Homeಕರ್ನಾಟಕಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

ಆರ್‌ಎಸ್‌ಎಸ್‌ನವರಿದ್ದರು, ಪೊಲೀಸರ ರಕ್ಷಣೆ ಸಿಗದಿದ್ದರೆ ಹಲ್ಲೆಯಾಗುತ್ತಿತ್ತೇನೋ: ‘ಟಿಪ್ಪು’ ನಾಟಕ ವಿವಾದ ಕುರಿತು ಟಿ.ಗುರುರಾಜ್ ಹೇಳಿಕೆ

- Advertisement -
- Advertisement -

ಪೊಲೀಸರ ಬಿಗಿ ಭದ್ರತೆಯಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕವನ್ನು ಮೈಸೂರು ರಂಗಾಯಣದ ಭೂಮಿಗೀತದಲ್ಲಿ ಭಾನುವಾರ ಪ್ರದರ್ಶಿಸಲಾಯಿತು. ಆ ನಾಟಕ ನೋಡಲು ಪತ್ರಕರ್ತ ಟಿ.ಗುರುರಾಜ್‌ ಮತ್ತು ರಂಗಾಯಣದ ಮಾಜಿ ನಿರ್ದೇಶಕರಾದ ಸಿ.ಬಸವಲಿಂಗಯ್ಯ ಹೋಗಿದ್ದರು. ಆದರೆ ಇವರನ್ನು ಒಳಗೆ ಪ್ರವೇಶಿಸದಂತೆ ಪೊಲೀಸರು ಅಡಚಣೆ ಉಂಟು ಮಾಡಿದ್ದು ಸುದ್ದಿಯಾಗಿದೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ರಚನೆ ಮಾಡಿ ನಿರ್ದೇಶಿಸಿರುವ ಈ ನಾಟಕವನ್ನು ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿದ್ದು, ಸುಮಾರು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ನಾಟಕ ಪ್ರದರ್ಶನವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್‌ಎಸ್‌ಎಸ್‌ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು. ಟಿಪ್ಪು ನೈಜ ಇತಿಹಾಸದ ಕುರಿತು ಮೊದಲಿನಿಂದಲೂ ಮಾತನಾಡುತ್ತಾ ಬಂದಿರುವ ‘ಹಲೋ ಮೈಸೂರು’ ಪತ್ರಿಕೆಯ ಸಂಪಾದಕರಾದ ಟಿ.ಗುರುರಾಜ್‌ ಹಾಗೂ ರಂಗಕರ್ಮಿ ಬಸವಲಿಂಗಯ್ಯ ಅವರು ನಾಟಕ ವೀಕ್ಷಿಸಲು ತೆರಳಿದ್ದರು. “ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ” ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶಕ್ಕೆ ಅನುಮತಿ ಕೊಡಲಾಯಿತು.

ಘಟನೆಯ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಟಿ.ಗುರುರಾಜ್‌, “ನನ್ನ ಮತ್ತು ಬಸವಲಿಂಗಯ್ಯನವರ ಅಕ್ಕಪಕ್ಕ ಇಬ್ಬರು- ಮೂವರು ಪೊಲೀಸರು ಕೂತುಕೊಂಡಿದ್ದರು. ಇವರಿಲ್ಲದಿದ್ದರೆ ಬಹುಶಃ ನಮ್ಮ ಮೇಲೆ ಹಲ್ಲೆಯಾಗುತ್ತಿತ್ತೇನೋ. ಅಲ್ಲಿ ಸಂಘಪರಿವಾರದವರು ಇದ್ದರು. ನಾಟಕ ನೋಡಿ ಹೊರಬಂದ ಬಳಿಕ ರಂಗಾಯಣದ ನಿರ್ದೇಶಕ ಕಾರ್ಯಪ್ಪ ಮಾತನಾಡಿ ನಮ್ಮ ವಿರುದ್ಧ ಗದಾಪ್ರಹಾರ ಮಾಡಿದರೆಂದು ತಿಳಿಯಿತು. ನಮಗೆ ಸೂಕ್ತ ಭದ್ರತೆ ನೀಡಿದ ಪೊಲೀಸರಿಗೆ ಧನ್ಯವಾದಗಳು” ಎಂದರು.

