ಡಿ ಬೆಂಬಲಿಗರು ಪೋಸ್ಟರ್ ಅಂಟಿಸಿದ್ದರ ಬಗ್ಗೆ ಕೇಳಿದಾಗ, “ಅಲ್ಲಿ ಭರತ್ ರೆಡ್ಡಿ ಇದ್ದರಾ? ಜನಾರ್ಧನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಅವರ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ” ಎಂದು ಪ್ರಶ್ನಿಸಿದರು.

“ಗುಂಡು ಯಾರು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ತಿಳಿಸಿದರು.

ಎಸ್‌ಪಿ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಕೇಳಿದಾಗ, “ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್‌ಪಿ ಜೊತೆ ಮಾತನಾಡಿದ್ದೇನೆ. ಅವರ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೇ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್‌ಪಿ, ಐಜಿ ಮತ್ತು ಶಾಸಕರ ಜತೆಗೂ ಮಾತನಾಡಿದ್ದೇನೆ. ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ. ಬಳ್ಳಾರಿಯ ಜನ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದುಕೊಂಡಿದ್ದರು. ನಮಗೆ ಅದು ಮುಖ್ಯ. ಪಕ್ಷದ ಅಧ್ಯಕ್ಷನಾಗಿ ನನಗೆ ನನ್ನದೇ ಆದ ಜವಾಬ್ದಾರಿ ಇದೆ” ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್

ನನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ. ಜನಾರ್ಧನ ರೆಡ್ಡಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು” ಎಂದು ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...