Homeಅಂತರಾಷ್ಟ್ರೀಯತೆರೆಸಾ ಮೇಗೆ 'Exit' ಎಂದ ಬ್ರಿಟನ್

ತೆರೆಸಾ ಮೇಗೆ ‘Exit’ ಎಂದ ಬ್ರಿಟನ್

2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ

- Advertisement -
- Advertisement -

| ಡಾ.ಸ್ವಾತಿ ಶುಕ್ಲಾ |

ಬ್ರೆಕ್ಸಿಟ್ ಒಪ್ಪಂದವೊಂದನ್ನು ಸಾಧಿಸಲು ವಿಫಲರಾದ ಬಳಿಕ ಯುಕೆ ಪ್ರಧಾನಿ ತೆರೆಸಾ ಮೇ ಅವರು, ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಮತ್ತು ಬ್ರಿಟನ್‌ನ ಪ್ರಧಾನಿಯಾಗಿ ತನ್ನ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತಾನು ಜೂನ್ 7ರಂದು ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕತ್ವ ತ್ಯಜಿಸುವುದಾಗಿ ಅವರು ತನ್ನ ಘೋಷಣೆಯಲ್ಲಿ ತಿಳಿಸಿದ್ದಾರೆ. 

ಬ್ರೆಕ್ಸಿಟ್ (Brexit)
ಬ್ರೆಕ್ಸಿಟ್- (ಬ್ರಿಟನ್ ಮತ್ತು ಎಕ್ಸಿಟ್ ಎಂಬ ಎರಡು ಪದಗಳ ಸಂಕ್ಷೇಪ) ಎಂಬುದು ಯುಕೆಯ ಯುರೋಪಿಯನ್ ಯೂನಿಯನ್ (ಐರೋಪ್ಯ ಒಕ್ಕೂಟ)ನಲ್ಲಿ ಮುಂದುವರಿಯಬೇಕೆ, ಹೊರಬರಬೇಕೆ ಎಂಬುದನ್ನು ನಿರ್ಧರಿಸಲು 23 ಜೂನ್ 2016ರಲ್ಲಿ ನಡೆದ ಜನಮತಗಣನೆ.

ಈ ಜನಮತಗಣನೆಯಲ್ಲಿ 71.8 ಶೇಕಡಾ ಮತದಾರರು, ಎಂದರೆ ಸುಮಾರು ಮೂರು ಕೋಟಿ ಮತದಾರರು ಮತ ಚಲಾಯಿಸಿದ್ದು, ಹೊರಬರುವ ತೀರ್ಮಾನ 51.9 ಶೇಕಡಾ- 48.1 ಶೇಕಡಾ ನಿಕಟ ಅಂತರದಿಂದ ಜಯಿಸಿತ್ತು. ಆದರೆ, ಈ ಜನಮತಗಣನೆ ನಡೆದು ಹೆಚ್ಚುಕಡಿಮೆ ಮೂರು ವರ್ಷಗಳ ನಂತರವೂ ತಾನು 1973ರಲ್ಲಿ ಸೇರಿದ್ದ ಐರೋಪ್ಯ ಒಕ್ಕೂಟದಿಂದ ಹೊರಬರುವುದು ಹೇಗೆ ಎಂಬುದು ಬಿಡಿ, ಹೊರಬರಬೇಕೋ ಬೇಡವೋ ಎಂಬ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲು ಬ್ರಿಟನ್ ವಿಫಲವಾಗಿದೆ.

