Homeಕರ್ನಾಟಕಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

ಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

- Advertisement -
- Advertisement -

ಪೊಲೀಸರ ಬಿಗಿ ಭದ್ರತೆಯಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕವನ್ನು ಮೈಸೂರು ರಂಗಾಯಣದ ಭೂಮಿಗೀತದಲ್ಲಿ ಭಾನುವಾರ ಪ್ರದರ್ಶಿಸಲಾಯಿತು. ಆ ನಾಟಕ ನೋಡಲು ಪತ್ರಕರ್ತ ಟಿ.ಗುರುರಾಜ್‌ ಮತ್ತು ರಂಗಾಯಣದ ಮಾಜಿ ನಿರ್ದೇಶಕರಾದ ಸಿ.ಬಸವಲಿಂಗಯ್ಯ ಹೋಗಿದ್ದರು. ಆದರೆ ಇವರನ್ನು ಒಳಗೆ ಪ್ರವೇಶಿಸದಂತೆ ಪೊಲೀಸರು ಅಡಚಣೆ ಉಂಟು ಮಾಡಿದ್ದು ಸುದ್ದಿಯಾಗಿದೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ರಚನೆ ಮಾಡಿ ನಿರ್ದೇಶಿಸಿರುವ ಈ ನಾಟಕವನ್ನು ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿದ್ದು, ಸುಮಾರು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ನಾಟಕ ಪ್ರದರ್ಶನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್‌ಎಸ್‌ಎಸ್‌ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು. ಟಿಪ್ಪು ನೈಜ ಇತಿಹಾಸದ ಕುರಿತು ಮೊದಲಿನಿಂದಲೂ ಮಾತನಾಡುತ್ತಾ ಬಂದಿರುವ ‘ಹಲೋ ಮೈಸೂರು’ ಪತ್ರಿಕೆಯ ಸಂಪಾದಕರಾದ ಟಿ.ಗುರುರಾಜ್‌ ಹಾಗೂ ರಂಗಕರ್ಮಿ ಬಸವಲಿಂಗಯ್ಯ ಅವರು ನಾಟಕ ವೀಕ್ಷಿಸಲು ತೆರಳಿದ್ದರು. “ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ” ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶಕ್ಕೆ ಅನುಮತಿ ಕೊಡಲಾಯಿತು.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಟಿ.ಗುರುರಾಜ್‌, “ನನ್ನ ಮತ್ತು ಬಸವಲಿಂಗಯ್ಯನವರ ಅಕ್ಕಪಕ್ಕ ಇಬ್ಬರು- ಮೂವರು ಪೊಲೀಸರು ಕೂತುಕೊಂಡಿದ್ದರು. ಇವರಿಲ್ಲದಿದ್ದರೆ ಬಹುಶಃ ನಮ್ಮ ಮೇಲೆ ಹಲ್ಲೆಯಾಗುತ್ತಿತ್ತೇನೋ. ಅಲ್ಲಿ ಸಂಘಪರಿವಾರದವರು ಇದ್ದರು. ನಾಟಕ ನೋಡಿ ಹೊರಬಂದ ಬಳಿಕ ರಂಗಾಯಣದ ನಿರ್ದೇಶಕ ಕಾರ್ಯಪ್ಪ ಮಾತನಾಡಿ ನಮ್ಮ ವಿರುದ್ಧ ಗದಾಪ್ರಹಾರ ಮಾಡಿದರೆಂದು ತಿಳಿಯಿತು. ನಮಗೆ ಸೂಕ್ತ ಭದ್ರತೆ ನೀಡಿದ ಪೊಲೀಸರಿಗೆ ಧನ್ಯವಾದಗಳು” ಎಂದರು.

“ನಾಟಕದ ಬಗ್ಗೆ ಹೇಳುವುದಾದರೆ ಗಿರೀಶ್ ಕಾರ್ನಾಡರು ಬರೆದಿರುವ ಸಾಲುಗಳನ್ನು ಯಥಾವತ್ತು ಕದ್ದು ಈ ನಾಟಕದಲ್ಲಿ ಸೇರಿಸಲಾಗಿದೆ. ಸತ್ಯಗಳಿಗೆ ಸುಳ್ಳಿನ ಪರದೆ ಹೊದಿಸಿ, ಇದೇ ಸತ್ಯವೆಂದು ಬಿಂಬಿಸಲಾಗಿದೆ. ಇಡೀ ನಾಟಕದ ಆಶಯ ಮೂರೇ ಮೂರು ಅಂಶಗಳನ್ನು ಒಳಗೊಂಡಿದೆ. ಜಿಹಾದ್‌, ಅಲ್ಲಾ ಓ ಅಕ್ಬರ್‌, ಮುಸಲ್ಮಾನರ ರಾಜ್ಯವನ್ನಾಗಿ ಪಣತೊಟ್ಟ ಟಿಪ್ಪು ಸುಲ್ತಾನ್- ಈ ಮೂರರ ಮೇಲೆ ಇಡೀ ನಾಟಕ ಕೇಂದ್ರೀಕೃತವಾಗಿದೆ” ಎಂದು ವಿವರಿಸಿದರು.

