Homeಅಂತರಾಷ್ಟ್ರೀಯತೆರೆಸಾ ಮೇಗೆ 'Exit' ಎಂದ ಬ್ರಿಟನ್

ತೆರೆಸಾ ಮೇಗೆ ‘Exit’ ಎಂದ ಬ್ರಿಟನ್

2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ

- Advertisement -
- Advertisement -

| ಡಾ.ಸ್ವಾತಿ ಶುಕ್ಲಾ |

ಬ್ರೆಕ್ಸಿಟ್ ಒಪ್ಪಂದವೊಂದನ್ನು ಸಾಧಿಸಲು ವಿಫಲರಾದ ಬಳಿಕ ಯುಕೆ ಪ್ರಧಾನಿ ತೆರೆಸಾ ಮೇ ಅವರು, ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಮತ್ತು ಬ್ರಿಟನ್‌ನ ಪ್ರಧಾನಿಯಾಗಿ ತನ್ನ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತಾನು ಜೂನ್ 7ರಂದು ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕತ್ವ ತ್ಯಜಿಸುವುದಾಗಿ ಅವರು ತನ್ನ ಘೋಷಣೆಯಲ್ಲಿ ತಿಳಿಸಿದ್ದಾರೆ. 

ಬ್ರೆಕ್ಸಿಟ್ (Brexit)
ಬ್ರೆಕ್ಸಿಟ್- (ಬ್ರಿಟನ್ ಮತ್ತು ಎಕ್ಸಿಟ್ ಎಂಬ ಎರಡು ಪದಗಳ ಸಂಕ್ಷೇಪ) ಎಂಬುದು ಯುಕೆಯ ಯುರೋಪಿಯನ್ ಯೂನಿಯನ್ (ಐರೋಪ್ಯ ಒಕ್ಕೂಟ)ನಲ್ಲಿ ಮುಂದುವರಿಯಬೇಕೆ, ಹೊರಬರಬೇಕೆ ಎಂಬುದನ್ನು ನಿರ್ಧರಿಸಲು 23 ಜೂನ್ 2016ರಲ್ಲಿ ನಡೆದ ಜನಮತಗಣನೆ.

ಈ ಜನಮತಗಣನೆಯಲ್ಲಿ 71.8 ಶೇಕಡಾ ಮತದಾರರು, ಎಂದರೆ ಸುಮಾರು ಮೂರು ಕೋಟಿ ಮತದಾರರು ಮತ ಚಲಾಯಿಸಿದ್ದು, ಹೊರಬರುವ ತೀರ್ಮಾನ 51.9 ಶೇಕಡಾ- 48.1 ಶೇಕಡಾ ನಿಕಟ ಅಂತರದಿಂದ ಜಯಿಸಿತ್ತು. ಆದರೆ, ಈ ಜನಮತಗಣನೆ ನಡೆದು ಹೆಚ್ಚುಕಡಿಮೆ ಮೂರು ವರ್ಷಗಳ ನಂತರವೂ ತಾನು 1973ರಲ್ಲಿ ಸೇರಿದ್ದ ಐರೋಪ್ಯ ಒಕ್ಕೂಟದಿಂದ ಹೊರಬರುವುದು ಹೇಗೆ ಎಂಬುದು ಬಿಡಿ, ಹೊರಬರಬೇಕೋ ಬೇಡವೋ ಎಂಬ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲು ಬ್ರಿಟನ್ ವಿಫಲವಾಗಿದೆ.

