Homeಅಂತರಾಷ್ಟ್ರೀಯತೆರೆಸಾ ಮೇಗೆ 'Exit' ಎಂದ ಬ್ರಿಟನ್

ತೆರೆಸಾ ಮೇಗೆ ‘Exit’ ಎಂದ ಬ್ರಿಟನ್

2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ

- Advertisement -
- Advertisement -

| ಡಾ.ಸ್ವಾತಿ ಶುಕ್ಲಾ |

ಬ್ರೆಕ್ಸಿಟ್ ಒಪ್ಪಂದವೊಂದನ್ನು ಸಾಧಿಸಲು ವಿಫಲರಾದ ಬಳಿಕ ಯುಕೆ ಪ್ರಧಾನಿ ತೆರೆಸಾ ಮೇ ಅವರು, ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಮತ್ತು ಬ್ರಿಟನ್‌ನ ಪ್ರಧಾನಿಯಾಗಿ ತನ್ನ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತಾನು ಜೂನ್ 7ರಂದು ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕತ್ವ ತ್ಯಜಿಸುವುದಾಗಿ ಅವರು ತನ್ನ ಘೋಷಣೆಯಲ್ಲಿ ತಿಳಿಸಿದ್ದಾರೆ. 

ಬ್ರೆಕ್ಸಿಟ್ (Brexit)
ಬ್ರೆಕ್ಸಿಟ್- (ಬ್ರಿಟನ್ ಮತ್ತು ಎಕ್ಸಿಟ್ ಎಂಬ ಎರಡು ಪದಗಳ ಸಂಕ್ಷೇಪ) ಎಂಬುದು ಯುಕೆಯ ಯುರೋಪಿಯನ್ ಯೂನಿಯನ್ (ಐರೋಪ್ಯ ಒಕ್ಕೂಟ)ನಲ್ಲಿ ಮುಂದುವರಿಯಬೇಕೆ, ಹೊರಬರಬೇಕೆ ಎಂಬುದನ್ನು ನಿರ್ಧರಿಸಲು 23 ಜೂನ್ 2016ರಲ್ಲಿ ನಡೆದ ಜನಮತಗಣನೆ.

ಈ ಜನಮತಗಣನೆಯಲ್ಲಿ 71.8 ಶೇಕಡಾ ಮತದಾರರು, ಎಂದರೆ ಸುಮಾರು ಮೂರು ಕೋಟಿ ಮತದಾರರು ಮತ ಚಲಾಯಿಸಿದ್ದು, ಹೊರಬರುವ ತೀರ್ಮಾನ 51.9 ಶೇಕಡಾ- 48.1 ಶೇಕಡಾ ನಿಕಟ ಅಂತರದಿಂದ ಜಯಿಸಿತ್ತು. ಆದರೆ, ಈ ಜನಮತಗಣನೆ ನಡೆದು ಹೆಚ್ಚುಕಡಿಮೆ ಮೂರು ವರ್ಷಗಳ ನಂತರವೂ ತಾನು 1973ರಲ್ಲಿ ಸೇರಿದ್ದ ಐರೋಪ್ಯ ಒಕ್ಕೂಟದಿಂದ ಹೊರಬರುವುದು ಹೇಗೆ ಎಂಬುದು ಬಿಡಿ, ಹೊರಬರಬೇಕೋ ಬೇಡವೋ ಎಂಬ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲು ಬ್ರಿಟನ್ ವಿಫಲವಾಗಿದೆ.