ಇಯು, ಎಂದು ಗುರುತಿಸಲ್ಪಡುವ ಐರೋಪ್ಯ ಒಕ್ಕೂಟವು 28 ಐರೋಪ್ಯ ದೇಶಗಳ ಆರ್ಥಿಕ ಮತ್ತು ರಾಜಕೀಯ ಸಹಭಾಗಿತ್ವವಾಗಿದೆ. ಎರಡನೇ ಮಹಾಯುದ್ಧದ ಬಳಿಕ- ಪರಸ್ಪರ ವಾಣಿಜ್ಯ, ವ್ಯಾಪಾರ ಇರುವ ದೇಶಗಳ ನಡುವೆ ಯುದ್ಧದ ಸಂಭವ ಕಡಿಮೆ ಎಂಬ ನೆಲೆಯಲ್ಲಿ ಆರ್ಥಿಕ ಸಹಕಾರವನ್ನು ಉತ್ತೇಜಿಸಲು ಹುಟ್ಟಿಕೊಂಡ ಪರಿಕಲ್ಪನೆಯಿದು. ಅಲ್ಲಿಂದ ಅದೀಗ ‘ಏಕ ಮಾರುಕಟ್ಟೆ’ಯಾಗುವ ತನಕ ಬೆಳೆದಿದೆ. ಎಷ್ಟರ ಮಟ್ಟಿಗೆ ಎಂದರೆ, ಸರಕು ಮತ್ತು ಜನರು ಒಂದೇ ದೇಶ ಎಂಬಷ್ಟರ ಮಟ್ಟಿಗೆ ಈ ದೇಶಗಳಲ್ಲಿ ಸಂಚರಿಸಬಹುದು. ಅದಕ್ಕೆ ಸ್ವಂತ ಕರೆನ್ಸಿಯಾದ ಯುರೋ ಇದ್ದು, ಅದನ್ನು 19 ದೇಶಗಳು ಬಳಸುತ್ತಿವೆ. ಅದಕ್ಕೆ ಸ್ವಂತ ಸಂಸತ್ತು ಕೂಡಾ ಇದ್ದು, ಅದು ಪರಿಸರ, ಸಾರಿಗೆ, ಗ್ರಾಹಕರ ಹಕ್ಕುಗಳು, ಅಷ್ಟೇ ಏಕೆ ಮೊಬೈಲ್ ಫೋನ್ ದರ ನಿಗದಿಯ ವರೆಗೆ ವ್ಯಾಪಕ ವಿಷಯಗಳ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಿದೆ.

ಹೊರ ಬರುವ ಪ್ರಕ್ರಿಯೆ ಆರಂಭಿಸಿದ ಬಳಿಕ ಯುಕೆ, 29 ಮಾರ್ಚ್ 2019ರಲ್ಲಿ ಹೊರಬರಬೇಕಾಗಿತ್ತು. ಆದರೆ ಹೊರಬರುವಿಕೆ ಕುರಿತು ಐರೋಪ್ಯ ಒಕ್ಕೂಟ ಮತ್ತು ಯುಕೆ ನಡುವೆ ಮಾಡಲಾಗಿದ್ದ ಒಪ್ಪಂದವನ್ನು ಸಂಸದರು ಮೂರು ಬಾರಿ ತಿರಸ್ಕರಿಸಿದ್ದಾರೆ. ಈ ಒಪ್ಪಂದದ ಮುಖ್ಯ ಅಂಶವೆಂದರೆ, ಉದ್ದಿಮೆಗಳು ಹಾಗೂ ವ್ಯಕ್ತಿಗಳು ಆದಷ್ಟು ಸರಾಗವಾಗಿ ಐರೋಪ್ಯ ಒಕ್ಕೂಟದಿಂದ ಹೊರಬರುವುದನ್ನು ಖಾತರಿಪಡಿಸುವುದು ಮತ್ತು ಶಾಶ್ವತವಾದ ವಾಣಿಜ್ಯ ಸಂಬಂಧವನ್ನು ರೂಪಿಸಿಕೊಳ್ಳಲು ಎರಡೂ ಕಡೆಗಳವರಿಗೆ ಕಾಲಾವಕಾಶ ನೀಡುವುದು. ಇದೀಗ ಐರೋಪ್ಯ ಒಕ್ಕೂಟವು ಆರು ತಿಂಗಳುಗಳ ವಿಸ್ತರಣೆ ನೀಡಿ, 31 ಅಕ್ಟೋಬರ್ 2019ರ ತನಕ ಕಾಲಾವಕಾಶ ಒದಗಿಸಿದೆ.

