Homeಅಂತರಾಷ್ಟ್ರೀಯತೆರೆಸಾ ಮೇಗೆ 'Exit' ಎಂದ ಬ್ರಿಟನ್

ತೆರೆಸಾ ಮೇಗೆ ‘Exit’ ಎಂದ ಬ್ರಿಟನ್

2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ

- Advertisement -
- Advertisement -

| ಡಾ.ಸ್ವಾತಿ ಶುಕ್ಲಾ |

ಬ್ರೆಕ್ಸಿಟ್ ಒಪ್ಪಂದವೊಂದನ್ನು ಸಾಧಿಸಲು ವಿಫಲರಾದ ಬಳಿಕ ಯುಕೆ ಪ್ರಧಾನಿ ತೆರೆಸಾ ಮೇ ಅವರು, ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಮತ್ತು ಬ್ರಿಟನ್‌ನ ಪ್ರಧಾನಿಯಾಗಿ ತನ್ನ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತಾನು ಜೂನ್ 7ರಂದು ಆಳುವ ಕನ್ಸರ್ವೇಟಿವ್ ಪಕ್ಷದ ನಾಯಕತ್ವ ತ್ಯಜಿಸುವುದಾಗಿ ಅವರು ತನ್ನ ಘೋಷಣೆಯಲ್ಲಿ ತಿಳಿಸಿದ್ದಾರೆ. 

ಬ್ರೆಕ್ಸಿಟ್ (Brexit)
ಬ್ರೆಕ್ಸಿಟ್- (ಬ್ರಿಟನ್ ಮತ್ತು ಎಕ್ಸಿಟ್ ಎಂಬ ಎರಡು ಪದಗಳ ಸಂಕ್ಷೇಪ) ಎಂಬುದು ಯುಕೆಯ ಯುರೋಪಿಯನ್ ಯೂನಿಯನ್ (ಐರೋಪ್ಯ ಒಕ್ಕೂಟ)ನಲ್ಲಿ ಮುಂದುವರಿಯಬೇಕೆ, ಹೊರಬರಬೇಕೆ ಎಂಬುದನ್ನು ನಿರ್ಧರಿಸಲು 23 ಜೂನ್ 2016ರಲ್ಲಿ ನಡೆದ ಜನಮತಗಣನೆ.

ಈ ಜನಮತಗಣನೆಯಲ್ಲಿ 71.8 ಶೇಕಡಾ ಮತದಾರರು, ಎಂದರೆ ಸುಮಾರು ಮೂರು ಕೋಟಿ ಮತದಾರರು ಮತ ಚಲಾಯಿಸಿದ್ದು, ಹೊರಬರುವ ತೀರ್ಮಾನ 51.9 ಶೇಕಡಾ- 48.1 ಶೇಕಡಾ ನಿಕಟ ಅಂತರದಿಂದ ಜಯಿಸಿತ್ತು. ಆದರೆ, ಈ ಜನಮತಗಣನೆ ನಡೆದು ಹೆಚ್ಚುಕಡಿಮೆ ಮೂರು ವರ್ಷಗಳ ನಂತರವೂ ತಾನು 1973ರಲ್ಲಿ ಸೇರಿದ್ದ ಐರೋಪ್ಯ ಒಕ್ಕೂಟದಿಂದ ಹೊರಬರುವುದು ಹೇಗೆ ಎಂಬುದು ಬಿಡಿ, ಹೊರಬರಬೇಕೋ ಬೇಡವೋ ಎಂಬ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲು ಬ್ರಿಟನ್ ವಿಫಲವಾಗಿದೆ.

