Homeಕರ್ನಾಟಕಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

ಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

- Advertisement -
- Advertisement -

ಪೊಲೀಸರ ಬಿಗಿ ಭದ್ರತೆಯಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕವನ್ನು ಮೈಸೂರು ರಂಗಾಯಣದ ಭೂಮಿಗೀತದಲ್ಲಿ ಭಾನುವಾರ ಪ್ರದರ್ಶಿಸಲಾಯಿತು. ಆ ನಾಟಕ ನೋಡಲು ಪತ್ರಕರ್ತ ಟಿ.ಗುರುರಾಜ್‌ ಮತ್ತು ರಂಗಾಯಣದ ಮಾಜಿ ನಿರ್ದೇಶಕರಾದ ಸಿ.ಬಸವಲಿಂಗಯ್ಯ ಹೋಗಿದ್ದರು. ಆದರೆ ಇವರನ್ನು ಒಳಗೆ ಪ್ರವೇಶಿಸದಂತೆ ಪೊಲೀಸರು ಅಡಚಣೆ ಉಂಟು ಮಾಡಿದ್ದು ಸುದ್ದಿಯಾಗಿದೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ರಚನೆ ಮಾಡಿ ನಿರ್ದೇಶಿಸಿರುವ ಈ ನಾಟಕವನ್ನು ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿದ್ದು, ಸುಮಾರು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ನಾಟಕ ಪ್ರದರ್ಶನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್‌ಎಸ್‌ಎಸ್‌ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು. ಟಿಪ್ಪು ನೈಜ ಇತಿಹಾಸದ ಕುರಿತು ಮೊದಲಿನಿಂದಲೂ ಮಾತನಾಡುತ್ತಾ ಬಂದಿರುವ ‘ಹಲೋ ಮೈಸೂರು’ ಪತ್ರಿಕೆಯ ಸಂಪಾದಕರಾದ ಟಿ.ಗುರುರಾಜ್‌ ಹಾಗೂ ರಂಗಕರ್ಮಿ ಬಸವಲಿಂಗಯ್ಯ ಅವರು ನಾಟಕ ವೀಕ್ಷಿಸಲು ತೆರಳಿದ್ದರು. “ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ” ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶಕ್ಕೆ ಅನುಮತಿ ಕೊಡಲಾಯಿತು.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಟಿ.ಗುರುರಾಜ್‌, “ನನ್ನ ಮತ್ತು ಬಸವಲಿಂಗಯ್ಯನವರ ಅಕ್ಕಪಕ್ಕ ಇಬ್ಬರು- ಮೂವರು ಪೊಲೀಸರು ಕೂತುಕೊಂಡಿದ್ದರು. ಇವರಿಲ್ಲದಿದ್ದರೆ ಬಹುಶಃ ನಮ್ಮ ಮೇಲೆ ಹಲ್ಲೆಯಾಗುತ್ತಿತ್ತೇನೋ. ಅಲ್ಲಿ ಸಂಘಪರಿವಾರದವರು ಇದ್ದರು. ನಾಟಕ ನೋಡಿ ಹೊರಬಂದ ಬಳಿಕ ರಂಗಾಯಣದ ನಿರ್ದೇಶಕ ಕಾರ್ಯಪ್ಪ ಮಾತನಾಡಿ ನಮ್ಮ ವಿರುದ್ಧ ಗದಾಪ್ರಹಾರ ಮಾಡಿದರೆಂದು ತಿಳಿಯಿತು. ನಮಗೆ ಸೂಕ್ತ ಭದ್ರತೆ ನೀಡಿದ ಪೊಲೀಸರಿಗೆ ಧನ್ಯವಾದಗಳು” ಎಂದರು.

“ನಾಟಕದ ಬಗ್ಗೆ ಹೇಳುವುದಾದರೆ ಗಿರೀಶ್ ಕಾರ್ನಾಡರು ಬರೆದಿರುವ ಸಾಲುಗಳನ್ನು ಯಥಾವತ್ತು ಕದ್ದು ಈ ನಾಟಕದಲ್ಲಿ ಸೇರಿಸಲಾಗಿದೆ. ಸತ್ಯಗಳಿಗೆ ಸುಳ್ಳಿನ ಪರದೆ ಹೊದಿಸಿ, ಇದೇ ಸತ್ಯವೆಂದು ಬಿಂಬಿಸಲಾಗಿದೆ. ಇಡೀ ನಾಟಕದ ಆಶಯ ಮೂರೇ ಮೂರು ಅಂಶಗಳನ್ನು ಒಳಗೊಂಡಿದೆ. ಜಿಹಾದ್‌, ಅಲ್ಲಾ ಓ ಅಕ್ಬರ್‌, ಮುಸಲ್ಮಾನರ ರಾಜ್ಯವನ್ನಾಗಿ ಪಣತೊಟ್ಟ ಟಿಪ್ಪು ಸುಲ್ತಾನ್- ಈ ಮೂರರ ಮೇಲೆ ಇಡೀ ನಾಟಕ ಕೇಂದ್ರೀಕೃತವಾಗಿದೆ” ಎಂದು ವಿವರಿಸಿದರು.

