Homeಕರ್ನಾಟಕಗೌರಿ ಮೇಡಂ ಇಲ್ಲದ ಈ ಐದು ವರ್ಷಗಳು..

ಗೌರಿ ಮೇಡಂ ಇಲ್ಲದ ಈ ಐದು ವರ್ಷಗಳು..

- Advertisement -
- Advertisement -

ಕೆಲವು ಸಂಗತಿಗಳು ನಮ್ಮನ್ನು ಚಿಂತನೆಗೆ ಹಚ್ಚುವ ಮಹತ್ವದ ದಿನಗಳನ್ನು ಸೃಷ್ಟಿಸುತ್ತವೆ. ಗೌರಿ ಲಂಕೇಶರನ್ನು ಕೊಂದ ಸೆಪ್ಟೆಂಬರ್ 5 ಅಂತಹ ಒಂದು ದಿನ. ಅನ್ಯಾಯವಾಗಿ ಹತ್ಯೆಗೈಯ್ಯಲಾದ ವ್ಯಕ್ತಿ ನಮ್ಮೆಲ್ಲರ ಪ್ರೀತಿಯ ಗೌರಿ ಮೇಡಂ ಆಗಿದ್ದರು ಎಂಬ ಕಾರಣಕ್ಕಲ್ಲ. ಹಾಗಿದ್ದಲ್ಲಿ ಅದುವರೆಗೆ ಅವರಿಗೆ ಪ್ರೀತಿಪಾತ್ರರಾಗಿದ್ದವರಿಗೆ ಮಾತ್ರ ಅದು ಮಹತ್ವದ್ದಾಗಿರುತ್ತದೆ. ಆದರೆ, ಇದಕ್ಕೆ ಒಂದು ಚಾರಿತ್ರಿಕ ಮಹತ್ವ ಬರಲು ಬೇರೆ ಕಾರಣಗಳಿವೆ. ದೇಶದಲ್ಲಿನ ಜೀವ ವಿರೋಧಿ ರಾಜಕಾರಣ ಹಾಗೂ ಅದರ ವಿರುದ್ಧದ ಸಂಗ್ರಾಮದ ತಿರುವು ಬಿಂದುಗಳಲ್ಲಿ ಅದೂ ಒಂದಾಗಿದೆ. ಮಾನವೀಯತೆ ಪರ ನಿಂತ ಬುದ್ಧಿಜೀವಿ ಚಿಂತಕರ ಸರಣಿ ಹತ್ಯೆಗಳಲ್ಲಿ ಗೌರಿಯವರದ್ದು ನಾಲ್ಕನೆಯದ್ದು. ಆದರೆ, ಅಲ್ಲಿಂದ ಮುಂದಕ್ಕೆ ಆ ರೀತಿಯ ಹತ್ಯೆಗಳು ನಡೆಯಲಿಲ್ಲ. ಈ ಹತ್ಯೆಯ ತನಿಖೆಯ ಹೊಣೆ ಹೊತ್ತ ಎಸ್‌ಟಿಎಫ್‌ನ ಅಧಿಕಾರಿಗಳು ಹೇಳುವಂತೆ ’ಗೌರಿ ಇನ್ನೂ ಹಲವರ ಜೀವ ಉಳಿಸಿದರು’. ಗೌರಿಯವರ ಹತ್ಯೆಯ ಕಾರಣದಿಂದ ರಚನೆಯಾದ ಎಸ್‌ಟಿಎಫ್ ’ಕಿಲ್ಲರ್ ಗ್ಯಾಂಗ್’ನ್ನು ಹಿಡಿದುಹಾಕಿತು ಎಂಬ ಕಾರಣಕ್ಕೆ ಮಾತ್ರವಲ್ಲ; ಇಂತಹ ಹತ್ಯೆಗಳನ್ನು ಭಾರತದ ನಾಗರಿಕ ಸಮಾಜವು ಸುಮ್ಮನೇ ಸಹಿಸುವುದಿಲ್ಲ ಎಂಬ ಸಂದೇಶವನ್ನ ಭಾರತದ ಸಮಾಜವು ’ಸಂಬಂಧಪಟ್ಟವರಿಗೆ’ ನೀಡಿತು.