ಇಯು, ಎಂದು ಗುರುತಿಸಲ್ಪಡುವ ಐರೋಪ್ಯ ಒಕ್ಕೂಟವು 28 ಐರೋಪ್ಯ ದೇಶಗಳ ಆರ್ಥಿಕ ಮತ್ತು ರಾಜಕೀಯ ಸಹಭಾಗಿತ್ವವಾಗಿದೆ. ಎರಡನೇ ಮಹಾಯುದ್ಧದ ಬಳಿಕ- ಪರಸ್ಪರ ವಾಣಿಜ್ಯ, ವ್ಯಾಪಾರ ಇರುವ ದೇಶಗಳ ನಡುವೆ ಯುದ್ಧದ ಸಂಭವ ಕಡಿಮೆ ಎಂಬ ನೆಲೆಯಲ್ಲಿ ಆರ್ಥಿಕ ಸಹಕಾರವನ್ನು ಉತ್ತೇಜಿಸಲು ಹುಟ್ಟಿಕೊಂಡ ಪರಿಕಲ್ಪನೆಯಿದು. ಅಲ್ಲಿಂದ ಅದೀಗ ‘ಏಕ ಮಾರುಕಟ್ಟೆ’ಯಾಗುವ ತನಕ ಬೆಳೆದಿದೆ. ಎಷ್ಟರ ಮಟ್ಟಿಗೆ ಎಂದರೆ, ಸರಕು ಮತ್ತು ಜನರು ಒಂದೇ ದೇಶ ಎಂಬಷ್ಟರ ಮಟ್ಟಿಗೆ ಈ ದೇಶಗಳಲ್ಲಿ ಸಂಚರಿಸಬಹುದು. ಅದಕ್ಕೆ ಸ್ವಂತ ಕರೆನ್ಸಿಯಾದ ಯುರೋ ಇದ್ದು, ಅದನ್ನು 19 ದೇಶಗಳು ಬಳಸುತ್ತಿವೆ. ಅದಕ್ಕೆ ಸ್ವಂತ ಸಂಸತ್ತು ಕೂಡಾ ಇದ್ದು, ಅದು ಪರಿಸರ, ಸಾರಿಗೆ, ಗ್ರಾಹಕರ ಹಕ್ಕುಗಳು, ಅಷ್ಟೇ ಏಕೆ ಮೊಬೈಲ್ ಫೋನ್ ದರ ನಿಗದಿಯ ವರೆಗೆ ವ್ಯಾಪಕ ವಿಷಯಗಳ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಿದೆ.

ಹೊರ ಬರುವ ಪ್ರಕ್ರಿಯೆ ಆರಂಭಿಸಿದ ಬಳಿಕ ಯುಕೆ, 29 ಮಾರ್ಚ್ 2019ರಲ್ಲಿ ಹೊರಬರಬೇಕಾಗಿತ್ತು. ಆದರೆ ಹೊರಬರುವಿಕೆ ಕುರಿತು ಐರೋಪ್ಯ ಒಕ್ಕೂಟ ಮತ್ತು ಯುಕೆ ನಡುವೆ ಮಾಡಲಾಗಿದ್ದ ಒಪ್ಪಂದವನ್ನು ಸಂಸದರು ಮೂರು ಬಾರಿ ತಿರಸ್ಕರಿಸಿದ್ದಾರೆ. ಈ ಒಪ್ಪಂದದ ಮುಖ್ಯ ಅಂಶವೆಂದರೆ, ಉದ್ದಿಮೆಗಳು ಹಾಗೂ ವ್ಯಕ್ತಿಗಳು ಆದಷ್ಟು ಸರಾಗವಾಗಿ ಐರೋಪ್ಯ ಒಕ್ಕೂಟದಿಂದ ಹೊರಬರುವುದನ್ನು ಖಾತರಿಪಡಿಸುವುದು ಮತ್ತು ಶಾಶ್ವತವಾದ ವಾಣಿಜ್ಯ ಸಂಬಂಧವನ್ನು ರೂಪಿಸಿಕೊಳ್ಳಲು ಎರಡೂ ಕಡೆಗಳವರಿಗೆ ಕಾಲಾವಕಾಶ ನೀಡುವುದು. ಇದೀಗ ಐರೋಪ್ಯ ಒಕ್ಕೂಟವು ಆರು ತಿಂಗಳುಗಳ ವಿಸ್ತರಣೆ ನೀಡಿ, 31 ಅಕ್ಟೋಬರ್ 2019ರ ತನಕ ಕಾಲಾವಕಾಶ ಒದಗಿಸಿದೆ.