ಇಯು, ಎಂದು ಗುರುತಿಸಲ್ಪಡುವ ಐರೋಪ್ಯ ಒಕ್ಕೂಟವು 28 ಐರೋಪ್ಯ ದೇಶಗಳ ಆರ್ಥಿಕ ಮತ್ತು ರಾಜಕೀಯ ಸಹಭಾಗಿತ್ವವಾಗಿದೆ. ಎರಡನೇ ಮಹಾಯುದ್ಧದ ಬಳಿಕ- ಪರಸ್ಪರ ವಾಣಿಜ್ಯ, ವ್ಯಾಪಾರ ಇರುವ ದೇಶಗಳ ನಡುವೆ ಯುದ್ಧದ ಸಂಭವ ಕಡಿಮೆ ಎಂಬ ನೆಲೆಯಲ್ಲಿ ಆರ್ಥಿಕ ಸಹಕಾರವನ್ನು ಉತ್ತೇಜಿಸಲು ಹುಟ್ಟಿಕೊಂಡ ಪರಿಕಲ್ಪನೆಯಿದು. ಅಲ್ಲಿಂದ ಅದೀಗ ‘ಏಕ ಮಾರುಕಟ್ಟೆ’ಯಾಗುವ ತನಕ ಬೆಳೆದಿದೆ. ಎಷ್ಟರ ಮಟ್ಟಿಗೆ ಎಂದರೆ, ಸರಕು ಮತ್ತು ಜನರು ಒಂದೇ ದೇಶ ಎಂಬಷ್ಟರ ಮಟ್ಟಿಗೆ ಈ ದೇಶಗಳಲ್ಲಿ ಸಂಚರಿಸಬಹುದು. ಅದಕ್ಕೆ ಸ್ವಂತ ಕರೆನ್ಸಿಯಾದ ಯುರೋ ಇದ್ದು, ಅದನ್ನು 19 ದೇಶಗಳು ಬಳಸುತ್ತಿವೆ. ಅದಕ್ಕೆ ಸ್ವಂತ ಸಂಸತ್ತು ಕೂಡಾ ಇದ್ದು, ಅದು ಪರಿಸರ, ಸಾರಿಗೆ, ಗ್ರಾಹಕರ ಹಕ್ಕುಗಳು, ಅಷ್ಟೇ ಏಕೆ ಮೊಬೈಲ್ ಫೋನ್ ದರ ನಿಗದಿಯ ವರೆಗೆ ವ್ಯಾಪಕ ವಿಷಯಗಳ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಿದೆ.

ಹೊರ ಬರುವ ಪ್ರಕ್ರಿಯೆ ಆರಂಭಿಸಿದ ಬಳಿಕ ಯುಕೆ, 29 ಮಾರ್ಚ್ 2019ರಲ್ಲಿ ಹೊರಬರಬೇಕಾಗಿತ್ತು. ಆದರೆ ಹೊರಬರುವಿಕೆ ಕುರಿತು ಐರೋಪ್ಯ ಒಕ್ಕೂಟ ಮತ್ತು ಯುಕೆ ನಡುವೆ ಮಾಡಲಾಗಿದ್ದ ಒಪ್ಪಂದವನ್ನು ಸಂಸದರು ಮೂರು ಬಾರಿ ತಿರಸ್ಕರಿಸಿದ್ದಾರೆ. ಈ ಒಪ್ಪಂದದ ಮುಖ್ಯ ಅಂಶವೆಂದರೆ, ಉದ್ದಿಮೆಗಳು ಹಾಗೂ ವ್ಯಕ್ತಿಗಳು ಆದಷ್ಟು ಸರಾಗವಾಗಿ ಐರೋಪ್ಯ ಒಕ್ಕೂಟದಿಂದ ಹೊರಬರುವುದನ್ನು ಖಾತರಿಪಡಿಸುವುದು ಮತ್ತು ಶಾಶ್ವತವಾದ ವಾಣಿಜ್ಯ ಸಂಬಂಧವನ್ನು ರೂಪಿಸಿಕೊಳ್ಳಲು ಎರಡೂ ಕಡೆಗಳವರಿಗೆ ಕಾಲಾವಕಾಶ ನೀಡುವುದು. ಇದೀಗ ಐರೋಪ್ಯ ಒಕ್ಕೂಟವು ಆರು ತಿಂಗಳುಗಳ ವಿಸ್ತರಣೆ ನೀಡಿ, 31 ಅಕ್ಟೋಬರ್ 2019ರ ತನಕ ಕಾಲಾವಕಾಶ ಒದಗಿಸಿದೆ.