“ನಾಟಕದ ಬಗ್ಗೆ ಹೇಳುವುದಾದರೆ ಗಿರೀಶ್ ಕಾರ್ನಾಡರು ಬರೆದಿರುವ ಸಾಲುಗಳನ್ನು ಯಥಾವತ್ತು ಕದ್ದು ಈ ನಾಟಕದಲ್ಲಿ ಸೇರಿಸಲಾಗಿದೆ. ಸತ್ಯಗಳಿಗೆ ಸುಳ್ಳಿನ ಪರದೆ ಹೊದಿಸಿ, ಇದೇ ಸತ್ಯವೆಂದು ಬಿಂಬಿಸಲಾಗಿದೆ. ಇಡೀ ನಾಟಕದ ಆಶಯ ಮೂರೇ ಮೂರು ಅಂಶಗಳನ್ನು ಒಳಗೊಂಡಿದೆ. ಜಿಹಾದ್‌, ಅಲ್ಲಾ ಓ ಅಕ್ಬರ್‌, ಮುಸಲ್ಮಾನರ ರಾಜ್ಯವನ್ನಾಗಿ ಪಣತೊಟ್ಟ ಟಿಪ್ಪು ಸುಲ್ತಾನ್- ಈ ಮೂರರ ಮೇಲೆ ಇಡೀ ನಾಟಕ ಕೇಂದ್ರೀಕೃತವಾಗಿದೆ” ಎಂದು ವಿವರಿಸಿದರು.

“ಅಡ್ಡಂಡ ಕಾರ್ಯಪ್ಪನವರಿಗೆ ಮೈಸೂರು ಇತಿಹಾಸದ ಕನಿಷ್ಠ ಪ್ರಜ್ಞೆಯೂ ಇಲ್ಲ. ಯಾವ ರಾಜರು ಹೈದರಾಲಿಯ ಕಾಲದಲ್ಲಿ ಆಳುತ್ತಿದ್ದರು ಎಂಬ ಪರಿವೇ ಇಲ್ಲ. ಇಮ್ಮಡಿ ಕೃಷ್ಣರಾಜ ಒಡೆಯರ ಹೆಸರಿನ ಬದಲಿಗೆ ನಂಜರಾಜ ಒಡೆಯರ್‌ ಎಂದು ಹೇಳಿಸಿದ್ದಾರೆ. ಶೃಂಗೇರಿ ಅರಸರು ಟಿಪ್ಪುವಿನೊಂದಿಗೆ ನಡೆಸುವ ಪತ್ರ ವ್ಯವಹಾರ 1791, 1792ರ ಅವಧಿಗೆ ಸೇರಿವೆ. ಆದರೆ ಅಡ್ಡಂಡ ಕಾರ್ಯಪ್ಪ ಈ ಪತ್ರವನ್ನು 1799, ಮೇ 4ನೇ ತಾರೀಖಿನಂದು ಬರೆಸಿದ್ದಾರೆ. ಈ ನಾಟಕ ಆಭಾಸಗಳಿಂದ ತುಂಬಿ ತುಳುಕುತ್ತಿದೆ. ಇಲ್ಲಿಯವರೆಗೆ ಯಾವ ಇತಿಹಾಸಕಾರರು ಬರೆಯದ, ಯಾವುದೇ ಕೃತಿಯಲ್ಲೂ ಇರದ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದಿರುವುದಾಗಿ ಕೊನೆಯಲ್ಲಿ ತೋರಿಸಲಾಗಿದೆ. ವಾಟ್ಸಾಪ್‌ ವಿಶ್ವವಿದ್ಯಾನಿಲಯ ಸಂಶೋಧನೆಯು ನಾಟಕವೊಂದರ ನಿಜಪಾತ್ರವಾಗಿ ಬಂದಿದೆ” ಎಂದು ವಿಷಾದಿಸಿದರು.

“‘ನಮ್ಮ ಟಿಪ್ಪು: ವದಂತಿ ಮತ್ತು ಸತ್ಯಸಂಗತಿ’ ಎಂಬ ಪುಟ್ಟ ಕೃತಿಯನ್ನು ರಚಿಸುತ್ತಿದ್ದೇನೆ. ಟಿಪ್ಪುವನ್ನು ಸಮರ್ಥಿಸುವ ಕೆಲಸವನ್ನೇನೂ ನಾನು ಮಾಡುತ್ತಿಲ್ಲ. ರಾಜಪ್ರಭುತ್ವದ ಕಾಲದವನಾದ ಟಿಪ್ಪು ಮಾಡಿದ ತಪ್ಪುಗಳನ್ನು ನಾವು ಒಪ್ಪಿಕೊಳ್ಳಬೇಕು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವಕ್ಕೂ ವ್ಯತ್ಯಾಸಗಳಿವೆ. ಭೂತವನ್ನು ವರ್ತಮಾನದಲ್ಲಿಟ್ಟು, ವರ್ತಮಾನದಲ್ಲಿ ಭವಿಷ್ಯಕ್ಕೆ ಮಾರಕವಾಗುವಂತೆ ನಡೆದುಕೊಳ್ಳುವುದು ಮತ್ತಷ್ಟು ಆಘಾತಕಾರಿ. ನಾವು ಕಟ್ಟುವ ಕೆಲಸ ಮಾಡಬೇಕು, ಒಡೆಯುವ ಕೆಲಸವನ್ನಲ್ಲ. ಭಾರತೀಯತೆ ನಮ್ಮ ಎದೆಯೊಳಗೆ ಇದೆ. ಅದರ ಪಾಠವನ್ನು ಇನ್ನ್ಯಾರೋ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿರಿ: ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

