Homeಕರ್ನಾಟಕ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

- Advertisement -
- Advertisement -

ಯಾವ ಆಯಾಮದಲ್ಲಿ ನೋಡಿದರೂ, ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಉದ್ರೇಕಕಾರಿ ಭಾಷೆ ಹೊಂದಿದೆ, ಅದರಲ್ಲಿ ಮುಸ್ಲಿಮರು ಅನ್ಯರು ಎಂಬ ವಾಸನೆ ಇದೆ. 2002 ರ ಗುಜರಾತ್ ಹತ್ಯಾಕಾಂಡದ ಸಮರ್ಥನೆಯಿದೆ. ಗೋಧ್ರಾ ಘಟನೆ ನಂತರ ನಾನು ಊಹಿಸಿದಂತೆ ಅಲ್ಲಿ ದೊಡ್ಡ ಪ್ರತೀಕಾರ ನಡೆಯಿತು ಎಂಬ ’ಹೆಮ್ಮೆಯೂ’ ಇದೆ.

ಅವರ ಪೋಸ್ಟಿನಲ್ಲಿ ಅಲ್ಪಸಂಖ್ಯಾತರ ಮೇಲೆ ’ಸಂಘಪರಿವಾರ’ ನಡೆಸುವ ದಾಳಿಗೆ ಪರೋಕ್ಷ ಬೆಂಬಲವಿದೆ. ಮೊದಲಿನಿಂದಲೂ ಬಿಜೆಪಿ ಆರಾಧಕರೇ ಆಗಿರುವ ಅವರು, ಈ ಮಟ್ಟಿಗೆ ಭಜರಂಗದಳದ ಪುಂಡರ ಭಾಷೆ ಬಳಸುತ್ತಾರೆ, ದ್ವೇಷ ಕಕ್ಕುತ್ತಾರೆ ಎಂಬುದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈಗ ಅವರು ಗುಜರಾತ್ ಹತ್ಯಾಕಾಂಡ ಬಂಗಾಳದಲ್ಲಿ ನಡೆದೇ ನಡೆಯುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಈ ಪೋಸ್ಟ್ ಇರುವ ಕಾರಣಕ್ಕೆ ಬಲಪಂಥೀಯರು ಹಾಗೂ ಬಿಜೆಪಿ ಬೆಂಬಲಿಗರು ಇದನ್ನು ಎಲ್ಲ ರಾಜ್ಯಗಳಿಗೂ ಹರಡತೊಡಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ಅವರ ಪೋಸ್ಟ್ ಮೊದಲು ಓದಿ ಬಿಡಿ:

“27 ಫೆಬ್ರುವರಿ 2002 ರ ಬೆಳಿಗ್ಗೆ, ಗೋದ್ರಾ ಬಳಿ ರೈಲಿನಲ್ಲಿ 59 ಮಂದಿ ಕರಸೇವಕರನ್ನ ಸುಟ್ಟು ಕೊಂದಾಗ, ನನ್ನ ಒಬ್ಬ ಉದಾರವಾದಿ ನಿಲುವಿನ ಲಿಬರಲ್ ಗೆಳೆಯ – ಈಗ ಅವನ ಜೊತೆ ಗೆಳೆತನ ಇಲ್ಲ- ಅಹ್ಮದಾಬಾದಿನಿಂದ ಫೋನ್ ಮಾಡಿ, `ಇದು ಸಂಘಿಗಳಿಗೆ ಸರಿಯಾದ ಪಾಠ ಕಲಿಸುತ್ತದೆ’ ಅಂತ ಏನೋ ಹೇಳಿದ್ದ. ನಾನು ಹೇಳಿದ್ದೆ, ಇದಕ್ಕೆ ನೀಡಲಿರುವ ಪ್ರತೀಕಾರ ತ್ವರಿತವಾಗಿರುತ್ತದೆ ಮತ್ತು ಭೀಕರವಾಗಿರುತ್ತದೆ ಎಂದು. ಅದು ಹಾಗೇ ಆಯ್ತು.

ಹೌದು, ಗುಜರಾತಿನಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ 8% ಇರುವ ಕಾರಣ ಆ ಗಲಭೆ ಏಕಪಕ್ಷೀಯವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಬೇರೆ ಸನ್ನಿವೇಶವಿದೆ. ಮುಸ್ಲಿಮರು 30% ಇದ್ದಾರೆ. ಹೀಗಾಗಿ, ಪ್ರತೀಕಾರ ಅಷ್ಟೊಂದು ತ್ವರಿತವಾಗಿರುವುದಿಲ್ಲ. ಆದರೆ ತಪ್ಪು ತಿಳಿದುಕೊಳ್ಳಬೇಡಿ, ಅದು ಆಗಿಯೇ ಆಗುತ್ತದೆ. ಸಮಯ ಆದ ಹಾಗೆ ಹಿಂದು-ಮುಸ್ಲಿಂ ಗಲಭೆ ಏಳಲಿದೆ. ಅದು ಆದಾಗ, ಅದು ಬಹಳ ದುರಂತಮಯವಾಗಲಿದೆ, ಕ್ರೂರವಾಗಿರಲಿದೆ ಮತ್ತು ಸಂಘಟಿತವಾಗಿ ನಡೆಯಲಿದೆ.

ಈಗ ಬಹಳ ಶಾಂತ ರೀತಿಯಿಂದ ವರ್ತಿಸುವ ರಾಜ್ಯ ಸರ್ಕಾರ ಮತ್ತು ಲಿಬರಲ್‌ಗಳು, ’ಸಂಘಿಗಳಿಗೆ ಹಾಗೆ ಆಗಬೇಕು’ ಎಂತ ತಿಳಿದುಕೊಂಡಿದ್ದಾರೆ… ನಂತರ ಇವರೆಲ್ಲ ಲೆಕ್ಕಾಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತದೆ. ಈಗಾಗಲೇ ಇದನ್ನ ತಡೆಯಲು ಬಹಳ ತಡವಾಗಿದೆ” ಎಂದು ಪ್ರಕಾಶ್‌ ಬೆಳವಾಡಿ ಹೇಳಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸರ್ಕಾರದ ಒಂದು ಕೋಟಿ ರೂ. ಅನುದಾನದಲ್ಲಿ ಭೈರಪ್ಪನವರ ’ಪರ್ವ’ ಕೃತಿಯನ್ನು ನಾಟಕವಾಗಿ ರೂಪಾಂತರಿಸುವ ಕೆಲಸದಲ್ಲಿರುವ ಪ್ರಕಾಶ್ ಅವರಿಗೆ, ಬಂಗಾಳ ಚುನಾವಣೆಯಲ್ಲಿ ಬಿಜೆಪಿಗಾದ ಹೀನಾಯ ಸೋಲು ತೀವ್ರವಾಗಿ ತಾಕಿದಂತಿದೆ.

ಚುನಾವಣಾ ಫಲಿತಾಂಶದ ನಂತರ ನೆಡೆಯುವ ಗಲಾಟೆಗಳನ್ನು ದೊಡ್ಡದು ಮಾಡಿ, ಹಳೆಯ ವಿಡಿಯೋಗಳನ್ನು ಹಾಕಿ, ’ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ’ ಎಂದು ಅಭಿಯಾನ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್ ಮತ್ತು ಅದರ ಬೆಂಬಲಿಗರ ಜಾಯಮಾನದಲ್ಲೇ ಪ್ರಕಾಶ ಬೆಳವಾಡಿಯವರ ಪೋಸ್ಟ್ ಕೂಡ ಇದೆ.