ಮೇಯ ದಾಖಲೆ
ಐರೋಪ್ಯ ಒಕ್ಕೂಟದ ಜೊತೆ ಯಾವ ರೀತಿಯ ಭವಿಷ್ಯದ ಸಂಬಂಧವನ್ನು ಒಪ್ಪಲು ಸಿದ್ಧರಿದ್ದೀರಿ ಎಂಬ ಕುರಿತು ತಮ್ಮದೇ ಪಕ್ಷದೊಳಗಿನ ಬ್ರೆಕ್ಸಿಟ್ ಬೆಂಬಲಿಗರ ಜೊತೆ ಮೂರು ವರ್ಷಗಳ ಕಠಿಣ ಚೌಕಾಸಿಯ ಬಳಿಕ ಮೇ ಅವರ ನಿರ್ಗಮನವಾಗುತ್ತಿದೆ. 2017ರ ಸಾರ್ವತ್ರಿಕ ಚುನಾವಣೆಯಲ್ಲಿ ‘ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಸದೃಢ ಮತ್ತು ಸ್ಥಿರ ನಾಯಕತ್ವ’ದ ಭರವಸೆ ನೀಡುವ ದುರಂತಕಾರಿ ಎಂದು ಬಣ್ಣಿಸಲಾಗುವ ಪ್ರಚಾರದ ನೇತೃತ್ವ ವಹಿಸಿದ್ದ ಮೇ ಅವರು ಬಹುಮತ ಕಳೆದುಕೊಂಡ ಬಳಿಕ ಈ ಕೆಲಸ ಇನ್ನಷ್ಟು ಕಠಿಣವಾಯಿತು.

ನಂತರ ರೂಪಿಸಿದ ಹತ್ತು ಅಂಶಗಳ ‘ಹೊಸ ಬ್ರೆಕ್ಸಿಟ್ ಒಪ್ಪಂದ’ವು ಪ್ರತಿಪಕ್ಷಗಳು ಬಿಡಿ, ಅವರದ್ದೇ ಟೋರಿ (ಕನ್ಸರ್ವೇಟಿವ್) ಪಕ್ಷದ ಸಾಮಾನ್ಯ ಸಂಸದರು ಮಾತ್ರವಲ್ಲ, ಅವರದ್ದೇ ಸಂಪುಟದ ಕೆಲವು ಸದಸ್ಯರನ್ನೂ ಕೆಂಡಾಮಂಡಲಗೊಳಿಸಿದ ಬಳಿಕ ಅವರ ಗತಿ ಖಚಿತವಾಗಿತ್ತು. ಹೌಸ್ ಆಫ್ ಕಾಮನ್ಸ್ (ಕೆಳಮನೆ) ನಾಯಕಿ ಆಂಡ್ರಿಯಾ ಲೀಡ್‌ಸಂ ಅವರು ಈ ಬ್ರೆಕ್ಸಿಟ್ ಮಸೂದೆಯನ್ನು ಮಂಡಿಸುವುದಕ್ಕೆ ಬದಲಾಗಿ ಬುಧವಾರ ರಾಜೀನಾಮೆಯನ್ನೇ ನೀಡಿದ್ದರು.

ಅವರ ಮಾಜಿ ವಿದೇಶಾಂಗ ಕಾರ್ಯದರ್ಶಿ ಬೋರಿಸ್ ಜಾನ್ಸನ್ ಅವರು ಮುಂದಿನ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿದ್ದು, ಒಂದು ಡಜನಿಗೂ ಹೆಚ್ಚು ಹಿರಿಯ ಟೋರಿ ನಾಯಕರು ಈ ಪದಕ್ಕಾಗಿ ಹೊಂಚುತ್ತಿದ್ದಾರೆ.

ಬ್ರಿಟನ್‌ಗೆ ಮುಂದೇನು ಕಾದಿದೆ?