ಮೇಯ ದಾಖಲೆ
ಐರೋಪ್ಯ ಒಕ್ಕೂಟದ ಜೊತೆ ಯಾವ ರೀತಿಯ ಭವಿಷ್ಯದ ಸಂಬಂಧವನ್ನು ಒಪ್ಪಲು ಸಿದ್ಧರಿದ್ದೀರಿ ಎಂಬ ಕುರಿತು ತಮ್ಮದೇ ಪಕ್ಷದೊಳಗಿನ ಬ್ರೆಕ್ಸಿಟ್ ಬೆಂಬಲಿಗರ ಜೊತೆ ಮೂರು ವರ್ಷಗಳ ಕಠಿಣ ಚೌಕಾಸಿಯ ಬಳಿಕ ಮೇ ಅವರ ನಿರ್ಗಮನವಾಗುತ್ತಿದೆ. 2017ರ ಸಾರ್ವತ್ರಿಕ ಚುನಾವಣೆಯಲ್ಲಿ ‘ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಸದೃಢ ಮತ್ತು ಸ್ಥಿರ ನಾಯಕತ್ವ’ದ ಭರವಸೆ ನೀಡುವ ದುರಂತಕಾರಿ ಎಂದು ಬಣ್ಣಿಸಲಾಗುವ ಪ್ರಚಾರದ ನೇತೃತ್ವ ವಹಿಸಿದ್ದ ಮೇ ಅವರು ಬಹುಮತ ಕಳೆದುಕೊಂಡ ಬಳಿಕ ಈ ಕೆಲಸ ಇನ್ನಷ್ಟು ಕಠಿಣವಾಯಿತು.

ನಂತರ ರೂಪಿಸಿದ ಹತ್ತು ಅಂಶಗಳ ‘ಹೊಸ ಬ್ರೆಕ್ಸಿಟ್ ಒಪ್ಪಂದ’ವು ಪ್ರತಿಪಕ್ಷಗಳು ಬಿಡಿ, ಅವರದ್ದೇ ಟೋರಿ (ಕನ್ಸರ್ವೇಟಿವ್) ಪಕ್ಷದ ಸಾಮಾನ್ಯ ಸಂಸದರು ಮಾತ್ರವಲ್ಲ, ಅವರದ್ದೇ ಸಂಪುಟದ ಕೆಲವು ಸದಸ್ಯರನ್ನೂ ಕೆಂಡಾಮಂಡಲಗೊಳಿಸಿದ ಬಳಿಕ ಅವರ ಗತಿ ಖಚಿತವಾಗಿತ್ತು. ಹೌಸ್ ಆಫ್ ಕಾಮನ್ಸ್ (ಕೆಳಮನೆ) ನಾಯಕಿ ಆಂಡ್ರಿಯಾ ಲೀಡ್‌ಸಂ ಅವರು ಈ ಬ್ರೆಕ್ಸಿಟ್ ಮಸೂದೆಯನ್ನು ಮಂಡಿಸುವುದಕ್ಕೆ ಬದಲಾಗಿ ಬುಧವಾರ ರಾಜೀನಾಮೆಯನ್ನೇ ನೀಡಿದ್ದರು.

ಅವರ ಮಾಜಿ ವಿದೇಶಾಂಗ ಕಾರ್ಯದರ್ಶಿ ಬೋರಿಸ್ ಜಾನ್ಸನ್ ಅವರು ಮುಂದಿನ ಪ್ರಧಾನಿ ಹುದ್ದೆಗೆ ಪ್ರಬಲ ಅಭ್ಯರ್ಥಿಯಾಗಿದ್ದು, ಒಂದು ಡಜನಿಗೂ ಹೆಚ್ಚು ಹಿರಿಯ ಟೋರಿ ನಾಯಕರು ಈ ಪದಕ್ಕಾಗಿ ಹೊಂಚುತ್ತಿದ್ದಾರೆ.

ಬ್ರಿಟನ್‌ಗೆ ಮುಂದೇನು ಕಾದಿದೆ?

