Homeಮುಖಪುಟಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

ಇತ್ತೀಚಿನ ವರ್ಷಗಳಲ್ಲಿ ಭಾರತ ಕಂಡ ಭೀಕರ ರೈಲು ದುರಂತಗಳಿವು

- Advertisement -
- Advertisement -

ಒಡಿಶಾ ರಾಜ್ಯದಲ್ಲಿ ಮೂರು ರೈಲುಗಳು ಡಿಕ್ಕಿಯಾಗಿ ಸುಮಾರು 300 ಮಂದಿ ಕೊನೆಯುಸಿರೆಳೆದಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲು ಮತ್ತು ಒಂದು ಗೂಡ್ಸ್‌ ರೈಲು ಗಾಡಿ ನಡುವೆ ನಡೆದಿರುವ ಈ ದುರಂತದಲ್ಲಿ ಸುಮಾರು 900 ಮಂದಿ ಗಾಯಗೊಂಡಿದ್ದಾರೆಂದು ಅಂದಾಜಿಸಲಾಗಿದೆ. ಶುಕ್ರವಾರ ರಾತ್ರಿ ಘಟಿಸಿರುವ ಈ ಪ್ರಕರಣ ಸೇರಿದಂತೆ ಭಾರತ ಇತ್ತೀಚಿನ ವರ್ಷಗಳಲ್ಲಿ ಹಲವು ರೈಲು ದುರಂತಗಳನ್ನು ಕಂಡಿದೆ.

ಹಳಿತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳಿಗೆ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಡಿಕ್ಕಿ ಹೊಡೆದು ಎದುರಿನ ಹಳಿಯಲ್ಲಿ ಬಿದ್ದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಟ್ವೀಟ್ ಮಾಡಿದ್ದಾರೆ. “ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಈ ದುಃಖದ ಘಳಿಗೆಯಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿಯವರು ಒಡಿಸ್ಸಾಕ್ಕೆ ಭೇಟಿ ನೀಡುತ್ತಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಹಾಯಕ್ಕೆ ಧಾವಿಸಿದ್ದಾರೆ

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದ್ದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

300 ಮಂದಿಯ ಸಾವಿಗೆ ಕಾರಣವಾಗಿರುವ ಈಗಿನ ಘಟನೆಯು ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಘಟಿಸಿದ ಹಲವು ರೈಲು ದುರಂತಗಳನ್ನು ನೆನಪಿಸಿದೆ.

2011, ಜುಲೈ 7ರಂದು ಛಪ್ರಾ-ಮಥುರಾ ಎಕ್ಸ್‌ಪ್ರೆಸ್ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಬಳಿ ಬಸ್‌ಗೆ ಡಿಕ್ಕಿ ಹೊಡೆದಿತ್ತು. 69 ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಮಾನವ ರಹಿತ ಕ್ರಾಸಿಂಗ್‌ನಲ್ಲಿ ರಾತ್ರಿ 1:55ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ರೈಲು ಅತಿವೇಗದಲ್ಲಿ ಚಲಿಸುತ್ತಿತ್ತು. ರೈಲಿಗೆ ಸಿಲುಕಿದ ಬಸ್ ಸುಮಾರು ಅರ್ಧ ಕಿಲೋಮೀಟರ್ ದೂರದಷ್ಟು ಎಳೆಯಲ್ಪಷ್ಟಿತ್ತು.

ರೈಲು ಅಪಘಾತಗಳನ್ನು ಅವಲೋಕಿಸುವಾಗ 2012ನೇ ಇಸವಿಯನ್ನು ಭಾರತೀಯ ರೈಲ್ವೇ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ವರ್ಷ ಎಂದು ಗುರುತಿಸಲಾಗುತ್ತದೆ. ಆ ವರ್ಷ ಸುಮಾರು 14 ಅಪಘಾತಗಳು ನಡೆದಿದ್ದವು. ರೈಲುಗಳ ಹಳಿತಪ್ಪುವಿಕೆ, ಮುಖಾಮುಖಿ ಡಿಕ್ಕಿಯಂತಹ ವರದಿಗಳಾಗಿದ್ದವು.

