Homeಕರ್ನಾಟಕಇವರು ನಾಗರಿಕ ಟೆರರಿಸ್ಟ್‌ಗಳು, ಅವರನ್ನು ಬಂಧಿಸಿ: ಸೊಗಡು ಶಿವಣ್ಣ ವಿವಾದ

ಇವರು ನಾಗರಿಕ ಟೆರರಿಸ್ಟ್‌ಗಳು, ಅವರನ್ನು ಬಂಧಿಸಿ: ಸೊಗಡು ಶಿವಣ್ಣ ವಿವಾದ

ಕಾಂಗ್ರೆಸ್ ನಾಯಕರಾದ ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ, ಇವರು ನಾಗರೀಕ ಟೆರರಿಸ್ಟುಗಳು, ಅವರನ್ನು ಬಂಧಿಸಿ.

- Advertisement -
- Advertisement -

ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಪತ್ರ ಬರೆದಿರುವ ಕಾಂಗ್ರೆಸ್ ಮುಖಂಡರಾದ ಸಿ.ಎಂ.ಇಬ್ರಾಹಿಂ, ಜಮೀರ್ ಅಹಮದ್ ಮತ್ತು ಹ್ಯಾರೀಸ್ ಅವರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಬಂಧಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೊಗಡು ಶಿವಣ್ಣ, “ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ. ಇಂಥವರು ದೇಶಕ್ಕೆ ಅಪಾಯ ತಂದೊಡ್ಡುತ್ತಿದ್ದಾರೆ. ಇವರು ನಾಗರಿಕ ಟೆರರಿಸ್ಟ್‌ಗಳು, ದೇಶದ್ರೋಹಿಗಳು. 70 ವರ್ಷಗಳಿಂದ ನಮ್ಮ ಸರ್ಕಾರಗಳು ನೀಡಿದ ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡು ದೇಶಕ್ಕೆ ಕಂಟಕವಾಗಿದ್ದಾರೆ” ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

ಈ ತಬ್ಲಿಘಿಗಳು ಕೆಟ್ಟ ಸಂತಾನ. ಇವರನ್ನು ದೇಶದಿಂದ ಹೊರಹಾಕಬೇಕು. ಕೊರೊನ ಸಂದರ್ಭದಲ್ಲಿ ದೇವರ ಪ್ರಾರ್ಥನೆ ಸಲ್ಲಿಸುವುದಕ್ಕಲ್ಲ. ರೋಗ ಹರಡುವುದಕ್ಕೂ ಇವರು ಯೋಜಿಸಿದ್ದಾರೆ ಎಂದು ಶಿವಣ್ಣ ವಾಗ್ದಾಳಿ ನಡೆಸಿದರು.

ದೇಶ ವಿಭಜನೆಯ ಸಂದರ್ಭದಲ್ಲಿ ಕೇವಲ 3 ಕೋಟಿ ಮುಸ್ಲೀಮರು ಇದ್ದರು. ಇಷ್ಟು ವರ್ಷಗಳಿಂದ ಅವರನ್ನು ಸೌಹಾರ್ದಯುತವಾಗಿ ನಡೆಸಿಕೊಂಡು ಬಂದಿದ್ದೇವೆ. ಆದರೆ ದೇಶ ವಿಭಜನೆಯ ಸಂದರ್ಭದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ತೆರಳಿದ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಅವರನ್ನು ಮತಾಂತರ ಮಾಡಲಾಗುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಹಿಂದೂಗಳೇ ಇಲ್ಲದಂತೆ ಮಾಡಲಾಗುತ್ತಿದೆ ಎಂದು ದೂರಿದರು.

ರಂಜಾನ್ ಹಬ್ಬ ಆಚರಣೆಯ ಹೆಸರಿನಲ್ಲಿ ಕೊರೊನ ಹರಡುವ ಹುನ್ನಾರ ನಡೆಯುತ್ತಿದೆ. ಈ ಮೂವರು ಮುಖಂಡರು ತಬ್ಲಿಘಿಗಳು. ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲೀ ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಮಾಧ್ಯಮಗೋಷ್ಠಿಯ ನಡುವೆ ಅವಾಚ್ಯ ಶಬ್ದಗಳು ಶಿವಣ್ಣ ಅವರಿಂದ ಹೊರಬಂದವು. ನನಗೆ ಇಷ್ಟು ವಯಸ್ಸಾಗಿದೆ ನನ್ನ ಮೈ ಉರಿಯುತ್ತಿದೆ. ದೇಶ ರಕ್ಷಣೆ ನಮ್ಮ ಜವಾಬ್ದಾರಿ. ಹಾಗಾಗಿ ಕೆಟ್ಟಭಾಷೆಯಲ್ಲಿ ಮಾತನಾಡಿದ್ದೇನೆ. ಅವುಗಳನ್ನು ಹೊಡೆದು ಹಾಕಿ. ಬದಲಿಗೆ ಕೆಟ್ಟ ಸಂತಾನ ಎಂತ ಬೇಕಾದರೆ ಬರೆಯಿರಿ ಎಂದು ಉಚಿತ ಸಲಹೆಯನ್ನು ನೀಡಿದರು.

ನಾಲ್ಕು ಬಾರಿ ಶಾಸಕರಾಗಿರುವ ಮತ್ತು ಎರಡು ಬಾರಿ ಸಚಿವರಾಗಿ ಕೆಲಸ ಮಾಡಿರುವ ಸೊಗಡು ಶಿವಣ್ಣ ಮಾಗಿಲ್ಲ ಎಂಬುದು ಅವರು ನಡೆಸುವ ಪ್ರತಿಯೊಂದು ಪತ್ರಿಕಾಗೋಷ್ಠಿಗಳಿಂದ ತಿಳಿದುಬರುತ್ತದೆ. ಕೊರೊನ ನಿಯಂತ್ರಣಕ್ಕೆ ಬೇಕಾದ ಸಲಹೆ ಕೊಡುವುದು ಬಿಟ್ಟು ಒಂದು ಸಮುದಾಯವನ್ನು ದೂರುವುದು ಸರಿಯಲ್ಲ ಎಂಬುದು ಅವರಿಗೆ ಹೊಳೆಯಲಿಲ್ಲವೇ ಎಂಬ ಮಾತುಗಳು ಪತ್ರಕರ್ತರ ನಡುವೆ ಕೇಳಿ ಬಂದಿವೆ.


ಓದಿ: ಅಲ್ಪಸಂಖ್ಯಾತರ ವಿರುದ್ದ ಮಾತನಾಡಬಾರದು ಎಂದ ಯಡಿಯೂರಪ್ಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...