ಇಯು, ಎಂದು ಗುರುತಿಸಲ್ಪಡುವ ಐರೋಪ್ಯ ಒಕ್ಕೂಟವು 28 ಐರೋಪ್ಯ ದೇಶಗಳ ಆರ್ಥಿಕ ಮತ್ತು ರಾಜಕೀಯ ಸಹಭಾಗಿತ್ವವಾಗಿದೆ. ಎರಡನೇ ಮಹಾಯುದ್ಧದ ಬಳಿಕ- ಪರಸ್ಪರ ವಾಣಿಜ್ಯ, ವ್ಯಾಪಾರ ಇರುವ ದೇಶಗಳ ನಡುವೆ ಯುದ್ಧದ ಸಂಭವ ಕಡಿಮೆ ಎಂಬ ನೆಲೆಯಲ್ಲಿ ಆರ್ಥಿಕ ಸಹಕಾರವನ್ನು ಉತ್ತೇಜಿಸಲು ಹುಟ್ಟಿಕೊಂಡ ಪರಿಕಲ್ಪನೆಯಿದು. ಅಲ್ಲಿಂದ ಅದೀಗ ‘ಏಕ ಮಾರುಕಟ್ಟೆ’ಯಾಗುವ ತನಕ ಬೆಳೆದಿದೆ. ಎಷ್ಟರ ಮಟ್ಟಿಗೆ ಎಂದರೆ, ಸರಕು ಮತ್ತು ಜನರು ಒಂದೇ ದೇಶ ಎಂಬಷ್ಟರ ಮಟ್ಟಿಗೆ ಈ ದೇಶಗಳಲ್ಲಿ ಸಂಚರಿಸಬಹುದು. ಅದಕ್ಕೆ ಸ್ವಂತ ಕರೆನ್ಸಿಯಾದ ಯುರೋ ಇದ್ದು, ಅದನ್ನು 19 ದೇಶಗಳು ಬಳಸುತ್ತಿವೆ. ಅದಕ್ಕೆ ಸ್ವಂತ ಸಂಸತ್ತು ಕೂಡಾ ಇದ್ದು, ಅದು ಪರಿಸರ, ಸಾರಿಗೆ, ಗ್ರಾಹಕರ ಹಕ್ಕುಗಳು, ಅಷ್ಟೇ ಏಕೆ ಮೊಬೈಲ್ ಫೋನ್ ದರ ನಿಗದಿಯ ವರೆಗೆ ವ್ಯಾಪಕ ವಿಷಯಗಳ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಿದೆ.

ಹೊರ ಬರುವ ಪ್ರಕ್ರಿಯೆ ಆರಂಭಿಸಿದ ಬಳಿಕ ಯುಕೆ, 29 ಮಾರ್ಚ್ 2019ರಲ್ಲಿ ಹೊರಬರಬೇಕಾಗಿತ್ತು. ಆದರೆ ಹೊರಬರುವಿಕೆ ಕುರಿತು ಐರೋಪ್ಯ ಒಕ್ಕೂಟ ಮತ್ತು ಯುಕೆ ನಡುವೆ ಮಾಡಲಾಗಿದ್ದ ಒಪ್ಪಂದವನ್ನು ಸಂಸದರು ಮೂರು ಬಾರಿ ತಿರಸ್ಕರಿಸಿದ್ದಾರೆ. ಈ ಒಪ್ಪಂದದ ಮುಖ್ಯ ಅಂಶವೆಂದರೆ, ಉದ್ದಿಮೆಗಳು ಹಾಗೂ ವ್ಯಕ್ತಿಗಳು ಆದಷ್ಟು ಸರಾಗವಾಗಿ ಐರೋಪ್ಯ ಒಕ್ಕೂಟದಿಂದ ಹೊರಬರುವುದನ್ನು ಖಾತರಿಪಡಿಸುವುದು ಮತ್ತು ಶಾಶ್ವತವಾದ ವಾಣಿಜ್ಯ ಸಂಬಂಧವನ್ನು ರೂಪಿಸಿಕೊಳ್ಳಲು ಎರಡೂ ಕಡೆಗಳವರಿಗೆ ಕಾಲಾವಕಾಶ ನೀಡುವುದು. ಇದೀಗ ಐರೋಪ್ಯ ಒಕ್ಕೂಟವು ಆರು ತಿಂಗಳುಗಳ ವಿಸ್ತರಣೆ ನೀಡಿ, 31 ಅಕ್ಟೋಬರ್ 2019ರ ತನಕ ಕಾಲಾವಕಾಶ ಒದಗಿಸಿದೆ.

