Homeಕರ್ನಾಟಕ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

- Advertisement -
- Advertisement -

ಯಾವ ಆಯಾಮದಲ್ಲಿ ನೋಡಿದರೂ, ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಉದ್ರೇಕಕಾರಿ ಭಾಷೆ ಹೊಂದಿದೆ, ಅದರಲ್ಲಿ ಮುಸ್ಲಿಮರು ಅನ್ಯರು ಎಂಬ ವಾಸನೆ ಇದೆ. 2002 ರ ಗುಜರಾತ್ ಹತ್ಯಾಕಾಂಡದ ಸಮರ್ಥನೆಯಿದೆ. ಗೋಧ್ರಾ ಘಟನೆ ನಂತರ ನಾನು ಊಹಿಸಿದಂತೆ ಅಲ್ಲಿ ದೊಡ್ಡ ಪ್ರತೀಕಾರ ನಡೆಯಿತು ಎಂಬ ’ಹೆಮ್ಮೆಯೂ’ ಇದೆ.

ಅವರ ಪೋಸ್ಟಿನಲ್ಲಿ ಅಲ್ಪಸಂಖ್ಯಾತರ ಮೇಲೆ ’ಸಂಘಪರಿವಾರ’ ನಡೆಸುವ ದಾಳಿಗೆ ಪರೋಕ್ಷ ಬೆಂಬಲವಿದೆ. ಮೊದಲಿನಿಂದಲೂ ಬಿಜೆಪಿ ಆರಾಧಕರೇ ಆಗಿರುವ ಅವರು, ಈ ಮಟ್ಟಿಗೆ ಭಜರಂಗದಳದ ಪುಂಡರ ಭಾಷೆ ಬಳಸುತ್ತಾರೆ, ದ್ವೇಷ ಕಕ್ಕುತ್ತಾರೆ ಎಂಬುದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈಗ ಅವರು ಗುಜರಾತ್ ಹತ್ಯಾಕಾಂಡ ಬಂಗಾಳದಲ್ಲಿ ನಡೆದೇ ನಡೆಯುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಈ ಪೋಸ್ಟ್ ಇರುವ ಕಾರಣಕ್ಕೆ ಬಲಪಂಥೀಯರು ಹಾಗೂ ಬಿಜೆಪಿ ಬೆಂಬಲಿಗರು ಇದನ್ನು ಎಲ್ಲ ರಾಜ್ಯಗಳಿಗೂ ಹರಡತೊಡಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ಅವರ ಪೋಸ್ಟ್ ಮೊದಲು ಓದಿ ಬಿಡಿ:

“27 ಫೆಬ್ರುವರಿ 2002 ರ ಬೆಳಿಗ್ಗೆ, ಗೋದ್ರಾ ಬಳಿ ರೈಲಿನಲ್ಲಿ 59 ಮಂದಿ ಕರಸೇವಕರನ್ನ ಸುಟ್ಟು ಕೊಂದಾಗ, ನನ್ನ ಒಬ್ಬ ಉದಾರವಾದಿ ನಿಲುವಿನ ಲಿಬರಲ್ ಗೆಳೆಯ – ಈಗ ಅವನ ಜೊತೆ ಗೆಳೆತನ ಇಲ್ಲ- ಅಹ್ಮದಾಬಾದಿನಿಂದ ಫೋನ್ ಮಾಡಿ, `ಇದು ಸಂಘಿಗಳಿಗೆ ಸರಿಯಾದ ಪಾಠ ಕಲಿಸುತ್ತದೆ’ ಅಂತ ಏನೋ ಹೇಳಿದ್ದ. ನಾನು ಹೇಳಿದ್ದೆ, ಇದಕ್ಕೆ ನೀಡಲಿರುವ ಪ್ರತೀಕಾರ ತ್ವರಿತವಾಗಿರುತ್ತದೆ ಮತ್ತು ಭೀಕರವಾಗಿರುತ್ತದೆ ಎಂದು. ಅದು ಹಾಗೇ ಆಯ್ತು.

ಹೌದು, ಗುಜರಾತಿನಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ 8% ಇರುವ ಕಾರಣ ಆ ಗಲಭೆ ಏಕಪಕ್ಷೀಯವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಬೇರೆ ಸನ್ನಿವೇಶವಿದೆ. ಮುಸ್ಲಿಮರು 30% ಇದ್ದಾರೆ. ಹೀಗಾಗಿ, ಪ್ರತೀಕಾರ ಅಷ್ಟೊಂದು ತ್ವರಿತವಾಗಿರುವುದಿಲ್ಲ. ಆದರೆ ತಪ್ಪು ತಿಳಿದುಕೊಳ್ಳಬೇಡಿ, ಅದು ಆಗಿಯೇ ಆಗುತ್ತದೆ. ಸಮಯ ಆದ ಹಾಗೆ ಹಿಂದು-ಮುಸ್ಲಿಂ ಗಲಭೆ ಏಳಲಿದೆ. ಅದು ಆದಾಗ, ಅದು ಬಹಳ ದುರಂತಮಯವಾಗಲಿದೆ, ಕ್ರೂರವಾಗಿರಲಿದೆ ಮತ್ತು ಸಂಘಟಿತವಾಗಿ ನಡೆಯಲಿದೆ.

ಈಗ ಬಹಳ ಶಾಂತ ರೀತಿಯಿಂದ ವರ್ತಿಸುವ ರಾಜ್ಯ ಸರ್ಕಾರ ಮತ್ತು ಲಿಬರಲ್‌ಗಳು, ’ಸಂಘಿಗಳಿಗೆ ಹಾಗೆ ಆಗಬೇಕು’ ಎಂತ ತಿಳಿದುಕೊಂಡಿದ್ದಾರೆ… ನಂತರ ಇವರೆಲ್ಲ ಲೆಕ್ಕಾಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತದೆ. ಈಗಾಗಲೇ ಇದನ್ನ ತಡೆಯಲು ಬಹಳ ತಡವಾಗಿದೆ” ಎಂದು ಪ್ರಕಾಶ್‌ ಬೆಳವಾಡಿ ಹೇಳಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸರ್ಕಾರದ ಒಂದು ಕೋಟಿ ರೂ. ಅನುದಾನದಲ್ಲಿ ಭೈರಪ್ಪನವರ ’ಪರ್ವ’ ಕೃತಿಯನ್ನು ನಾಟಕವಾಗಿ ರೂಪಾಂತರಿಸುವ ಕೆಲಸದಲ್ಲಿರುವ ಪ್ರಕಾಶ್ ಅವರಿಗೆ, ಬಂಗಾಳ ಚುನಾವಣೆಯಲ್ಲಿ ಬಿಜೆಪಿಗಾದ ಹೀನಾಯ ಸೋಲು ತೀವ್ರವಾಗಿ ತಾಕಿದಂತಿದೆ.

ಚುನಾವಣಾ ಫಲಿತಾಂಶದ ನಂತರ ನೆಡೆಯುವ ಗಲಾಟೆಗಳನ್ನು ದೊಡ್ಡದು ಮಾಡಿ, ಹಳೆಯ ವಿಡಿಯೋಗಳನ್ನು ಹಾಕಿ, ’ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ’ ಎಂದು ಅಭಿಯಾನ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್ ಮತ್ತು ಅದರ ಬೆಂಬಲಿಗರ ಜಾಯಮಾನದಲ್ಲೇ ಪ್ರಕಾಶ ಬೆಳವಾಡಿಯವರ ಪೋಸ್ಟ್ ಕೂಡ ಇದೆ.

