Homeಕರ್ನಾಟಕ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

- Advertisement -
- Advertisement -

ಯಾವ ಆಯಾಮದಲ್ಲಿ ನೋಡಿದರೂ, ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಉದ್ರೇಕಕಾರಿ ಭಾಷೆ ಹೊಂದಿದೆ, ಅದರಲ್ಲಿ ಮುಸ್ಲಿಮರು ಅನ್ಯರು ಎಂಬ ವಾಸನೆ ಇದೆ. 2002 ರ ಗುಜರಾತ್ ಹತ್ಯಾಕಾಂಡದ ಸಮರ್ಥನೆಯಿದೆ. ಗೋಧ್ರಾ ಘಟನೆ ನಂತರ ನಾನು ಊಹಿಸಿದಂತೆ ಅಲ್ಲಿ ದೊಡ್ಡ ಪ್ರತೀಕಾರ ನಡೆಯಿತು ಎಂಬ ’ಹೆಮ್ಮೆಯೂ’ ಇದೆ.

ಅವರ ಪೋಸ್ಟಿನಲ್ಲಿ ಅಲ್ಪಸಂಖ್ಯಾತರ ಮೇಲೆ ’ಸಂಘಪರಿವಾರ’ ನಡೆಸುವ ದಾಳಿಗೆ ಪರೋಕ್ಷ ಬೆಂಬಲವಿದೆ. ಮೊದಲಿನಿಂದಲೂ ಬಿಜೆಪಿ ಆರಾಧಕರೇ ಆಗಿರುವ ಅವರು, ಈ ಮಟ್ಟಿಗೆ ಭಜರಂಗದಳದ ಪುಂಡರ ಭಾಷೆ ಬಳಸುತ್ತಾರೆ, ದ್ವೇಷ ಕಕ್ಕುತ್ತಾರೆ ಎಂಬುದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈಗ ಅವರು ಗುಜರಾತ್ ಹತ್ಯಾಕಾಂಡ ಬಂಗಾಳದಲ್ಲಿ ನಡೆದೇ ನಡೆಯುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಈ ಪೋಸ್ಟ್ ಇರುವ ಕಾರಣಕ್ಕೆ ಬಲಪಂಥೀಯರು ಹಾಗೂ ಬಿಜೆಪಿ ಬೆಂಬಲಿಗರು ಇದನ್ನು ಎಲ್ಲ ರಾಜ್ಯಗಳಿಗೂ ಹರಡತೊಡಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ಅವರ ಪೋಸ್ಟ್ ಮೊದಲು ಓದಿ ಬಿಡಿ:

“27 ಫೆಬ್ರುವರಿ 2002 ರ ಬೆಳಿಗ್ಗೆ, ಗೋದ್ರಾ ಬಳಿ ರೈಲಿನಲ್ಲಿ 59 ಮಂದಿ ಕರಸೇವಕರನ್ನ ಸುಟ್ಟು ಕೊಂದಾಗ, ನನ್ನ ಒಬ್ಬ ಉದಾರವಾದಿ ನಿಲುವಿನ ಲಿಬರಲ್ ಗೆಳೆಯ – ಈಗ ಅವನ ಜೊತೆ ಗೆಳೆತನ ಇಲ್ಲ- ಅಹ್ಮದಾಬಾದಿನಿಂದ ಫೋನ್ ಮಾಡಿ, `ಇದು ಸಂಘಿಗಳಿಗೆ ಸರಿಯಾದ ಪಾಠ ಕಲಿಸುತ್ತದೆ’ ಅಂತ ಏನೋ ಹೇಳಿದ್ದ. ನಾನು ಹೇಳಿದ್ದೆ, ಇದಕ್ಕೆ ನೀಡಲಿರುವ ಪ್ರತೀಕಾರ ತ್ವರಿತವಾಗಿರುತ್ತದೆ ಮತ್ತು ಭೀಕರವಾಗಿರುತ್ತದೆ ಎಂದು. ಅದು ಹಾಗೇ ಆಯ್ತು.

ಹೌದು, ಗುಜರಾತಿನಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ 8% ಇರುವ ಕಾರಣ ಆ ಗಲಭೆ ಏಕಪಕ್ಷೀಯವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಬೇರೆ ಸನ್ನಿವೇಶವಿದೆ. ಮುಸ್ಲಿಮರು 30% ಇದ್ದಾರೆ. ಹೀಗಾಗಿ, ಪ್ರತೀಕಾರ ಅಷ್ಟೊಂದು ತ್ವರಿತವಾಗಿರುವುದಿಲ್ಲ. ಆದರೆ ತಪ್ಪು ತಿಳಿದುಕೊಳ್ಳಬೇಡಿ, ಅದು ಆಗಿಯೇ ಆಗುತ್ತದೆ. ಸಮಯ ಆದ ಹಾಗೆ ಹಿಂದು-ಮುಸ್ಲಿಂ ಗಲಭೆ ಏಳಲಿದೆ. ಅದು ಆದಾಗ, ಅದು ಬಹಳ ದುರಂತಮಯವಾಗಲಿದೆ, ಕ್ರೂರವಾಗಿರಲಿದೆ ಮತ್ತು ಸಂಘಟಿತವಾಗಿ ನಡೆಯಲಿದೆ.

ಈಗ ಬಹಳ ಶಾಂತ ರೀತಿಯಿಂದ ವರ್ತಿಸುವ ರಾಜ್ಯ ಸರ್ಕಾರ ಮತ್ತು ಲಿಬರಲ್‌ಗಳು, ’ಸಂಘಿಗಳಿಗೆ ಹಾಗೆ ಆಗಬೇಕು’ ಎಂತ ತಿಳಿದುಕೊಂಡಿದ್ದಾರೆ… ನಂತರ ಇವರೆಲ್ಲ ಲೆಕ್ಕಾಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತದೆ. ಈಗಾಗಲೇ ಇದನ್ನ ತಡೆಯಲು ಬಹಳ ತಡವಾಗಿದೆ” ಎಂದು ಪ್ರಕಾಶ್‌ ಬೆಳವಾಡಿ ಹೇಳಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸರ್ಕಾರದ ಒಂದು ಕೋಟಿ ರೂ. ಅನುದಾನದಲ್ಲಿ ಭೈರಪ್ಪನವರ ’ಪರ್ವ’ ಕೃತಿಯನ್ನು ನಾಟಕವಾಗಿ ರೂಪಾಂತರಿಸುವ ಕೆಲಸದಲ್ಲಿರುವ ಪ್ರಕಾಶ್ ಅವರಿಗೆ, ಬಂಗಾಳ ಚುನಾವಣೆಯಲ್ಲಿ ಬಿಜೆಪಿಗಾದ ಹೀನಾಯ ಸೋಲು ತೀವ್ರವಾಗಿ ತಾಕಿದಂತಿದೆ.

ಚುನಾವಣಾ ಫಲಿತಾಂಶದ ನಂತರ ನೆಡೆಯುವ ಗಲಾಟೆಗಳನ್ನು ದೊಡ್ಡದು ಮಾಡಿ, ಹಳೆಯ ವಿಡಿಯೋಗಳನ್ನು ಹಾಕಿ, ’ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ’ ಎಂದು ಅಭಿಯಾನ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್ ಮತ್ತು ಅದರ ಬೆಂಬಲಿಗರ ಜಾಯಮಾನದಲ್ಲೇ ಪ್ರಕಾಶ ಬೆಳವಾಡಿಯವರ ಪೋಸ್ಟ್ ಕೂಡ ಇದೆ.

