Homeಕರ್ನಾಟಕಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

ಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

- Advertisement -
- Advertisement -

ಪೊಲೀಸರ ಬಿಗಿ ಭದ್ರತೆಯಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕವನ್ನು ಮೈಸೂರು ರಂಗಾಯಣದ ಭೂಮಿಗೀತದಲ್ಲಿ ಭಾನುವಾರ ಪ್ರದರ್ಶಿಸಲಾಯಿತು. ಆ ನಾಟಕ ನೋಡಲು ಪತ್ರಕರ್ತ ಟಿ.ಗುರುರಾಜ್‌ ಮತ್ತು ರಂಗಾಯಣದ ಮಾಜಿ ನಿರ್ದೇಶಕರಾದ ಸಿ.ಬಸವಲಿಂಗಯ್ಯ ಹೋಗಿದ್ದರು. ಆದರೆ ಇವರನ್ನು ಒಳಗೆ ಪ್ರವೇಶಿಸದಂತೆ ಪೊಲೀಸರು ಅಡಚಣೆ ಉಂಟು ಮಾಡಿದ್ದು ಸುದ್ದಿಯಾಗಿದೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ರಚನೆ ಮಾಡಿ ನಿರ್ದೇಶಿಸಿರುವ ಈ ನಾಟಕವನ್ನು ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿದ್ದು, ಸುಮಾರು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ನಾಟಕ ಪ್ರದರ್ಶನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್‌ಎಸ್‌ಎಸ್‌ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು. ಟಿಪ್ಪು ನೈಜ ಇತಿಹಾಸದ ಕುರಿತು ಮೊದಲಿನಿಂದಲೂ ಮಾತನಾಡುತ್ತಾ ಬಂದಿರುವ ‘ಹಲೋ ಮೈಸೂರು’ ಪತ್ರಿಕೆಯ ಸಂಪಾದಕರಾದ ಟಿ.ಗುರುರಾಜ್‌ ಹಾಗೂ ರಂಗಕರ್ಮಿ ಬಸವಲಿಂಗಯ್ಯ ಅವರು ನಾಟಕ ವೀಕ್ಷಿಸಲು ತೆರಳಿದ್ದರು. “ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ” ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶಕ್ಕೆ ಅನುಮತಿ ಕೊಡಲಾಯಿತು.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಟಿ.ಗುರುರಾಜ್‌, “ನನ್ನ ಮತ್ತು ಬಸವಲಿಂಗಯ್ಯನವರ ಅಕ್ಕಪಕ್ಕ ಇಬ್ಬರು- ಮೂವರು ಪೊಲೀಸರು ಕೂತುಕೊಂಡಿದ್ದರು. ಇವರಿಲ್ಲದಿದ್ದರೆ ಬಹುಶಃ ನಮ್ಮ ಮೇಲೆ ಹಲ್ಲೆಯಾಗುತ್ತಿತ್ತೇನೋ. ಅಲ್ಲಿ ಸಂಘಪರಿವಾರದವರು ಇದ್ದರು. ನಾಟಕ ನೋಡಿ ಹೊರಬಂದ ಬಳಿಕ ರಂಗಾಯಣದ ನಿರ್ದೇಶಕ ಕಾರ್ಯಪ್ಪ ಮಾತನಾಡಿ ನಮ್ಮ ವಿರುದ್ಧ ಗದಾಪ್ರಹಾರ ಮಾಡಿದರೆಂದು ತಿಳಿಯಿತು. ನಮಗೆ ಸೂಕ್ತ ಭದ್ರತೆ ನೀಡಿದ ಪೊಲೀಸರಿಗೆ ಧನ್ಯವಾದಗಳು” ಎಂದರು.

“ನಾಟಕದ ಬಗ್ಗೆ ಹೇಳುವುದಾದರೆ ಗಿರೀಶ್ ಕಾರ್ನಾಡರು ಬರೆದಿರುವ ಸಾಲುಗಳನ್ನು ಯಥಾವತ್ತು ಕದ್ದು ಈ ನಾಟಕದಲ್ಲಿ ಸೇರಿಸಲಾಗಿದೆ. ಸತ್ಯಗಳಿಗೆ ಸುಳ್ಳಿನ ಪರದೆ ಹೊದಿಸಿ, ಇದೇ ಸತ್ಯವೆಂದು ಬಿಂಬಿಸಲಾಗಿದೆ. ಇಡೀ ನಾಟಕದ ಆಶಯ ಮೂರೇ ಮೂರು ಅಂಶಗಳನ್ನು ಒಳಗೊಂಡಿದೆ. ಜಿಹಾದ್‌, ಅಲ್ಲಾ ಓ ಅಕ್ಬರ್‌, ಮುಸಲ್ಮಾನರ ರಾಜ್ಯವನ್ನಾಗಿ ಪಣತೊಟ್ಟ ಟಿಪ್ಪು ಸುಲ್ತಾನ್- ಈ ಮೂರರ ಮೇಲೆ ಇಡೀ ನಾಟಕ ಕೇಂದ್ರೀಕೃತವಾಗಿದೆ” ಎಂದು ವಿವರಿಸಿದರು.