ಹತ್ಯೆಯ ಮೂಲಕ ಒಂದು ಸಂದೇಶ ಕೊಡಬೇಕೆಂದು ಬಯಸಿದವರಿಗೆ ಪ್ರತಿ ಸಂದೇಶವನ್ನು ಸಮಾಜವು ನೀಡಿದ್ದು ಗೌರಿಯವರ ಹತ್ಯೆಯ ನಂತರ. ಅಲ್ಲಿಂದಾಚೆಗೆ ಬುದ್ಧಿಜೀವಿ ಚಿಂತಕರನ್ನು ಹಣಿಯಲು ಭೀಮಾ ಕೊರೆಗಾಂವ್ ಸುಳ್ಳು ಕೇಸು, ದೆಹಲಿ ಗಲಭೆಯ ಸುಳ್ಳು ಕೇಸುಗಳನ್ನು ಹೆಣೆಯಲಾಯಿತು. ತೀರಾ ಇತ್ತೀಚೆಗೆ ತೀಸ್ತಾ ಸೆತ್ಲ್‌ವಾದ್ ಹಾಗೂ ಶ್ರೀಕುಮಾರ್‌ರನ್ನು ಜೈಲಿಗೆ ತಳ್ಳಲು ಸುಪ್ರೀಂಕೋರ್ಟನ್ನೇ ಬಳಸಿಕೊಳ್ಳಲಾಯಿತು. ಭೌತಿಕ ಹತ್ಯೆಗಳು ಅಸಾಧ್ಯವೆಂಬ ವಾತಾವರಣ ನಿರ್ಮಾಣವಾದಾಗ ಕಂಡುಕೊಂಡ ಪರ್ಯಾಯ ದಾರಿಗಳಿವು. ಅದು ಅಸಾಧ್ಯವೆಂದಾಗಿದ್ದು ಗೌರಿಯವರ ಹತ್ಯೆಯನ್ನು ಜೀರ್ಣಿಸಿಕೊಳ್ಳಲಾಗದ್ದರಿಂದ.