2012, ಜುಲೈ 30ರಂದು ನೆಲ್ಲೂರು ಬಳಿ ‘ದೆಹಲಿ-ಚೆನ್ನೈ ತಮಿಳುನಾಡು ಎಕ್ಸ್‌ಪ್ರೆಸ್‌’ನ ಕೋಚ್‌ಗೆ ಬೆಂಕಿ ತಗುಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

2014 ಮೇ 26ರಂದು ಉತ್ತರ ಪ್ರದೇಶದ ಸಂತ ಕಬೀರ್ ನಗರ ಪ್ರದೇಶದಲ್ಲಿ ರೈಲು ದುರಂತ ಘಟಿಸಿತ್ತು. ಗೋರಖ್‌ಪುರ ಕಡೆಗೆ ಹೋಗುತ್ತಿದ್ದ ‘ಗೋರಖ್‌ಧಾಮ್ ಎಕ್ಸ್‌ಪ್ರೆಸ್’ ಖಲೀಲಾಬಾದ್ ನಿಲ್ದಾಣದ ಸಮೀಪದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 25 ಜನರು ಸಾವನ್ನಪ್ಪಿದ್ದರು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿರಿ: ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

2015 ಮಾರ್ಚ್ 20ರಂದು ಡೆಹ್ರಾಡೂನ್‌ನಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದ ಜನತಾ ಎಕ್ಸ್‌ಪ್ರೆಸ್‌ ಅಪಘಾತಕ್ಕೆ ತುತ್ತಾಗಿತ್ತು. ಉತ್ತರ ಪ್ರದೇಶದ ರಾಯ್ ಬರೇಲಿಯ ಬಚ್ರವಾನ್ ರೈಲು ನಿಲ್ದಾಣದ ಬಳಿ ರೈಲಿನ ಇಂಜಿನ್ ಮತ್ತು ಎರಡು ಪಕ್ಕದ ಕೋಚ್‌ಗಳು ಹಳಿತಪ್ಪಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸುಮಾರು 150 ಜನರು ಗಾಯಗೊಂಡಿದ್ದರು.

2016 ನವೆಂಬರ್ 20ರಂದು ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್ ಅಪಘಾತಕ್ಕೆ ತುತ್ತಾಗಿತ್ತು. ಈ ರೈಲು ಕಾನ್ಪುರದ ಪುಖ್ರಾಯನ್ ಬಳಿ ಹಳಿತಪ್ಪಿ ಕನಿಷ್ಠ 150 ಪ್ರಯಾಣಿಕರು ಸಾವನ್ನಪ್ಪಿದ್ದರು. 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಹರಿದ್ವಾರ ಮತ್ತು ಪುರಿ ನಡುವೆ ಚಲಿಸುವ ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್ 2017ರ ಆಗಸ್ಟ್ 19ರಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಖತೌಲಿ ಬಳಿ ಅಪಘಾತಕ್ಕೀಡಾಯಿತು. ರೈಲಿನ 14 ಬೋಗಿಗಳು ಹಳಿತಪ್ಪಿ 21 ಪ್ರಯಾಣಿಕರು ಮೃತಪಟ್ಟರೆ, 97 ಮಂದಿ ಗಾಯಗೊಂಡಿದ್ದರು.

ದೆಹಲಿಗೆ ಹೋಗುವ ಕೈಫಿಯತ್ ಎಕ್ಸ್‌ಪ್ರೆಸ್‌ನ ಒಂಬತ್ತು ರೈಲು ಬೋಗಿಗಳು 2017ರ ಆಗಸ್ಟ್ 23ರಂದು ಉತ್ತರ ಪ್ರದೇಶದ ಔರೈಯಾ ಬಳಿ ಹಳಿತಪ್ಪಿ ಕನಿಷ್ಠ 70 ಮಂದಿ ಗಾಯಗೊಂಡಿದ್ದರು.

ಜನವರಿ 13, 2022ರಂದು ಪಶ್ಚಿಮ ಬಂಗಾಳದ ಅಲಿಪುರ್ದೂರ್‌ನಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್‌ನ ಕನಿಷ್ಠ 12 ಬೋಗಿಗಳು ಹಳಿತಪ್ಪಿ 9 ಮಂದಿ ಸಾವನ್ನಪ್ಪಿದ್ದರು. 36 ಮಂದಿ ಗಾಯಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...