ಮೇಯ ದಾಖಲೆ
ಐರೋಪ್ಯ ಒಕ್ಕೂಟದ ಜೊತೆ ಯಾವ ರೀತಿಯ ಭವಿಷ್ಯದ ಸಂಬಂಧವನ್ನು ಒಪ್ಪಲು ಸಿದ್ಧರಿದ್ದೀರಿ ಎಂಬ ಕುರಿತು ತಮ್ಮದೇ ಪಕ್ಷದೊಳಗಿನ ಬ್ರೆಕ್ಸಿಟ್ ಬೆಂಬಲಿಗರ ಜೊತೆ ಮೂರು ವರ್ಷಗಳ ಕಠಿಣ ಚೌಕಾಸಿಯ ಬಳಿಕ ಮೇ ಅವರ ನಿರ್ಗಮನವಾಗುತ್ತಿದೆ. 2017ರ ಸಾರ್ವತ್ರಿಕ ಚುನಾವಣೆಯಲ್ಲಿ ‘ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಸದೃಢ ಮತ್ತು ಸ್ಥಿರ ನಾಯಕತ್ವ’ದ ಭರವಸೆ ನೀಡುವ ದುರಂತಕಾರಿ ಎಂದು ಬಣ್ಣಿಸಲಾಗುವ ಪ್ರಚಾರದ ನೇತೃತ್ವ ವಹಿಸಿದ್ದ ಮೇ ಅವರು ಬಹುಮತ ಕಳೆದುಕೊಂಡ ಬಳಿಕ ಈ ಕೆಲಸ ಇನ್ನಷ್ಟು ಕಠಿಣವಾಯಿತು.

ನಂತರ ರೂಪಿಸಿದ ಹತ್ತು ಅಂಶಗಳ ‘ಹೊಸ ಬ್ರೆಕ್ಸಿಟ್ ಒಪ್ಪಂದ’ವು ಪ್ರತಿಪಕ್ಷಗಳು ಬಿಡಿ, ಅವರದ್ದೇ ಟೋರಿ (ಕನ್ಸರ್ವೇಟಿವ್) ಪಕ್ಷದ ಸಾಮಾನ್ಯ ಸಂಸದರು ಮಾತ್ರವಲ್ಲ, ಅವರದ್ದೇ ಸಂಪುಟದ ಕೆಲವು ಸದಸ್ಯರನ್ನೂ ಕೆಂಡಾಮಂಡಲಗೊಳಿಸಿದ ಬಳಿಕ ಅವರ ಗತಿ ಖಚಿತವಾಗಿತ್ತು. ಹೌಸ್ ಆಫ್ ಕಾಮನ್ಸ್ (ಕೆಳಮನೆ) ನಾಯಕಿ ಆಂಡ್ರಿಯಾ ಲೀಡ್‌ಸಂ ಅವರು ಈ ಬ್ರೆಕ್ಸಿಟ್ ಮಸೂದೆಯನ್ನು ಮಂಡಿಸುವುದಕ್ಕೆ ಬದಲಾಗಿ ಬುಧವಾರ ರಾಜೀನಾಮೆಯನ್ನೇ ನೀಡಿದ್ದರು.

ಅವರ ಮಾಜಿ ವಿದೇಶಾಂಗ ಕಾರ್ಯದರ್ಶಿ ಬೋರಿಸ್ ಜಾನ್ಸನ್ ಅವರು ಮುಂದಿನ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿದ್ದು, ಒಂದು ಡಜನಿಗೂ ಹೆಚ್ಚು ಹಿರಿಯ ಟೋರಿ ನಾಯಕರು ಈ ಪದಕ್ಕಾಗಿ ಹೊಂಚುತ್ತಿದ್ದಾರೆ.

ಬ್ರಿಟನ್‌ಗೆ ಮುಂದೇನು ಕಾದಿದೆ?