ಅದಕ್ಕೆ ಮುಂಚೆಯೇ ಜೆಎನ್‌ಯುನಲ್ಲಿ ನಡೆದ ಪ್ರತಿಭಟನೆ, ಊನಾ ಪ್ರತಿಭಟನೆ, ರೋಹಿತ್ ವೇಮುಲ ಹತ್ಯೆಯ ನಂತರ ನಡೆದ ಪ್ರತಿಭಟನೆಗಳು ಒಂದು ವಾತಾವರಣವನ್ನು ಉಂಟು ಮಾಡಿದ್ದವು. ಸಂಬಂಧಪಟ್ಟ ವ್ಯಕ್ತಿಗಳು ದೈತ್ಯ ಶಕ್ತಿಗಳೆದುರಿನ ಪ್ರತಿರೋಧದ ಸಂಕೇತಗಳಾಗಿ ಹೊರಹೊಮ್ಮುತ್ತಿದ್ದರು. ಅಂತಹ ಸಂಕೇತಗಳನ್ನೇ ಗೌರಿಯವರು ತನ್ನ ಮಕ್ಕಳು ಎಂದು ಕರೆದಿದ್ದು. ಅವೆಲ್ಲವೂ ಶಿಖರ ಮುಟ್ಟಿದ್ದು ಗೌರಿಯವರ ಹತ್ಯೆಯ ಸಂದರ್ಭದಲ್ಲಿ. ಒಂದಲ್ಲ ಒಂದು ರೀತಿಯಲ್ಲಿ ಆ ಪ್ರತಿರೋಧವು ಇಂದೂ ಮುಂದುವರಿಯುತ್ತಿದೆ. ಆದರೆ, ಇದಕ್ಕಿಂತ ಭಿನ್ನ ಆಯಾಮದ ಎರಡು ಜನಾಂದೋಲನಗಳು ಮತ್ತು ಒಂದು ಪಕ್ಷ ’ಅಜೇಯ’ರನ್ನು ಮಣಿಸಿದವು. ಆ ಎರಡು ಜನಾಂದೋಲನಗಳ ನೇತೃತ್ವ ವಹಿಸಿದವರು ಜನಸಾಮಾನ್ಯರು. ಒಂದು, ದೇಶದ ಮುಸ್ಲಿಮರ ನೇತೃತ್ವದಲ್ಲಿ ನಡೆದ ಸಿಎಎ ವಿರೋಧಿ ಆಂದೋಲನ. ಎರಡು, ಪಂಜಾಬ್ ಹರಿಯಾಣಗಳ ರೈತರ ನೇತೃತ್ವದಲ್ಲಿ ನಡೆದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದ ಆಂದೋಲನ. ಗುಣಾತ್ಮಕವಾಗಿ ಬೇರೆ ಬಗೆಯ ಚಳವಳಿಗಳಾದ ಇವುಗಳು, ವಿಶಾಲಾರ್ಥದಲ್ಲಿ ಕಳೆದೊಂದಷ್ಟು ಕಾಲದ ಒಳಬೇಗುದಿಯ ಅಭಿವ್ಯಕ್ತಿಯೇ ಆಗಿದ್ದವು. ಆ ಅರ್ಥದಲ್ಲಿ ಇವು ನಿಜಕ್ಕೂ ನಾಲ್ಕು ಹೆಜ್ಜೆ ಮುಂದಕ್ಕೆ ತಂದ ವಿದ್ಯಮಾನಗಳು. ಹಾಗೆಯೇ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ಸು ಬಿಜೆಪಿಯ ಓಟಕ್ಕೆ ತಡೆ ಹಾಕಿತು.

ಅದೇನೇ ಇದ್ದರೂ, ಕೊಲೆಗೀಡಾದ ಮತ್ತು ಬಂಧನಕ್ಕೊಳಗಾಗಿರುವ ವ್ಯಕ್ತಿಗಳಾರೂ ಬಯಸದ ಪುನರಾಯ್ಕೆ 2019ರಲ್ಲಿ ನಡೆಯಿತು. ಬಯಸದ ಪ್ರಮಾಣದಲ್ಲಿ ಮೋದಿ ಸರ್ಕಾರ ಪುನರಾಯ್ಕೆಯಾಯಿತು. ಉತ್ತರ ಪ್ರದೇಶದಂತಹ ರಾಜ್ಯ ಇನ್ನೂ ಕೆಟ್ಟಸ್ಥಿತಿಗೆ ಹೋಯಿತು. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರಗಳಲ್ಲಿ ಬಿಜೆಪಿಗೆ ಬಹುಮತ ಬಾರದಿದ್ದರೂ ಅಧಿಕಾರಕ್ಕೆ ಬಂದಿತು. ಒಂದು ರೀತಿಯಲ್ಲಿ ಗೌರಿ ಲಂಕೇಶರು ಇದ್ದ ಕಾಲದ ಕೇಡುಗಳ ಮುಂದುವರಿಕೆಗಳಿವು. ಅದುವರೆಗೆ ತೆವಳುತ್ತಾ ಭಜನೆ ಮಾಡತೊಡಗಿದ್ದ ಮಾಧ್ಯಮದ ಜೊತೆಗೆ ನ್ಯಾಯಾಲಯಗಳೂ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯತೊಡಗಿದ್ದು ಈ ಅವಧಿಯ ಇನ್ನೊಂದು ’ಬೆಳವಣಿಗೆ’. ಮಂದಿರ ಶಿಲಾನ್ಯಾಸ, ಕಾಶ್ಮೀರ, ಹಿಜಾಬ್ ಒಳಗೊಂಡು ಹಲವು ಹತ್ತು ಬಗೆಯ ಕಮ್ಯುನಲ್ ಆಕ್ಷನ್‌ಗಳೆಲ್ಲದರ ಸಂದರ್ಭದಲ್ಲಿ ಕೋರ್ಟು ತನ್ನ ಕ್ರಿಯೆ ಅಥವಾ ನಿಷ್ಕ್ರಿಯೆಗಳ ಮೂಲಕ ಶಾಮೀಲಾಯಿತು. ಇನ್ನೊಂದು ಮುಂದುವರಿಕೆಯದು.