ಈ ಕುರಿತು ಫೇಸ್‌ಬುಕ್ ಮತ್ತು ಇತರ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶರತ್‌ಚಂದ್ರ ಎನ್ನುವವರು, ’ಹಿಂದೆಯೂ ಎಫ್‌ಬಿಯಲ್ಲಿ ಅವರ ಪೋಸ್ಟ್ ಹೀಗೇ ಇದ್ದವಾದರೂ ನೇರವಾಗಿ ಸಂಘಪರಿವಾರದವರಂತೆ ಬರೆಯುತ್ತಿರಲಿಲ್ಲ. ಈಗ ತನ್ನ ನಿಜ ಮುಖದ ದರ್ಶನ ಮಾಡಿದ್ದಾರೆ ಈ ಬೆಳವಾಡಿ. ಈಗ ತನ್ನ ಪ್ರೊಫೈಲ್ ಅನ್ನೂ ಡಿ-ಆಕ್ಟಿವೇಟ್ ಮಾಡಿಕೊಂಡಿದ್ದಾರೆ’ ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ಬಂದ ಪ್ರತಿಕ್ರಿಯೆಗಳಲ್ಲಿ ಬೆಳವಾಡಿ ಅವರ ’ಸಂಘಪರಿವಾರ’ದ ಮನಸ್ಥಿತಿಯನ್ನು ಟೀಕಿಸಲಾಗಿದೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ನಟ ಅಹಿಂಸಾ ಚೇತನ್, `ನಾನು ಆ ಪೋಸ್ಟ್ ಓದಿಲ್ಲ. ಸಾರಾಂಶ ಕೇಳಿದ್ದೇನೆ. ಬೆಳವಾಡಿಯವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಲಾರೆ. ಅವರು ವೈಚಾರಿಕವಾಗಿ ಶೂನ್ಯರು, ಸಮಾಜ ನೋಡುವ ದೃಷ್ಟಿಕೋನವೆ ಅವರಲಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಇದೆಲ್ಲ ಬೇಕಿತ್ತ? ಲಕ್ಷಾಂತರ ಜನ ಹಾಸಿಗೆ, ಆಕ್ಸಿಜನ್ ಇಲ್ಲದೇ ಸಾಯುತ್ತಿರುವಾಗ ಕೋಮುಗಲಭೆ ಪ್ರಚೋದಿಸುವ ಪೋಸ್ಟ್‌ಗಳನ್ನು ನಿರ್ಲಕ್ಷ್ಯ ಮಾಡುವುದೇ ಒಳ್ಳೆಯದು. ಅವು ಮತ್ತೆ ಮುನ್ನೆಲೆಗೆ ಬರದಂತೆ ಮಾಡಬೇಕಾಗಿದೆ. ಈಗ ನಮ್ಮ ಕಾಳಜಿ ಕೋವಿಡ್ ಬಿಕ್ಕಟ್ಟನ್ನು ಪರಿಹರಿಸುವತ್ತ ಇರಬೇಕು…’ ಎಂದು ಹೇಳಿದರು.

ಕತೆಗಾರ, ನಾಟಕಕಾರ ಹನುಮಂತ ಹಾಲಿಗೇರಿ, ‘ಸಾಹಿತ್ಯ, ರಂಗಭೂಮಿ, ಕಲೆ ಇವು ಮನುಷ್ಯನ ಯೋಚನಾ ಲಹರಿಯನ್ನು ಹದ ಮಾಡಿ, ಮಾನವೀಯತೆ ಅಂಶ ಬೆಳೆಸುತ್ತವೆ. ಆದರೆ ರಂಗಭೂಮಿಯ ಹಿನ್ನೆಲೆಯ ಪ್ರಕಾಶ್ ಬೆಳವಾಡಿಯವರು ವಯಸ್ಸಾದಂತೆಲ್ಲ ಹೆಚ್ಚೆಚ್ಚು ಮಾನವೀಯರಾಗುವ ಬದಲು ಕ್ರೂರ ಮತ್ತು ಕೋಮುವಾದಿ ಸಂದೇಶಗಳನ್ನು ಹರಡುತ್ತಿರುವುದು ವಿಷಾದನೀಯ.

ಸರ್ಕಾರ ಅವರ ‘ಪರ್ವ’ ನಾಟಕ ಪ್ರದರ್ಶನಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಭೈರಪ್ಪನವರು ಆರಂಭದಲ್ಲಿ ಬರೆದ ಈ ಕಾದಂಬರಿಯಲ್ಲಿ ಕೋಮುವಾದಿ, ಜಾತಿವಾದಿ ಅಂಶಗಳಿಲ್ಲ. ಆದರೆ ಬೆಳವಾಡಿ ಅವರು ಈ ಕೃತಿ ಆಧರಿತ ನಾಟಕದಲ್ಲಿ ಕೋಮುವಿಷ ಬೆರೆಸುತ್ತಾರೇನೋ ಎಂಬ ಸಂಶಯ ಶುರುವಾಗಿದೆ’ ಎಂದು ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಕಾಶ್ ಬೆಳವಾಡಿಯ ಹೇಳಿಕೆ ಕಂಡನಾರ್ಹ ಹಾಗೂ ಈ ಕಲಾವಿದ “ಮಾರಿಕೊಂಡವರು” ಗುಂಪನ್ನು ಸೇರಿದ್ದು ನೋವಿನ ಸಂಗತಿ.

  2. ಕೂಡಲೇ ಈತನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇವನ ಮೇಲೆ ದೇಶದ್ರೋಹದ ಪ್ರಕರಣ ಹಾಕಿ ನೇಣುಗಂಬಕ್ಕೆ ಏರಿಸಿ. ಮುಂದಾಗುವ ಮತಿಯ ಘರ್ಷಣೆ ತಡೆಯಲು ಇವನ ಬಂಧನ ಹಾಗೂ ಮರಣದಂಡನೆ ಒಂದೇ ಮಾರ್ಗ.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...