“ಅಡ್ಡಂಡ ಕಾರ್ಯಪ್ಪನವರಿಗೆ ಮೈಸೂರು ಇತಿಹಾಸದ ಕನಿಷ್ಠ ಪ್ರಜ್ಞೆಯೂ ಇಲ್ಲ. ಯಾವ ರಾಜರು ಹೈದರಾಲಿಯ ಕಾಲದಲ್ಲಿ ಆಳುತ್ತಿದ್ದರು ಎಂಬ ಪರಿವೇ ಇಲ್ಲ. ಇಮ್ಮಡಿ ಕೃಷ್ಣರಾಜ ಒಡೆಯರ ಹೆಸರಿನ ಬದಲಿಗೆ ನಂಜರಾಜ ಒಡೆಯರ್‌ ಎಂದು ಹೇಳಿಸಿದ್ದಾರೆ. ಶೃಂಗೇರಿ ಅರಸರು ಟಿಪ್ಪುವಿನೊಂದಿಗೆ ನಡೆಸುವ ಪತ್ರ ವ್ಯವಹಾರ 1791, 1792ರ ಅವಧಿಗೆ ಸೇರಿವೆ. ಆದರೆ ಅಡ್ಡಂಡ ಕಾರ್ಯಪ್ಪ ಈ ಪತ್ರವನ್ನು 1799, ಮೇ 4ನೇ ತಾರೀಖಿನಂದು ಬರೆಸಿದ್ದಾರೆ. ಈ ನಾಟಕ ಆಭಾಸಗಳಿಂದ ತುಂಬಿ ತುಳುಕುತ್ತಿದೆ. ಇಲ್ಲಿಯವರೆಗೆ ಯಾವ ಇತಿಹಾಸಕಾರರು ಬರೆಯದ, ಯಾವುದೇ ಕೃತಿಯಲ್ಲೂ ಇರದ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದಿರುವುದಾಗಿ ಕೊನೆಯಲ್ಲಿ ತೋರಿಸಲಾಗಿದೆ. ವಾಟ್ಸಾಪ್‌ ವಿಶ್ವವಿದ್ಯಾನಿಲಯ ಸಂಶೋಧನೆಯು ನಾಟಕವೊಂದರ ನಿಜಪಾತ್ರವಾಗಿ ಬಂದಿದೆ” ಎಂದು ವಿಷಾದಿಸಿದರು.