ಬಂಧನಕ್ಕೊಳಗಾಗಿ, ಇದೀಗ ಬಿಡುಗಡೆಯಾಗಿರುವ ಹಾಗೂ ಗೌರಿ ನೆನಪಿನ ಕಾರ್ಯಕ್ರಮಕ್ಕೆ ಬರಲಿರುವ ಝುಬೇರ್ ಇನ್ನೊಂದು ವಿದ್ಯಮಾನದ ಮುಂದುವರಿಕೆ. ಇಂತಹ ನೂರಾರು ಕ್ರಿಯಾಶೀಲರು ಹೊಸ ಮಾಧ್ಯಮದ ಪ್ರಯತ್ನದಲ್ಲಿ ಸ್ಥಾಪಿತ ಪಟ್ಟಭದ್ರರಿಗೆ ಸೆಡ್ಡು ಹೊಡೆದು ನಿಂತಿದ್ದಾರೆ. ಇದು ಹಿಂದಿನ ಶತಮಾನದ ಒಳ್ಳೆಯ ಜರ್ನಲಿಸಂನ ಮುಂದುವರಿಕೆಯಾದರೂ, ಸ್ವತಃ ಗೌರಿಯವರು ಪ್ರತಿನಿಧಿಸುತ್ತಿದ್ದ ಈ ಕಾಲದ ಜರ್ನಲಿಸಂ-ಆಕ್ಟಿವಿಸಂನ ಮುಂದುವರಿಕೆಯೂ ಹೌದು.