ಮೇಯ ದಾಖಲೆ
ಐರೋಪ್ಯ ಒಕ್ಕೂಟದ ಜೊತೆ ಯಾವ ರೀತಿಯ ಭವಿಷ್ಯದ ಸಂಬಂಧವನ್ನು ಒಪ್ಪಲು ಸಿದ್ಧರಿದ್ದೀರಿ ಎಂಬ ಕುರಿತು ತಮ್ಮದೇ ಪಕ್ಷದೊಳಗಿನ ಬ್ರೆಕ್ಸಿಟ್ ಬೆಂಬಲಿಗರ ಜೊತೆ ಮೂರು ವರ್ಷಗಳ ಕಠಿಣ ಚೌಕಾಸಿಯ ಬಳಿಕ ಮೇ ಅವರ ನಿರ್ಗಮನವಾಗುತ್ತಿದೆ. 2017ರ ಸಾರ್ವತ್ರಿಕ ಚುನಾವಣೆಯಲ್ಲಿ ‘ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಸದೃಢ ಮತ್ತು ಸ್ಥಿರ ನಾಯಕತ್ವ’ದ ಭರವಸೆ ನೀಡುವ ದುರಂತಕಾರಿ ಎಂದು ಬಣ್ಣಿಸಲಾಗುವ ಪ್ರಚಾರದ ನೇತೃತ್ವ ವಹಿಸಿದ್ದ ಮೇ ಅವರು ಬಹುಮತ ಕಳೆದುಕೊಂಡ ಬಳಿಕ ಈ ಕೆಲಸ ಇನ್ನಷ್ಟು ಕಠಿಣವಾಯಿತು.

ನಂತರ ರೂಪಿಸಿದ ಹತ್ತು ಅಂಶಗಳ ‘ಹೊಸ ಬ್ರೆಕ್ಸಿಟ್ ಒಪ್ಪಂದ’ವು ಪ್ರತಿಪಕ್ಷಗಳು ಬಿಡಿ, ಅವರದ್ದೇ ಟೋರಿ (ಕನ್ಸರ್ವೇಟಿವ್) ಪಕ್ಷದ ಸಾಮಾನ್ಯ ಸಂಸದರು ಮಾತ್ರವಲ್ಲ, ಅವರದ್ದೇ ಸಂಪುಟದ ಕೆಲವು ಸದಸ್ಯರನ್ನೂ ಕೆಂಡಾಮಂಡಲಗೊಳಿಸಿದ ಬಳಿಕ ಅವರ ಗತಿ ಖಚಿತವಾಗಿತ್ತು. ಹೌಸ್ ಆಫ್ ಕಾಮನ್ಸ್ (ಕೆಳಮನೆ) ನಾಯಕಿ ಆಂಡ್ರಿಯಾ ಲೀಡ್‌ಸಂ ಅವರು ಈ ಬ್ರೆಕ್ಸಿಟ್ ಮಸೂದೆಯನ್ನು ಮಂಡಿಸುವುದಕ್ಕೆ ಬದಲಾಗಿ ಬುಧವಾರ ರಾಜೀನಾಮೆಯನ್ನೇ ನೀಡಿದ್ದರು.

ಅವರ ಮಾಜಿ ವಿದೇಶಾಂಗ ಕಾರ್ಯದರ್ಶಿ ಬೋರಿಸ್ ಜಾನ್ಸನ್ ಅವರು ಮುಂದಿನ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿದ್ದು, ಒಂದು ಡಜನಿಗೂ ಹೆಚ್ಚು ಹಿರಿಯ ಟೋರಿ ನಾಯಕರು ಈ ಪದಕ್ಕಾಗಿ ಹೊಂಚುತ್ತಿದ್ದಾರೆ.

ಬ್ರಿಟನ್‌ಗೆ ಮುಂದೇನು ಕಾದಿದೆ?