“ಟಿಪ್ಪುವಿನ ಬಗ್ಗೆ ಇವರು ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಐತಿಹಾಸಿಕವಾದ ಉತ್ತರವನ್ನು ಕೊಡುವ ಪ್ರಯತ್ನವನ್ನು ಈ ಪುಟ್ಟ ಕೃತಿಯಲ್ಲಿ ಮಾಡುತ್ತಿದ್ದೇನೆ. ನಾನು ಬರೆದಿರುವುದು ಸುಳ್ಳು ಎಂದು ಯಾರಾದರೂ ದಾಖಲೆ ಸಮೇತ ಸಾಬೀತುಪಡಿಸಿದರೆ ಒಪ್ಪಿಕೊಳ್ಳಲು ಸಿದ್ಧವಿದ್ದೇನೆ. ಟಿಪ್ಪು ಯಾರನ್ನೂ ಕೊಂದಿಲ್ಲ, ಮತಾಂತರ ಮಾಡಿಲ್ಲ ಎಂದು ಮೊಂಡುವಾದ ಮಾಡಲ್ಲ. ಇಡೀ ರಾಜಪ್ರಭುತ್ವದ ಚರಿತ್ರೆಯನ್ನು ನೋಡಿದರೆ ಟಿಪ್ಪುವಿನಂತೆಯೇ ಎಲ್ಲ ಅರಸರ ಇತಿಹಾಸವಿರುತ್ತದೆ. ತಮ್ಮ ಸಂಬಂಧಿಕರನ್ನೇ ಕೊಂದ ಘಟನೆಗಳು ಸಿಗುತ್ತವೆ. ಸತ್ಯಕ್ಕೆ ವಿದಾಯ ಹೇಳಿರುವ ಅಡ್ಡಂಡ ಕಾರ್ಯಪ್ಪ ಸರ್ಕಾರಕ್ಕೆ ಋಣಸಂದಾಯ ಮಾಡಿದ್ದಾರೆ ಅನಿಸುತ್ತದೆ. 30 ವರ್ಷಗಳ ರಂಗಾಯಣ ಇತಿಹಾಸದಲ್ಲಿ ಈ ನಮೂನೆಯ ಪೊಲೀಸರು ಯಾವತ್ತೂ ಬರಲಿಲ್ಲ. ಬಸವಲಿಂಗಯ್ಯನವರು ಇಡೀ ರಾತ್ರಿ ‘ಮಲೆಗಳಲ್ಲಿ ಮದುಮಗಳು’ ನಾಟಕವನ್ನು ಆಡಿಸಿದ್ದರು. ಸಾವಿರಾರು ಜನ ಬೇರೆ ಬೇರೆ ದೇಶಗಳಿಂದ ಬಂದು ನೋಡಿದರು. ಅಂದು ಹೀಗೆ ಪೊಲೀಸರು ಪ್ರವೇಶಿಸಿರಲಿಲ್ಲ” ಎಂದು ಹೇಳಿದರು.

“ನಾಟಕ ನೋಡಲು ಹೋಗದಂತೆ ನಮ್ಮನ್ನು ತಡೆಯಲಾಯಿತು. ಆದರೆ ಪೊಲೀಸರ ಅಕ್ಕಪಕ್ಕ ಕೂತು ನಾಟಕ ವೀಕ್ಷಿಸಲು ಅನುಮತಿ ಕೊಡಲಾಯಿತು. ನಮ್ಮ ಅಕ್ಕಪಕ್ಕದಲ್ಲಿ ಕೂತಿದ್ದ ಪೊಲೀಸರಿಗೆ ನಾವು ಕೃತ್ಯಜ್ಞತೆಯನ್ನು ಅರ್ಪಿಸುತ್ತೇವೆ. ಯಾಕೆಂದರೆ ನಾಟಕ ನೋಡಲು ಸಂಘಪರಿವಾರದ ಪ್ರೀತಿಪಾತ್ರರು ಬಂದಿದ್ದರು. ಉದ್ದೇಶಪೂರ್ವಕವಾಗಿ ನಾಟಕ ಮುಗಿದ ಮೇಲೆ ಅಡ್ಡಂಡ ಕಾರ್ಯಪ್ಪ ನಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸುವ ಸಾಧ್ಯತೆಯೂ ಇತ್ತು. ಬಹುಶಃ ಪೊಲೀಸರು ಇಲ್ಲದೆ ಇದ್ದಿದ್ದರೆ ನಾವು ಏಟು ತಿಂದುಕೊಂಡು ಹೊರಬರಬೇಕಿತ್ತೇನೋ, ಗೊತ್ತಿಲ್ಲ. ಹೀಗಾಗಿ ಅವರಿಗೆ ಥ್ಯಾಂಕ್ಸ್‌ ಹೇಳಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...