ಮೇ ಅವರ ನಿರ್ಗಮನದ ಬಳಿಕ ಹೊಸ ನಾಯಕತ್ವದಲ್ಲಿ ಬ್ರೆಕ್ಸಿಟ್ ಬಿಕ್ಕಟ್ಟು ತೀವ್ರವಾಗಲಿದ್ದು, ಹೊಸ ನಾಯಕತ್ವದಲ್ಲಿ ಐರೋಪ್ಯ ಒಕ್ಕೂಟದ ಜೊತೆ ಸಂಘರ್ಷದ ಸಾಧ್ಯತೆ ಹೆಚ್ಚಾಗಲಿದೆ. ಅಷ್ಟೇ ಅಲ್ಲದೇ, ಸಾರ್ವತ್ರಿಕ ಚುನಾವಣೆ ನಡೆದು ಜೆರೆಮಿ ಕೋರ್ಬಿನ್ ನೇತೃತ್ವದ ಲೇಬರ್ ಪಕ್ಷದ ಸರಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯೂ ಇದೆ. ಹಾಗಾದಲ್ಲಿ ಬ್ರಿಟನ್‌ಗೆ ಕ್ರಮಬದ್ಧವಾದ ಹಿಂತೆಗೆತ ಒಪ್ಪಂದ, ಒಪ್ಪಂದ ರಹಿತ ಹಿಂತೆಗೆತ, ಚುನಾವಣೆ, ಅಥವಾ ಐರೋಪ್ಯ ಒಕ್ಕೂಟದಿಂದ ಹೊರಬರುವ 2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತೆರೆಸಾ ಮೇ ಗೆ Exit ಎಂದ ಬ್ರಿಟನ್ – ಲೇಖನ ಓದಿ ನನಗೆ ಮೆಚ್ಚುಗೆ ಆಯಿತು. ಲೇಖಕರು ಸರಳವಾಗಿ EU ಬಗ್ಗೆ ಮತ್ತು ಬ್ರಿಟನ್ ನ Exit ತೊಳಲಾಟದ ಬಗ್ಗೆ ಸಂಕ್ಷಿಪ್ತವಾಗಿ ಆದರೆ ವಿವರಗಳಿಗೆ ಧಕ್ಕೆ ಆಗದಂತೆ ವಿವರಿಸಿದ್ದಾರೆ. ಧನ್ಯವಾದಗಳು.

  2. ಸಂಪಾದಕರಲ್ಲಿ ನಮ್ಮ ನಮಸ್ಕಾರಗಳು,

    ತಮ್ಮ ಅಂಕಣದಲ್ಲಿ ಬಂದಂತಹ ಬರಹಗಳು ತುಂಬಾ ಅರ್ಥಪೂರ್ಣವಾಗಿರುತ್ತದೆ ಮತ್ತು ತುಂಬಾ ಚೆನ್ನಾಗಿ ಮೂಡಿಬಂದಿರುತ್ತದೆ ಮತ್ತೊಮ್ಮೆ ತಮಗೆ ಹೃದಯ ಪೂರಕವಾಗಿ ಅಭಿನಂದನೆಗಳು.🙏✍

  3. ಸಂಪಾದಕರಲ್ಲಿ ಸವಿನಯ ಪ್ರಾರ್ಥನೆಗಳು, ಕೇಂದ್ರ ಸರ್ಕಾರದವರು ತಮಗೆ ಸ್ಪಂದಿಸದಿದ್ದರೆ, ಇ ಡಿ ಪ್ರಕರಣದಲ್ಲಿ ದಾಖಲಿಸುತ್ತಾರೆ ಯಾಕೆ? ಮತ್ತು ತಮ್ಮಲ್ಲಿರುವ ಸಮಾಜ ಸೇವಕರಲ್ಲಿ ಇಲ್ಲಿಯವರೆಗೂ ಯಾವ ವ್ಯಕ್ತಿಯೂ ಕೂಡಾ ತನಿಖೆಗೆ ವಹಿಸಿಕೊಟ್ಟಿಲ್ಲಾ ಈ ರೀತಿ ಮಾಡುವುದು ಸರಿಯೇ ಇದು ನಮ್ಮ ಪ್ರಶ್ನೆಯಾಗಿದೆ ದಯಮಾಡಿ ಉತ್ತರಿಸಿರಿ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...