ಮೇ ಅವರ ನಿರ್ಗಮನದ ಬಳಿಕ ಹೊಸ ನಾಯಕತ್ವದಲ್ಲಿ ಬ್ರೆಕ್ಸಿಟ್ ಬಿಕ್ಕಟ್ಟು ತೀವ್ರವಾಗಲಿದ್ದು, ಹೊಸ ನಾಯಕತ್ವದಲ್ಲಿ ಐರೋಪ್ಯ ಒಕ್ಕೂಟದ ಜೊತೆ ಸಂಘರ್ಷದ ಸಾಧ್ಯತೆ ಹೆಚ್ಚಾಗಲಿದೆ. ಅಷ್ಟೇ ಅಲ್ಲದೇ, ಸಾರ್ವತ್ರಿಕ ಚುನಾವಣೆ ನಡೆದು ಜೆರೆಮಿ ಕೋರ್ಬಿನ್ ನೇತೃತ್ವದ ಲೇಬರ್ ಪಕ್ಷದ ಸರಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯೂ ಇದೆ. ಹಾಗಾದಲ್ಲಿ ಬ್ರಿಟನ್‌ಗೆ ಕ್ರಮಬದ್ಧವಾದ ಹಿಂತೆಗೆತ ಒಪ್ಪಂದ, ಒಪ್ಪಂದ ರಹಿತ ಹಿಂತೆಗೆತ, ಚುನಾವಣೆ, ಅಥವಾ ಐರೋಪ್ಯ ಒಕ್ಕೂಟದಿಂದ ಹೊರಬರುವ 2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತೆರೆಸಾ ಮೇ ಗೆ Exit ಎಂದ ಬ್ರಿಟನ್ – ಲೇಖನ ಓದಿ ನನಗೆ ಮೆಚ್ಚುಗೆ ಆಯಿತು. ಲೇಖಕರು ಸರಳವಾಗಿ EU ಬಗ್ಗೆ ಮತ್ತು ಬ್ರಿಟನ್ ನ Exit ತೊಳಲಾಟದ ಬಗ್ಗೆ ಸಂಕ್ಷಿಪ್ತವಾಗಿ ಆದರೆ ವಿವರಗಳಿಗೆ ಧಕ್ಕೆ ಆಗದಂತೆ ವಿವರಿಸಿದ್ದಾರೆ. ಧನ್ಯವಾದಗಳು.

  2. ಸಂಪಾದಕರಲ್ಲಿ ನಮ್ಮ ನಮಸ್ಕಾರಗಳು,

    ತಮ್ಮ ಅಂಕಣದಲ್ಲಿ ಬಂದಂತಹ ಬರಹಗಳು ತುಂಬಾ ಅರ್ಥಪೂರ್ಣವಾಗಿರುತ್ತದೆ ಮತ್ತು ತುಂಬಾ ಚೆನ್ನಾಗಿ ಮೂಡಿಬಂದಿರುತ್ತದೆ ಮತ್ತೊಮ್ಮೆ ತಮಗೆ ಹೃದಯ ಪೂರಕವಾಗಿ ಅಭಿನಂದನೆಗಳು.🙏✍

  3. ಸಂಪಾದಕರಲ್ಲಿ ಸವಿನಯ ಪ್ರಾರ್ಥನೆಗಳು, ಕೇಂದ್ರ ಸರ್ಕಾರದವರು ತಮಗೆ ಸ್ಪಂದಿಸದಿದ್ದರೆ, ಇ ಡಿ ಪ್ರಕರಣದಲ್ಲಿ ದಾಖಲಿಸುತ್ತಾರೆ ಯಾಕೆ? ಮತ್ತು ತಮ್ಮಲ್ಲಿರುವ ಸಮಾಜ ಸೇವಕರಲ್ಲಿ ಇಲ್ಲಿಯವರೆಗೂ ಯಾವ ವ್ಯಕ್ತಿಯೂ ಕೂಡಾ ತನಿಖೆಗೆ ವಹಿಸಿಕೊಟ್ಟಿಲ್ಲಾ ಈ ರೀತಿ ಮಾಡುವುದು ಸರಿಯೇ ಇದು ನಮ್ಮ ಪ್ರಶ್ನೆಯಾಗಿದೆ ದಯಮಾಡಿ ಉತ್ತರಿಸಿರಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...