ಈ ಕುರಿತು ಫೇಸ್‌ಬುಕ್ ಮತ್ತು ಇತರ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶರತ್‌ಚಂದ್ರ ಎನ್ನುವವರು, ’ಹಿಂದೆಯೂ ಎಫ್‌ಬಿಯಲ್ಲಿ ಅವರ ಪೋಸ್ಟ್ ಹೀಗೇ ಇದ್ದವಾದರೂ ನೇರವಾಗಿ ಸಂಘಪರಿವಾರದವರಂತೆ ಬರೆಯುತ್ತಿರಲಿಲ್ಲ. ಈಗ ತನ್ನ ನಿಜ ಮುಖದ ದರ್ಶನ ಮಾಡಿದ್ದಾರೆ ಈ ಬೆಳವಾಡಿ. ಈಗ ತನ್ನ ಪ್ರೊಫೈಲ್ ಅನ್ನೂ ಡಿ-ಆಕ್ಟಿವೇಟ್ ಮಾಡಿಕೊಂಡಿದ್ದಾರೆ’ ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ಬಂದ ಪ್ರತಿಕ್ರಿಯೆಗಳಲ್ಲಿ ಬೆಳವಾಡಿ ಅವರ ’ಸಂಘಪರಿವಾರ’ದ ಮನಸ್ಥಿತಿಯನ್ನು ಟೀಕಿಸಲಾಗಿದೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ನಟ ಅಹಿಂಸಾ ಚೇತನ್, `ನಾನು ಆ ಪೋಸ್ಟ್ ಓದಿಲ್ಲ. ಸಾರಾಂಶ ಕೇಳಿದ್ದೇನೆ. ಬೆಳವಾಡಿಯವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಲಾರೆ. ಅವರು ವೈಚಾರಿಕವಾಗಿ ಶೂನ್ಯರು, ಸಮಾಜ ನೋಡುವ ದೃಷ್ಟಿಕೋನವೆ ಅವರಲಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಇದೆಲ್ಲ ಬೇಕಿತ್ತ? ಲಕ್ಷಾಂತರ ಜನ ಹಾಸಿಗೆ, ಆಕ್ಸಿಜನ್ ಇಲ್ಲದೇ ಸಾಯುತ್ತಿರುವಾಗ ಕೋಮುಗಲಭೆ ಪ್ರಚೋದಿಸುವ ಪೋಸ್ಟ್‌ಗಳನ್ನು ನಿರ್ಲಕ್ಷ್ಯ ಮಾಡುವುದೇ ಒಳ್ಳೆಯದು. ಅವು ಮತ್ತೆ ಮುನ್ನೆಲೆಗೆ ಬರದಂತೆ ಮಾಡಬೇಕಾಗಿದೆ. ಈಗ ನಮ್ಮ ಕಾಳಜಿ ಕೋವಿಡ್ ಬಿಕ್ಕಟ್ಟನ್ನು ಪರಿಹರಿಸುವತ್ತ ಇರಬೇಕು…’ ಎಂದು ಹೇಳಿದರು.

ಕತೆಗಾರ, ನಾಟಕಕಾರ ಹನುಮಂತ ಹಾಲಿಗೇರಿ, ‘ಸಾಹಿತ್ಯ, ರಂಗಭೂಮಿ, ಕಲೆ ಇವು ಮನುಷ್ಯನ ಯೋಚನಾ ಲಹರಿಯನ್ನು ಹದ ಮಾಡಿ, ಮಾನವೀಯತೆ ಅಂಶ ಬೆಳೆಸುತ್ತವೆ. ಆದರೆ ರಂಗಭೂಮಿಯ ಹಿನ್ನೆಲೆಯ ಪ್ರಕಾಶ್ ಬೆಳವಾಡಿಯವರು ವಯಸ್ಸಾದಂತೆಲ್ಲ ಹೆಚ್ಚೆಚ್ಚು ಮಾನವೀಯರಾಗುವ ಬದಲು ಕ್ರೂರ ಮತ್ತು ಕೋಮುವಾದಿ ಸಂದೇಶಗಳನ್ನು ಹರಡುತ್ತಿರುವುದು ವಿಷಾದನೀಯ.

ಸರ್ಕಾರ ಅವರ ‘ಪರ್ವ’ ನಾಟಕ ಪ್ರದರ್ಶನಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಭೈರಪ್ಪನವರು ಆರಂಭದಲ್ಲಿ ಬರೆದ ಈ ಕಾದಂಬರಿಯಲ್ಲಿ ಕೋಮುವಾದಿ, ಜಾತಿವಾದಿ ಅಂಶಗಳಿಲ್ಲ. ಆದರೆ ಬೆಳವಾಡಿ ಅವರು ಈ ಕೃತಿ ಆಧರಿತ ನಾಟಕದಲ್ಲಿ ಕೋಮುವಿಷ ಬೆರೆಸುತ್ತಾರೇನೋ ಎಂಬ ಸಂಶಯ ಶುರುವಾಗಿದೆ’ ಎಂದು ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಕಾಶ್ ಬೆಳವಾಡಿಯ ಹೇಳಿಕೆ ಕಂಡನಾರ್ಹ ಹಾಗೂ ಈ ಕಲಾವಿದ “ಮಾರಿಕೊಂಡವರು” ಗುಂಪನ್ನು ಸೇರಿದ್ದು ನೋವಿನ ಸಂಗತಿ.

  2. ಕೂಡಲೇ ಈತನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇವನ ಮೇಲೆ ದೇಶದ್ರೋಹದ ಪ್ರಕರಣ ಹಾಕಿ ನೇಣುಗಂಬಕ್ಕೆ ಏರಿಸಿ. ಮುಂದಾಗುವ ಮತಿಯ ಘರ್ಷಣೆ ತಡೆಯಲು ಇವನ ಬಂಧನ ಹಾಗೂ ಮರಣದಂಡನೆ ಒಂದೇ ಮಾರ್ಗ.

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...