ಕೇಡು ತನ್ನ ಸ್ವರೂಪದಲ್ಲಿ ಹಾಗೂ ಪ್ರಮಾಣದಲ್ಲಿ ನೆಗೆದು ನಿಂತಿದೆ. ಪ್ರತಿರೋಧವು ಅದೇ ಪ್ರಮಾಣದಲ್ಲಿ ಬೆಳೆದಿಲ್ಲವಾದರೂ, ಮುಂದುವರೆದಿದೆ; ಒಂದಷ್ಟು ಭಿನ್ನ ಸ್ವರೂಪದಲ್ಲೂ ಸಹಾ. ಭಿನ್ನ ಸ್ವರೂಪ ಏಕೆಂಬುದನ್ನು ಒಂದು ಉದಾಹರಣೆಯ ಮೂಲಕ ವಿವರಿಸಬಹುದು. ಸಿಎಎ ಸಂದರ್ಭದಲ್ಲಿ ಆ ಆಂದೋಲನದ ಶಕ್ತಿಯಾಗಿದ್ದದ್ದು ಮುಸ್ಲಿಂ ಜನಸಾಮಾನ್ಯರು; ಆದರೆ ಅದಕ್ಕೊಂದು ವಿಶಿಷ್ಟ ಕಳೆ ತಂದುಕೊಟ್ಟಿದ್ದು ಮುಸ್ಲಿಂ ಮಹಿಳೆಯರು ಮತ್ತು ನಗರಗಳಲ್ಲಿ ಯುವಜನರ ಗುಂಪುಗಳು. ಇವರು ಹಿಂದೆ ಇಂತಹ ಕಡೆ ಕಾಣದವರು. ರೈತಾಂದೋಲನದ ಹೊಸದಲ್ಲ; ತಿಂಗಳುಗಟ್ಟಲೆ ಸಾವಿರ ಸಾವಿರ ಜನರು ಈ ಪರಿ ಕೂರುವುದು ಹೊಸದು. ಝುಬೇರ್‌ರಂಥವರು ಹೊಸಬರು. ಅಂದರೆ ’ಪ್ರಗತಿಪರರ ಐಕ್ಯತೆ’ಯ ಅದೇ ಹಳೆಯ ಮಂತ್ರದಿಂದ ಸಾಧಿತವಾಗದ ಹೊಸದು ಇದು. ಉಡುಪಿಯ ಸಹಬಾಳ್ವೆ ಸಮಾವೇಶದಲ್ಲೂ ಅಂತಹದೊಂದು ಹೊಸತನ ಸಣ್ಣ ಪ್ರಮಾಣದಲ್ಲಿ ಇದ್ದಿತ್ತು. ಆದರೆ ಈ ಕಡೆಯ ಕೇಡುಗಳು ಕಡಿಮೆಯೇನಿಲ್ಲ. ಬಿಜೆಪಿ, ಆರೆಸ್ಸೆಸ್ಸನ್ನು ಅವರ ಅಸ್ತ್ರಗಳಿಂದಲೇ ಕತ್ತರಿಸಹೊರಡುವ ಎಲ್ಲವೂ ಆ ಕಡೆಗೇ ಅನುಕೂಲ ಮಾಡಿಕೊಡುತ್ತವೆ. ಆ ಅಸ್ತ್ರಗಳೆಂದರೆ ಸುಳ್ಳು, ದ್ವೇಷ, ಅವಕಾಶವಾದಿತನ, ಅಸಹನೆ ಇತ್ಯಾದಿ. ಮತ್ತು ಈ ಕಡೆಯವರಿಗೆ ಮಾತ್ರ ಸಿದ್ಧಿಸಿರುವ ಈಗೋ, ಸಣ್ಣತನ ಮತ್ತು ಎಂತಹುದೇ ಸಂದರ್ಭದಲ್ಲೂ ತಮ್ಮದೇ ಕಿರೀಟ ಎತ್ತರದಲ್ಲಿರಬೇಕೆಂಬ ಅತೀವ ಲಾಲಸೆ. ಇದೂ ಸಹಾ ಹಿಂದಿನದ್ದೇ ಮುಂದುವರಿಕೆ.

ಆ ಅರ್ಥದಲ್ಲಿ ಒಂದಷ್ಟು ಜನ ತುಂಬಾ ಮುಂದುವರೆದಿಲ್ಲ. ಮುಂದುವರೆದವರು ರೈತರು, ಮುಸ್ಲಿಂ ಮಹಿಳೆಯರು, ನೂರು ಬಗೆಯ ಹೊಸ ಸಂವಹನ ಸಾಧ್ಯತೆ ಕಂಡುಕೊಂಡಿರುವವರು ಮುಂತಾದವರು. ಬಹುಶಃ ಅವರು ಮತ್ತು ಅವರಂಥವರೇ ಮುಂದಿನ ಹಾದಿಯನ್ನೂ ತೋರುತ್ತಾರೆ ಮತ್ತು ಮುನ್ನಡೆಸುತ್ತಾರೆಂದು ತೋರುತ್ತದೆ.

ಪ್ರತಿ ಸೆಪ್ಟೆಂಬರ್ 5, ಜೀವಪರ ಕನಸ್ಸುಳ್ಳ ಕರ್ನಾಟಕದ ಒಂದಷ್ಟು ಕ್ರಿಯಾಶೀಲರಿಗೆ ಒಂದ್ಹೆಜ್ಜೆ ನಿಂತು ನೋಡಿಕೊಳ್ಳುವ ಸಂದರ್ಭವೆನ್ನುವುದಾದರೆ, ಈ ಹೊತ್ತು ನೋಡಿಕೊಳ್ಳಲು ಸಾಧ್ಯವಾಗಿದ್ದು ಇಷ್ಟೇ.


ಇದನ್ನೂ ಓದಿ: ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...