“ಅಡ್ಡಂಡ ಕಾರ್ಯಪ್ಪನವರಿಗೆ ಮೈಸೂರು ಇತಿಹಾಸದ ಕನಿಷ್ಠ ಪ್ರಜ್ಞೆಯೂ ಇಲ್ಲ. ಯಾವ ರಾಜರು ಹೈದರಾಲಿಯ ಕಾಲದಲ್ಲಿ ಆಳುತ್ತಿದ್ದರು ಎಂಬ ಪರಿವೇ ಇಲ್ಲ. ಇಮ್ಮಡಿ ಕೃಷ್ಣರಾಜ ಒಡೆಯರ ಹೆಸರಿನ ಬದಲಿಗೆ ನಂಜರಾಜ ಒಡೆಯರ್‌ ಎಂದು ಹೇಳಿಸಿದ್ದಾರೆ. ಶೃಂಗೇರಿ ಅರಸರು ಟಿಪ್ಪುವಿನೊಂದಿಗೆ ನಡೆಸುವ ಪತ್ರ ವ್ಯವಹಾರ 1791, 1792ರ ಅವಧಿಗೆ ಸೇರಿವೆ. ಆದರೆ ಅಡ್ಡಂಡ ಕಾರ್ಯಪ್ಪ ಈ ಪತ್ರವನ್ನು 1799, ಮೇ 4ನೇ ತಾರೀಖಿನಂದು ಬರೆಸಿದ್ದಾರೆ. ಈ ನಾಟಕ ಆಭಾಸಗಳಿಂದ ತುಂಬಿ ತುಳುಕುತ್ತಿದೆ. ಇಲ್ಲಿಯವರೆಗೆ ಯಾವ ಇತಿಹಾಸಕಾರರು ಬರೆಯದ, ಯಾವುದೇ ಕೃತಿಯಲ್ಲೂ ಇರದ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದಿರುವುದಾಗಿ ಕೊನೆಯಲ್ಲಿ ತೋರಿಸಲಾಗಿದೆ. ವಾಟ್ಸಾಪ್‌ ವಿಶ್ವವಿದ್ಯಾನಿಲಯ ಸಂಶೋಧನೆಯು ನಾಟಕವೊಂದರ ನಿಜಪಾತ್ರವಾಗಿ ಬಂದಿದೆ” ಎಂದು ವಿಷಾದಿಸಿದರು.