ಈ ಕುರಿತು ಫೇಸ್‌ಬುಕ್ ಮತ್ತು ಇತರ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶರತ್‌ಚಂದ್ರ ಎನ್ನುವವರು, ’ಹಿಂದೆಯೂ ಎಫ್‌ಬಿಯಲ್ಲಿ ಅವರ ಪೋಸ್ಟ್ ಹೀಗೇ ಇದ್ದವಾದರೂ ನೇರವಾಗಿ ಸಂಘಪರಿವಾರದವರಂತೆ ಬರೆಯುತ್ತಿರಲಿಲ್ಲ. ಈಗ ತನ್ನ ನಿಜ ಮುಖದ ದರ್ಶನ ಮಾಡಿದ್ದಾರೆ ಈ ಬೆಳವಾಡಿ. ಈಗ ತನ್ನ ಪ್ರೊಫೈಲ್ ಅನ್ನೂ ಡಿ-ಆಕ್ಟಿವೇಟ್ ಮಾಡಿಕೊಂಡಿದ್ದಾರೆ’ ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ಬಂದ ಪ್ರತಿಕ್ರಿಯೆಗಳಲ್ಲಿ ಬೆಳವಾಡಿ ಅವರ ’ಸಂಘಪರಿವಾರ’ದ ಮನಸ್ಥಿತಿಯನ್ನು ಟೀಕಿಸಲಾಗಿದೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ನಟ ಅಹಿಂಸಾ ಚೇತನ್, `ನಾನು ಆ ಪೋಸ್ಟ್ ಓದಿಲ್ಲ. ಸಾರಾಂಶ ಕೇಳಿದ್ದೇನೆ. ಬೆಳವಾಡಿಯವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಲಾರೆ. ಅವರು ವೈಚಾರಿಕವಾಗಿ ಶೂನ್ಯರು, ಸಮಾಜ ನೋಡುವ ದೃಷ್ಟಿಕೋನವೆ ಅವರಲಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಇದೆಲ್ಲ ಬೇಕಿತ್ತ? ಲಕ್ಷಾಂತರ ಜನ ಹಾಸಿಗೆ, ಆಕ್ಸಿಜನ್ ಇಲ್ಲದೇ ಸಾಯುತ್ತಿರುವಾಗ ಕೋಮುಗಲಭೆ ಪ್ರಚೋದಿಸುವ ಪೋಸ್ಟ್‌ಗಳನ್ನು ನಿರ್ಲಕ್ಷ್ಯ ಮಾಡುವುದೇ ಒಳ್ಳೆಯದು. ಅವು ಮತ್ತೆ ಮುನ್ನೆಲೆಗೆ ಬರದಂತೆ ಮಾಡಬೇಕಾಗಿದೆ. ಈಗ ನಮ್ಮ ಕಾಳಜಿ ಕೋವಿಡ್ ಬಿಕ್ಕಟ್ಟನ್ನು ಪರಿಹರಿಸುವತ್ತ ಇರಬೇಕು…’ ಎಂದು ಹೇಳಿದರು.

ಕತೆಗಾರ, ನಾಟಕಕಾರ ಹನುಮಂತ ಹಾಲಿಗೇರಿ, ‘ಸಾಹಿತ್ಯ, ರಂಗಭೂಮಿ, ಕಲೆ ಇವು ಮನುಷ್ಯನ ಯೋಚನಾ ಲಹರಿಯನ್ನು ಹದ ಮಾಡಿ, ಮಾನವೀಯತೆ ಅಂಶ ಬೆಳೆಸುತ್ತವೆ. ಆದರೆ ರಂಗಭೂಮಿಯ ಹಿನ್ನೆಲೆಯ ಪ್ರಕಾಶ್ ಬೆಳವಾಡಿಯವರು ವಯಸ್ಸಾದಂತೆಲ್ಲ ಹೆಚ್ಚೆಚ್ಚು ಮಾನವೀಯರಾಗುವ ಬದಲು ಕ್ರೂರ ಮತ್ತು ಕೋಮುವಾದಿ ಸಂದೇಶಗಳನ್ನು ಹರಡುತ್ತಿರುವುದು ವಿಷಾದನೀಯ.

ಸರ್ಕಾರ ಅವರ ‘ಪರ್ವ’ ನಾಟಕ ಪ್ರದರ್ಶನಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಭೈರಪ್ಪನವರು ಆರಂಭದಲ್ಲಿ ಬರೆದ ಈ ಕಾದಂಬರಿಯಲ್ಲಿ ಕೋಮುವಾದಿ, ಜಾತಿವಾದಿ ಅಂಶಗಳಿಲ್ಲ. ಆದರೆ ಬೆಳವಾಡಿ ಅವರು ಈ ಕೃತಿ ಆಧರಿತ ನಾಟಕದಲ್ಲಿ ಕೋಮುವಿಷ ಬೆರೆಸುತ್ತಾರೇನೋ ಎಂಬ ಸಂಶಯ ಶುರುವಾಗಿದೆ’ ಎಂದು ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಕಾಶ್ ಬೆಳವಾಡಿಯ ಹೇಳಿಕೆ ಕಂಡನಾರ್ಹ ಹಾಗೂ ಈ ಕಲಾವಿದ “ಮಾರಿಕೊಂಡವರು” ಗುಂಪನ್ನು ಸೇರಿದ್ದು ನೋವಿನ ಸಂಗತಿ.

  2. ಕೂಡಲೇ ಈತನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇವನ ಮೇಲೆ ದೇಶದ್ರೋಹದ ಪ್ರಕರಣ ಹಾಕಿ ನೇಣುಗಂಬಕ್ಕೆ ಏರಿಸಿ. ಮುಂದಾಗುವ ಮತಿಯ ಘರ್ಷಣೆ ತಡೆಯಲು ಇವನ ಬಂಧನ ಹಾಗೂ ಮರಣದಂಡನೆ ಒಂದೇ ಮಾರ್ಗ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...