Homeಕರ್ನಾಟಕಇವರು ನಾಗರಿಕ ಟೆರರಿಸ್ಟ್‌ಗಳು, ಅವರನ್ನು ಬಂಧಿಸಿ: ಸೊಗಡು ಶಿವಣ್ಣ ವಿವಾದ

ಇವರು ನಾಗರಿಕ ಟೆರರಿಸ್ಟ್‌ಗಳು, ಅವರನ್ನು ಬಂಧಿಸಿ: ಸೊಗಡು ಶಿವಣ್ಣ ವಿವಾದ

ಕಾಂಗ್ರೆಸ್ ನಾಯಕರಾದ ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ, ಇವರು ನಾಗರೀಕ ಟೆರರಿಸ್ಟುಗಳು, ಅವರನ್ನು ಬಂಧಿಸಿ.

- Advertisement -
- Advertisement -

ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಪತ್ರ ಬರೆದಿರುವ ಕಾಂಗ್ರೆಸ್ ಮುಖಂಡರಾದ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್ ಮತ್ತು ಹ್ಯಾರೀಸ್ ಅವರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಬಂಧಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೊಗಡು ಶಿವಣ್ಣ, “ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ. ಇಂಥವರು ದೇಶಕ್ಕೆ ಅಪಾಯ ತಂದೊಡ್ಡುತ್ತಿದ್ದಾರೆ. ಇವರು ನಾಗರಿಕ ಟೆರರಿಸ್ಟ್‌ಗಳು, ದೇಶದ್ರೋಹಿಗಳು. 70 ವರ್ಷಗಳಿಂದ ನಮ್ಮ ಸರ್ಕಾರಗಳು ನೀಡಿದ ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡು ದೇಶಕ್ಕೆ ಕಂಟಕವಾಗಿದ್ದಾರೆ” ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

ಈ ತಬ್ಲಿಘಿಗಳು ಕೆಟ್ಟ ಸಂತಾನ. ಇವರನ್ನು ದೇಶದಿಂದ ಹೊರಹಾಕಬೇಕು. ಕೊರೊನ ಸಂದರ್ಭದಲ್ಲಿ ದೇವರ ಪ್ರಾರ್ಥನೆ ಸಲ್ಲಿಸುವುದಕ್ಕಲ್ಲ. ರೋಗ ಹರಡುವುದಕ್ಕೂ ಇವರು ಯೋಜಿಸಿದ್ದಾರೆ ಎಂದು ಶಿವಣ್ಣ ವಾಗ್ದಾಳಿ ನಡೆಸಿದರು.

ದೇಶ ವಿಭಜನೆಯ ಸಂದರ್ಭದಲ್ಲಿ ಕೇವಲ 3 ಕೋಟಿ ಮುಸ್ಲೀಮರು ಇದ್ದರು. ಇಷ್ಟು ವರ್ಷಗಳಿಂದ ಅವರನ್ನು ಸೌಹಾರ್ದಯುತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ದೇಶ ವಿಭಜನೆಯ ಸಂದರ್ಭದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ತೆರಳಿದ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ಮತಾಂತರ ಮಾಡಲಾಗುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಹಿಂದೂಗಳೇ ಇಲ್ಲದಂತೆ ಮಾಡಲಾಗುತ್ತಿದೆ ಎಂದು ದೂರಿದರು.

ರಂಜಾನ್ ಹಬ್ಬ ಆಚರಣೆಯ ಹೆಸರಿನಲ್ಲಿ ಕೊರೊನ ಹರಡುವ ಹುನ್ನಾರ ನಡೆಯುತ್ತಿದೆ. ಈ ಮೂವರು ಮುಖಂಡರು ತಬ್ಲಿಘಿಗಳು. ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲೀ ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಮಾಧ್ಯಮಗೋಷ್ಠಿಯ ನಡುವೆ ಅವಾಚ್ಯ ಶಬ್ದಗಳು ಶಿವಣ್ಣ ಅವರಿಂದ ಹೊರಬಂದವು. ನನಗೆ ಇಷ್ಟು ವಯಸ್ಸಾಗಿದೆ ನನ್ನ ಮೈ ಉರಿಯುತ್ತಿದೆ. ದೇಶ ರಕ್ಷಣೆ ನಮ್ಮ ಜವಾಬ್ದಾರಿ. ಹಾಗಾಗಿ ಕೆಟ್ಟಭಾಷೆಯಲ್ಲಿ ಮಾತನಾಡಿದ್ದೇನೆ. ಅವುಗಳನ್ನು ಹೊಡೆದು ಹಾಕಿ. ಬದಲಿಗೆ ಕೆಟ್ಟ ಸಂತಾನ ಎಂತ ಬೇಕಾದರೆ ಬರೆಯಿರಿ ಎಂದು ಉಚಿತ ಸಲಹೆಯನ್ನು ನೀಡಿದರು.

ನಾಲ್ಕು ಬಾರಿ ಶಾಸಕರಾಗಿರುವ ಮತ್ತು ಎರಡು ಬಾರಿ ಸಚಿವರಾಗಿ ಕೆಲಸ ಮಾಡಿರುವ ಸೊಗಡು ಶಿವಣ್ಣ ಮಾಗಿಲ್ಲ ಎಂಬುದು ಅವರು ನಡೆಸುವ ಪ್ರತಿಯೊಂದು ಪತ್ರಿಕಾಗೋಷ್ಠಿಗಳಿಂದ ತಿಳಿದುಬರುತ್ತದೆ. ಕೊರೊನ ನಿಯಂತ್ರಣಕ್ಕೆ ಬೇಕಾದ ಸಲಹೆ ಕೊಡುವುದು ಬಿಟ್ಟು ಒಂದು ಸಮುದಾಯವನ್ನು ದೂರುವುದು ಸರಿಯಲ್ಲ ಎಂಬುದು ಅವರಿಗೆ ಹೊಳೆಯಲಿಲ್ಲವೇ ಎಂಬ ಮಾತುಗಳು ಪತ್ರಕರ್ತರ ನಡುವೆ ಕೇಳಿ ಬಂದಿವೆ.


ಓದಿ: ಅಲ್ಪಸಂಖ್ಯಾತರ ವಿರುದ್ದ ಮಾತನಾಡಬಾರದು ಎಂದ ಯಡಿಯೂರಪ್ಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...