ಮೇ ಅವರ ನಿರ್ಗಮನದ ಬಳಿಕ ಹೊಸ ನಾಯಕತ್ವದಲ್ಲಿ ಬ್ರೆಕ್ಸಿಟ್ ಬಿಕ್ಕಟ್ಟು ತೀವ್ರವಾಗಲಿದ್ದು, ಹೊಸ ನಾಯಕತ್ವದಲ್ಲಿ ಐರೋಪ್ಯ ಒಕ್ಕೂಟದ ಜೊತೆ ಸಂಘರ್ಷದ ಸಾಧ್ಯತೆ ಹೆಚ್ಚಾಗಲಿದೆ. ಅಷ್ಟೇ ಅಲ್ಲದೇ, ಸಾರ್ವತ್ರಿಕ ಚುನಾವಣೆ ನಡೆದು ಜೆರೆಮಿ ಕೋರ್ಬಿನ್ ನೇತೃತ್ವದ ಲೇಬರ್ ಪಕ್ಷದ ಸರಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯೂ ಇದೆ. ಹಾಗಾದಲ್ಲಿ ಬ್ರಿಟನ್‌ಗೆ ಕ್ರಮಬದ್ಧವಾದ ಹಿಂತೆಗೆತ ಒಪ್ಪಂದ, ಒಪ್ಪಂದ ರಹಿತ ಹಿಂತೆಗೆತ, ಚುನಾವಣೆ, ಅಥವಾ ಐರೋಪ್ಯ ಒಕ್ಕೂಟದಿಂದ ಹೊರಬರುವ 2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತೆರೆಸಾ ಮೇ ಗೆ Exit ಎಂದ ಬ್ರಿಟನ್ – ಲೇಖನ ಓದಿ ನನಗೆ ಮೆಚ್ಚುಗೆ ಆಯಿತು. ಲೇಖಕರು ಸರಳವಾಗಿ EU ಬಗ್ಗೆ ಮತ್ತು ಬ್ರಿಟನ್ ನ Exit ತೊಳಲಾಟದ ಬಗ್ಗೆ ಸಂಕ್ಷಿಪ್ತವಾಗಿ ಆದರೆ ವಿವರಗಳಿಗೆ ಧಕ್ಕೆ ಆಗದಂತೆ ವಿವರಿಸಿದ್ದಾರೆ. ಧನ್ಯವಾದಗಳು.

  2. ಸಂಪಾದಕರಲ್ಲಿ ನಮ್ಮ ನಮಸ್ಕಾರಗಳು,

    ತಮ್ಮ ಅಂಕಣದಲ್ಲಿ ಬಂದಂತಹ ಬರಹಗಳು ತುಂಬಾ ಅರ್ಥಪೂರ್ಣವಾಗಿರುತ್ತದೆ ಮತ್ತು ತುಂಬಾ ಚೆನ್ನಾಗಿ ಮೂಡಿಬಂದಿರುತ್ತದೆ ಮತ್ತೊಮ್ಮೆ ತಮಗೆ ಹೃದಯ ಪೂರಕವಾಗಿ ಅಭಿನಂದನೆಗಳು.🙏✍

  3. ಸಂಪಾದಕರಲ್ಲಿ ಸವಿನಯ ಪ್ರಾರ್ಥನೆಗಳು, ಕೇಂದ್ರ ಸರ್ಕಾರದವರು ತಮಗೆ ಸ್ಪಂದಿಸದಿದ್ದರೆ, ಇ ಡಿ ಪ್ರಕರಣದಲ್ಲಿ ದಾಖಲಿಸುತ್ತಾರೆ ಯಾಕೆ? ಮತ್ತು ತಮ್ಮಲ್ಲಿರುವ ಸಮಾಜ ಸೇವಕರಲ್ಲಿ ಇಲ್ಲಿಯವರೆಗೂ ಯಾವ ವ್ಯಕ್ತಿಯೂ ಕೂಡಾ ತನಿಖೆಗೆ ವಹಿಸಿಕೊಟ್ಟಿಲ್ಲಾ ಈ ರೀತಿ ಮಾಡುವುದು ಸರಿಯೇ ಇದು ನಮ್ಮ ಪ್ರಶ್ನೆಯಾಗಿದೆ ದಯಮಾಡಿ ಉತ್ತರಿಸಿರಿ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....