“ಅಡ್ಡಂಡ ಕಾರ್ಯಪ್ಪನವರಿಗೆ ಮೈಸೂರು ಇತಿಹಾಸದ ಕನಿಷ್ಠ ಪ್ರಜ್ಞೆಯೂ ಇಲ್ಲ. ಯಾವ ರಾಜರು ಹೈದರಾಲಿಯ ಕಾಲದಲ್ಲಿ ಆಳುತ್ತಿದ್ದರು ಎಂಬ ಪರಿವೇ ಇಲ್ಲ. ಇಮ್ಮಡಿ ಕೃಷ್ಣರಾಜ ಒಡೆಯರ ಹೆಸರಿನ ಬದಲಿಗೆ ನಂಜರಾಜ ಒಡೆಯರ್‌ ಎಂದು ಹೇಳಿಸಿದ್ದಾರೆ. ಶೃಂಗೇರಿ ಅರಸರು ಟಿಪ್ಪುವಿನೊಂದಿಗೆ ನಡೆಸುವ ಪತ್ರ ವ್ಯವಹಾರ 1791, 1792ರ ಅವಧಿಗೆ ಸೇರಿವೆ. ಆದರೆ ಅಡ್ಡಂಡ ಕಾರ್ಯಪ್ಪ ಈ ಪತ್ರವನ್ನು 1799, ಮೇ 4ನೇ ತಾರೀಖಿನಂದು ಬರೆಸಿದ್ದಾರೆ. ಈ ನಾಟಕ ಆಭಾಸಗಳಿಂದ ತುಂಬಿ ತುಳುಕುತ್ತಿದೆ. ಇಲ್ಲಿಯವರೆಗೆ ಯಾವ ಇತಿಹಾಸಕಾರರು ಬರೆಯದ, ಯಾವುದೇ ಕೃತಿಯಲ್ಲೂ ಇರದ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದಿರುವುದಾಗಿ ಕೊನೆಯಲ್ಲಿ ತೋರಿಸಲಾಗಿದೆ. ವಾಟ್ಸಾಪ್‌ ವಿಶ್ವವಿದ್ಯಾನಿಲಯ ಸಂಶೋಧನೆಯು ನಾಟಕವೊಂದರ ನಿಜಪಾತ್ರವಾಗಿ ಬಂದಿದೆ” ಎಂದು ವಿಷಾದಿಸಿದರು.