“‘ನಮ್ಮ ಟಿಪ್ಪು: ವದಂತಿ ಮತ್ತು ಸತ್ಯಸಂಗತಿ’ ಎಂಬ ಪುಟ್ಟ ಕೃತಿಯನ್ನು ರಚಿಸುತ್ತಿದ್ದೇನೆ. ಟಿಪ್ಪುವನ್ನು ಸಮರ್ಥಿಸುವ ಕೆಲಸವನ್ನೇನೂ ನಾನು ಮಾಡುತ್ತಿಲ್ಲ. ರಾಜಪ್ರಭುತ್ವದ ಕಾಲದವನಾದ ಟಿಪ್ಪು ಮಾಡಿದ ತಪ್ಪುಗಳನ್ನು ನಾವು ಒಪ್ಪಿಕೊಳ್ಳಬೇಕು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವಕ್ಕೂ ವ್ಯತ್ಯಾಸಗಳಿವೆ. ಭೂತವನ್ನು ವರ್ತಮಾನದಲ್ಲಿಟ್ಟು, ವರ್ತಮಾನದಲ್ಲಿ ಭವಿಷ್ಯಕ್ಕೆ ಮಾರಕವಾಗುವಂತೆ ನಡೆದುಕೊಳ್ಳುವುದು ಮತ್ತಷ್ಟು ಆಘಾತಕಾರಿ. ನಾವು ಕಟ್ಟುವ ಕೆಲಸ ಮಾಡಬೇಕು, ಒಡೆಯುವ ಕೆಲಸವನ್ನಲ್ಲ. ಭಾರತೀಯತೆ ನಮ್ಮ ಎದೆಯೊಳಗೆ ಇದೆ. ಅದರ ಪಾಠವನ್ನು ಇನ್ನ್ಯಾರೋ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“ಟಿಪ್ಪುವಿನ ಬಗ್ಗೆ ಇವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಐತಿಹಾಸಿಕವಾದ ಉತ್ತರವನ್ನು ಕೊಡುವ ಪ್ರಯತ್ನವನ್ನು ಈ ಪುಟ್ಟ ಕೃತಿಯಲ್ಲಿ ಮಾಡುತ್ತಿದ್ದೇನೆ. ನಾನು ಬರೆದಿರುವುದು ಸುಳ್ಳು ಎಂದು ಯಾರಾದರೂ ದಾಖಲೆ ಸಮೇತ ಸಾಬೀತುಪಡಿಸಿದರೆ ಒಪ್ಪಿಕೊಳ್ಳಲು ಸಿದ್ಧವಿದ್ದೇನೆ. ಟಿಪ್ಪು ಯಾರನ್ನೂ ಕೊಂದಿಲ್ಲ, ಮತಾಂತರ ಮಾಡಿಲ್ಲ ಎಂದು ಮೊಂಡುವಾದ ಮಾಡಲ್ಲ. ಇಡೀ ರಾಜಪ್ರಭುತ್ವದ ಚರಿತ್ರೆಯನ್ನು ನೋಡಿದರೆ ಟಿಪ್ಪುವಿನಂತೆಯೇ ಎಲ್ಲ ಅರಸರ ಇತಿಹಾಸವಿರುತ್ತದೆ. ತಮ್ಮ ಸಂಬಂಧಿಕರನ್ನೇ ಕೊಂದ ಘಟನೆಗಳು ಸಿಗುತ್ತವೆ. ಸತ್ಯಕ್ಕೆ ವಿದಾಯ ಹೇಳಿರುವ ಅಡ್ಡಂಡ ಕಾರ್ಯಪ್ಪ ಸರ್ಕಾರಕ್ಕೆ ಋಣಸಂದಾಯ ಮಾಡಿದ್ದಾರೆ ಅನಿಸುತ್ತದೆ. 30 ವರ್ಷಗಳ ರಂಗಾಯಣ ಇತಿಹಾಸದಲ್ಲಿ ಈ ನಮೂನೆಯ ಪೊಲೀಸರು ಯಾವತ್ತೂ ಬರಲಿಲ್ಲ. ಬಸವಲಿಂಗಯ್ಯನವರು ಇಡೀ ರಾತ್ರಿ ‘ಮಲೆಗಳಲ್ಲಿ ಮದುಮಗಳು’ ನಾಟಕವನ್ನು ಆಡಿಸಿದ್ದರು. ಸಾವಿರಾರು ಜನ ಬೇರೆ ಬೇರೆ ದೇಶಗಳಿಂದ ಬಂದು ನೋಡಿದರು. ಅಂದು ಹೀಗೆ ಪೊಲೀಸರು ಪ್ರವೇಶಿಸಿರಲಿಲ್ಲ” ಎಂದು ಹೇಳಿದರು.

“ನಾಟಕ ನೋಡಲು ಹೋಗದಂತೆ ನಮ್ಮನ್ನು ತಡೆಯಲಾಯಿತು. ಆದರೆ ಪೊಲೀಸರ ಅಕ್ಕಪಕ್ಕ ಕೂತು ನಾಟಕ ವೀಕ್ಷಿಸಲು ಅನುಮತಿ ಕೊಡಲಾಯಿತು. ನಮ್ಮ ಅಕ್ಕಪಕ್ಕದಲ್ಲಿ ಕೂತಿದ್ದ ಪೊಲೀಸರಿಗೆ ನಾವು ಕೃತ್ಯಜ್ಞತೆಯನ್ನು ಅರ್ಪಿಸುತ್ತೇವೆ. ಯಾಕೆಂದರೆ ನಾಟಕ ನೋಡಲು ಸಂಘಪರಿವಾರದ ಪ್ರೀತಿಪಾತ್ರರು ಬಂದಿದ್ದರು. ಉದ್ದೇಶಪೂರ್ವಕವಾಗಿ ನಾಟಕ ಮುಗಿದ ಮೇಲೆ ಅಡ್ಡಂಡ ಕಾರ್ಯಪ್ಪ ನಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸುವ ಸಾಧ್ಯತೆಯೂ ಇತ್ತು. ಬಹುಶಃ ಪೊಲೀಸರು ಇಲ್ಲದೆ ಇದ್ದಿದ್ದರೆ ನಾವು ಏಟು ತಿಂದುಕೊಂಡು ಹೊರಬರಬೇಕಿತ್ತೇನೋ, ಗೊತ್ತಿಲ್ಲ. ಹೀಗಾಗಿ ಅವರಿಗೆ ಥ್ಯಾಂಕ್ಸ್‌ ಹೇಳಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...