ಮೇ ಅವರ ನಿರ್ಗಮನದ ಬಳಿಕ ಹೊಸ ನಾಯಕತ್ವದಲ್ಲಿ ಬ್ರೆಕ್ಸಿಟ್ ಬಿಕ್ಕಟ್ಟು ತೀವ್ರವಾಗಲಿದ್ದು, ಹೊಸ ನಾಯಕತ್ವದಲ್ಲಿ ಐರೋಪ್ಯ ಒಕ್ಕೂಟದ ಜೊತೆ ಸಂಘರ್ಷದ ಸಾಧ್ಯತೆ ಹೆಚ್ಚಾಗಲಿದೆ. ಅಷ್ಟೇ ಅಲ್ಲದೇ, ಸಾರ್ವತ್ರಿಕ ಚುನಾವಣೆ ನಡೆದು ಜೆರೆಮಿ ಕೋರ್ಬಿನ್ ನೇತೃತ್ವದ ಲೇಬರ್ ಪಕ್ಷದ ಸರಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯೂ ಇದೆ. ಹಾಗಾದಲ್ಲಿ ಬ್ರಿಟನ್‌ಗೆ ಕ್ರಮಬದ್ಧವಾದ ಹಿಂತೆಗೆತ ಒಪ್ಪಂದ, ಒಪ್ಪಂದ ರಹಿತ ಹಿಂತೆಗೆತ, ಚುನಾವಣೆ, ಅಥವಾ ಐರೋಪ್ಯ ಒಕ್ಕೂಟದಿಂದ ಹೊರಬರುವ 2016ರ ನಿರ್ಧಾರವನ್ನೇ ತಲೆಕೆಳಗು ಮಾಡುವ ಸಾಧ್ಯತೆ ಇರುವ ಎರಡನೇ ಜನಮತಗಣನೆ ಇತ್ಯಾದಿಯಾಗಿ ಹಲವು ಸಾಧ್ಯತೆಗಳು ಎದುರಾಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತೆರೆಸಾ ಮೇ ಗೆ Exit ಎಂದ ಬ್ರಿಟನ್ – ಲೇಖನ ಓದಿ ನನಗೆ ಮೆಚ್ಚುಗೆ ಆಯಿತು. ಲೇಖಕರು ಸರಳವಾಗಿ EU ಬಗ್ಗೆ ಮತ್ತು ಬ್ರಿಟನ್ ನ Exit ತೊಳಲಾಟದ ಬಗ್ಗೆ ಸಂಕ್ಷಿಪ್ತವಾಗಿ ಆದರೆ ವಿವರಗಳಿಗೆ ಧಕ್ಕೆ ಆಗದಂತೆ ವಿವರಿಸಿದ್ದಾರೆ. ಧನ್ಯವಾದಗಳು.

  2. ಸಂಪಾದಕರಲ್ಲಿ ನಮ್ಮ ನಮಸ್ಕಾರಗಳು,

    ತಮ್ಮ ಅಂಕಣದಲ್ಲಿ ಬಂದಂತಹ ಬರಹಗಳು ತುಂಬಾ ಅರ್ಥಪೂರ್ಣವಾಗಿರುತ್ತದೆ ಮತ್ತು ತುಂಬಾ ಚೆನ್ನಾಗಿ ಮೂಡಿಬಂದಿರುತ್ತದೆ ಮತ್ತೊಮ್ಮೆ ತಮಗೆ ಹೃದಯ ಪೂರಕವಾಗಿ ಅಭಿನಂದನೆಗಳು.🙏✍

  3. ಸಂಪಾದಕರಲ್ಲಿ ಸವಿನಯ ಪ್ರಾರ್ಥನೆಗಳು, ಕೇಂದ್ರ ಸರ್ಕಾರದವರು ತಮಗೆ ಸ್ಪಂದಿಸದಿದ್ದರೆ, ಇ ಡಿ ಪ್ರಕರಣದಲ್ಲಿ ದಾಖಲಿಸುತ್ತಾರೆ ಯಾಕೆ? ಮತ್ತು ತಮ್ಮಲ್ಲಿರುವ ಸಮಾಜ ಸೇವಕರಲ್ಲಿ ಇಲ್ಲಿಯವರೆಗೂ ಯಾವ ವ್ಯಕ್ತಿಯೂ ಕೂಡಾ ತನಿಖೆಗೆ ವಹಿಸಿಕೊಟ್ಟಿಲ್ಲಾ ಈ ರೀತಿ ಮಾಡುವುದು ಸರಿಯೇ ಇದು ನಮ್ಮ ಪ್ರಶ್ನೆಯಾಗಿದೆ ದಯಮಾಡಿ ಉತ್ತರಿಸಿರಿ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...