“‘ನಮ್ಮ ಟಿಪ್ಪು: ವದಂತಿ ಮತ್ತು ಸತ್ಯಸಂಗತಿ’ ಎಂಬ ಪುಟ್ಟ ಕೃತಿಯನ್ನು ರಚಿಸುತ್ತಿದ್ದೇನೆ. ಟಿಪ್ಪುವನ್ನು ಸಮರ್ಥಿಸುವ ಕೆಲಸವನ್ನೇನೂ ನಾನು ಮಾಡುತ್ತಿಲ್ಲ. ರಾಜಪ್ರಭುತ್ವದ ಕಾಲದವನಾದ ಟಿಪ್ಪು ಮಾಡಿದ ತಪ್ಪುಗಳನ್ನು ನಾವು ಒಪ್ಪಿಕೊಳ್ಳಬೇಕು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವಕ್ಕೂ ವ್ಯತ್ಯಾಸಗಳಿವೆ. ಭೂತವನ್ನು ವರ್ತಮಾನದಲ್ಲಿಟ್ಟು, ವರ್ತಮಾನದಲ್ಲಿ ಭವಿಷ್ಯಕ್ಕೆ ಮಾರಕವಾಗುವಂತೆ ನಡೆದುಕೊಳ್ಳುವುದು ಮತ್ತಷ್ಟು ಆಘಾತಕಾರಿ. ನಾವು ಕಟ್ಟುವ ಕೆಲಸ ಮಾಡಬೇಕು, ಒಡೆಯುವ ಕೆಲಸವನ್ನಲ್ಲ. ಭಾರತೀಯತೆ ನಮ್ಮ ಎದೆಯೊಳಗೆ ಇದೆ. ಅದರ ಪಾಠವನ್ನು ಇನ್ನ್ಯಾರೋ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“ಟಿಪ್ಪುವಿನ ಬಗ್ಗೆ ಇವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಐತಿಹಾಸಿಕವಾದ ಉತ್ತರವನ್ನು ಕೊಡುವ ಪ್ರಯತ್ನವನ್ನು ಈ ಪುಟ್ಟ ಕೃತಿಯಲ್ಲಿ ಮಾಡುತ್ತಿದ್ದೇನೆ. ನಾನು ಬರೆದಿರುವುದು ಸುಳ್ಳು ಎಂದು ಯಾರಾದರೂ ದಾಖಲೆ ಸಮೇತ ಸಾಬೀತುಪಡಿಸಿದರೆ ಒಪ್ಪಿಕೊಳ್ಳಲು ಸಿದ್ಧವಿದ್ದೇನೆ. ಟಿಪ್ಪು ಯಾರನ್ನೂ ಕೊಂದಿಲ್ಲ, ಮತಾಂತರ ಮಾಡಿಲ್ಲ ಎಂದು ಮೊಂಡುವಾದ ಮಾಡಲ್ಲ. ಇಡೀ ರಾಜಪ್ರಭುತ್ವದ ಚರಿತ್ರೆಯನ್ನು ನೋಡಿದರೆ ಟಿಪ್ಪುವಿನಂತೆಯೇ ಎಲ್ಲ ಅರಸರ ಇತಿಹಾಸವಿರುತ್ತದೆ. ತಮ್ಮ ಸಂಬಂಧಿಕರನ್ನೇ ಕೊಂದ ಘಟನೆಗಳು ಸಿಗುತ್ತವೆ. ಸತ್ಯಕ್ಕೆ ವಿದಾಯ ಹೇಳಿರುವ ಅಡ್ಡಂಡ ಕಾರ್ಯಪ್ಪ ಸರ್ಕಾರಕ್ಕೆ ಋಣಸಂದಾಯ ಮಾಡಿದ್ದಾರೆ ಅನಿಸುತ್ತದೆ. 30 ವರ್ಷಗಳ ರಂಗಾಯಣ ಇತಿಹಾಸದಲ್ಲಿ ಈ ನಮೂನೆಯ ಪೊಲೀಸರು ಯಾವತ್ತೂ ಬರಲಿಲ್ಲ. ಬಸವಲಿಂಗಯ್ಯನವರು ಇಡೀ ರಾತ್ರಿ ‘ಮಲೆಗಳಲ್ಲಿ ಮದುಮಗಳು’ ನಾಟಕವನ್ನು ಆಡಿಸಿದ್ದರು. ಸಾವಿರಾರು ಜನ ಬೇರೆ ಬೇರೆ ದೇಶಗಳಿಂದ ಬಂದು ನೋಡಿದರು. ಅಂದು ಹೀಗೆ ಪೊಲೀಸರು ಪ್ರವೇಶಿಸಿರಲಿಲ್ಲ” ಎಂದು ಹೇಳಿದರು.

“ನಾಟಕ ನೋಡಲು ಹೋಗದಂತೆ ನಮ್ಮನ್ನು ತಡೆಯಲಾಯಿತು. ಆದರೆ ಪೊಲೀಸರ ಅಕ್ಕಪಕ್ಕ ಕೂತು ನಾಟಕ ವೀಕ್ಷಿಸಲು ಅನುಮತಿ ಕೊಡಲಾಯಿತು. ನಮ್ಮ ಅಕ್ಕಪಕ್ಕದಲ್ಲಿ ಕೂತಿದ್ದ ಪೊಲೀಸರಿಗೆ ನಾವು ಕೃತ್ಯಜ್ಞತೆಯನ್ನು ಅರ್ಪಿಸುತ್ತೇವೆ. ಯಾಕೆಂದರೆ ನಾಟಕ ನೋಡಲು ಸಂಘಪರಿವಾರದ ಪ್ರೀತಿಪಾತ್ರರು ಬಂದಿದ್ದರು. ಉದ್ದೇಶಪೂರ್ವಕವಾಗಿ ನಾಟಕ ಮುಗಿದ ಮೇಲೆ ಅಡ್ಡಂಡ ಕಾರ್ಯಪ್ಪ ನಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸುವ ಸಾಧ್ಯತೆಯೂ ಇತ್ತು. ಬಹುಶಃ ಪೊಲೀಸರು ಇಲ್ಲದೆ ಇದ್ದಿದ್ದರೆ ನಾವು ಏಟು ತಿಂದುಕೊಂಡು ಹೊರಬರಬೇಕಿತ್ತೇನೋ, ಗೊತ್ತಿಲ್ಲ. ಹೀಗಾಗಿ ಅವರಿಗೆ ಥ್ಯಾಂಕ್ಸ್‌ ಹೇಳಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...