“‘ನಮ್ಮ ಟಿಪ್ಪು: ವದಂತಿ ಮತ್ತು ಸತ್ಯಸಂಗತಿ’ ಎಂಬ ಪುಟ್ಟ ಕೃತಿಯನ್ನು ರಚಿಸುತ್ತಿದ್ದೇನೆ. ಟಿಪ್ಪುವನ್ನು ಸಮರ್ಥಿಸುವ ಕೆಲಸವನ್ನೇನೂ ನಾನು ಮಾಡುತ್ತಿಲ್ಲ. ರಾಜಪ್ರಭುತ್ವದ ಕಾಲದವನಾದ ಟಿಪ್ಪು ಮಾಡಿದ ತಪ್ಪುಗಳನ್ನು ನಾವು ಒಪ್ಪಿಕೊಳ್ಳಬೇಕು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವಕ್ಕೂ ವ್ಯತ್ಯಾಸಗಳಿವೆ. ಭೂತವನ್ನು ವರ್ತಮಾನದಲ್ಲಿಟ್ಟು, ವರ್ತಮಾನದಲ್ಲಿ ಭವಿಷ್ಯಕ್ಕೆ ಮಾರಕವಾಗುವಂತೆ ನಡೆದುಕೊಳ್ಳುವುದು ಮತ್ತಷ್ಟು ಆಘಾತಕಾರಿ. ನಾವು ಕಟ್ಟುವ ಕೆಲಸ ಮಾಡಬೇಕು, ಒಡೆಯುವ ಕೆಲಸವನ್ನಲ್ಲ. ಭಾರತೀಯತೆ ನಮ್ಮ ಎದೆಯೊಳಗೆ ಇದೆ. ಅದರ ಪಾಠವನ್ನು ಇನ್ನ್ಯಾರೋ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“ಟಿಪ್ಪುವಿನ ಬಗ್ಗೆ ಇವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಐತಿಹಾಸಿಕವಾದ ಉತ್ತರವನ್ನು ಕೊಡುವ ಪ್ರಯತ್ನವನ್ನು ಈ ಪುಟ್ಟ ಕೃತಿಯಲ್ಲಿ ಮಾಡುತ್ತಿದ್ದೇನೆ. ನಾನು ಬರೆದಿರುವುದು ಸುಳ್ಳು ಎಂದು ಯಾರಾದರೂ ದಾಖಲೆ ಸಮೇತ ಸಾಬೀತುಪಡಿಸಿದರೆ ಒಪ್ಪಿಕೊಳ್ಳಲು ಸಿದ್ಧವಿದ್ದೇನೆ. ಟಿಪ್ಪು ಯಾರನ್ನೂ ಕೊಂದಿಲ್ಲ, ಮತಾಂತರ ಮಾಡಿಲ್ಲ ಎಂದು ಮೊಂಡುವಾದ ಮಾಡಲ್ಲ. ಇಡೀ ರಾಜಪ್ರಭುತ್ವದ ಚರಿತ್ರೆಯನ್ನು ನೋಡಿದರೆ ಟಿಪ್ಪುವಿನಂತೆಯೇ ಎಲ್ಲ ಅರಸರ ಇತಿಹಾಸವಿರುತ್ತದೆ. ತಮ್ಮ ಸಂಬಂಧಿಕರನ್ನೇ ಕೊಂದ ಘಟನೆಗಳು ಸಿಗುತ್ತವೆ. ಸತ್ಯಕ್ಕೆ ವಿದಾಯ ಹೇಳಿರುವ ಅಡ್ಡಂಡ ಕಾರ್ಯಪ್ಪ ಸರ್ಕಾರಕ್ಕೆ ಋಣಸಂದಾಯ ಮಾಡಿದ್ದಾರೆ ಅನಿಸುತ್ತದೆ. 30 ವರ್ಷಗಳ ರಂಗಾಯಣ ಇತಿಹಾಸದಲ್ಲಿ ಈ ನಮೂನೆಯ ಪೊಲೀಸರು ಯಾವತ್ತೂ ಬರಲಿಲ್ಲ. ಬಸವಲಿಂಗಯ್ಯನವರು ಇಡೀ ರಾತ್ರಿ ‘ಮಲೆಗಳಲ್ಲಿ ಮದುಮಗಳು’ ನಾಟಕವನ್ನು ಆಡಿಸಿದ್ದರು. ಸಾವಿರಾರು ಜನ ಬೇರೆ ಬೇರೆ ದೇಶಗಳಿಂದ ಬಂದು ನೋಡಿದರು. ಅಂದು ಹೀಗೆ ಪೊಲೀಸರು ಪ್ರವೇಶಿಸಿರಲಿಲ್ಲ” ಎಂದು ಹೇಳಿದರು.

“ನಾಟಕ ನೋಡಲು ಹೋಗದಂತೆ ನಮ್ಮನ್ನು ತಡೆಯಲಾಯಿತು. ಆದರೆ ಪೊಲೀಸರ ಅಕ್ಕಪಕ್ಕ ಕೂತು ನಾಟಕ ವೀಕ್ಷಿಸಲು ಅನುಮತಿ ಕೊಡಲಾಯಿತು. ನಮ್ಮ ಅಕ್ಕಪಕ್ಕದಲ್ಲಿ ಕೂತಿದ್ದ ಪೊಲೀಸರಿಗೆ ನಾವು ಕೃತ್ಯಜ್ಞತೆಯನ್ನು ಅರ್ಪಿಸುತ್ತೇವೆ. ಯಾಕೆಂದರೆ ನಾಟಕ ನೋಡಲು ಸಂಘಪರಿವಾರದ ಪ್ರೀತಿಪಾತ್ರರು ಬಂದಿದ್ದರು. ಉದ್ದೇಶಪೂರ್ವಕವಾಗಿ ನಾಟಕ ಮುಗಿದ ಮೇಲೆ ಅಡ್ಡಂಡ ಕಾರ್ಯಪ್ಪ ನಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸುವ ಸಾಧ್ಯತೆಯೂ ಇತ್ತು. ಬಹುಶಃ ಪೊಲೀಸರು ಇಲ್ಲದೆ ಇದ್ದಿದ್ದರೆ ನಾವು ಏಟು ತಿಂದುಕೊಂಡು ಹೊರಬರಬೇಕಿತ್ತೇನೋ, ಗೊತ್ತಿಲ್ಲ. ಹೀಗಾಗಿ ಅವರಿಗೆ ಥ್ಯಾಂಕ್ಸ್‌ ಹೇಳಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...