Homeಚಳವಳಿನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

ನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ಶಿಲ್ಪಿ ಎಂದು ನೆನಪಿಸಿಕೊಳ್ಳಲಾಗುತ್ತದೆ. ಆದರೆ, ಸಂವಿಧಾನ ಸಭೆಯಲ್ಲಿದ್ದ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಐವರ ಕಿರುಪರಿಚಯವನ್ನು ಈ ಮೊದಲ ಭಾಗದಲ್ಲಿ ನೀಡಲಾಗಿದೆ. 

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

1. ಅಮ್ಮು ಸ್ವಾಮಿನಾಥನ್

ಅಮ್ಮು ಸ್ವಾಮಿನಾಥನ್ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಆನಕ್ಕರ ಎಂಬಲ್ಲಿ ಮೇಲ್ಜಾತಿಯ ಹಿಂದೂ ಕುಟುಂಬವೊಂದರಲ್ಲಿ ಜನಿಸಿದರು. ಅವರು 1917ರಲ್ಲಿ ಅನ್ನಿ ಬೆಸೆಂಟ್, ಮಾರ್ಗರೆಟ್ ಕಸಿನ್ಸ್, ಮಾಲತಿ ಪಟವರ್ಧನ್, ದಾದಾಭೋಯ್ ಮತ್ತು ಅಂಬುಜಮ್ಮಾಳ್ ಅವರ ಜೊತೆ ಸೇರಿ ವುಮನ್ಸ್ ಇಂಡಿಯಾ ಅಸೋಸಿಯೇಷನ್ ಎಂಬ ಸಂಘಟನೆಯನ್ನು ಕಟ್ಟಿದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಡಾ. ಬಿ.ಆರ್. ಅಂಬೇಡ್ಕರ್ ಅವರು 24 ನವೆಂಬರ್ 1949ರಲ್ಲಿ ಕರಡು ಸಂವಿಧಾನವನ್ನು ಅಂಗೀಕರಿಸುವ ಗೊತ್ತುವಳಿಯನ್ನು ಮಂಡಿಸಿದಾಗ ಆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅಮ್ಮು ಸ್ವಾಮಿನಾಥನ್ ಅವರು, “ಭಾರತವು ತನ್ನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕೊಟ್ಟಿಲ್ಲ ಎಂದು ಹೊರಗಿನವರು ಹೇಳುತ್ತಿದ್ದರು. ಆದರೆ, ಭಾರತೀಯ ಜನರು ತಮ್ಮ ಸ್ವಂತ ಸಂವಿಧಾನವನ್ನು ರೂಪಿಸಿದಾಗ ಮಹಿಳೆಯರಿಗೆ ದೇಶದ ಯಾವುದೇ ನಾಗರಿಕನಿಗೆ ಇರುವಷ್ಟೇ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ನಾವೀಗ ಹೇಳಬಹುದು” ಎಂದು ಹೇಳಿದ್ದರು.

ಅವರು 1952ರಲ್ಲಿ ಲೋಕಸಭೆಗೆ ಮತ್ತು 1954ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಚಲನಚಿತ್ರ ಚಿತ್ರಗಳಲ್ಲಿ ಅತ್ಯಂತ ಆಸಕ್ತಿಯಿದ್ದ ಅವರು 1959ರಲ್ಲಿ  ಫೆಡರೇಷನ್ ಆಫ್ ಫಿಲ್ಮ್ ಸೊಸೈಟೀಸ್‌ನ ಉಪಾಧ್ಯಕ್ಷರಾದರು. ಆಗ ಸತ್ಯಜಿತ್ ರಾಯ್ ಅಧ್ಯಕ್ಷರಾಗಿದ್ದರು. ಅವರು ಸೆನ್ಸಾರ್ ಮಂಡಳಿ ಮತ್ತು ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ (1960-65) ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು.

2. ದಾಕ್ಷಾಯಣಿ ವೇಲಾಯುಧನ್

ದಾಕ್ಷಾಯಣಿ ವೇಲಾಯುಧನ್ ಅವರು 1912ರ ಜುಲೈ 4ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ಜನಿಸಿದರು. ಅತ್ಯಂತ ಅವಗಣಿತ ಪುಲಯ ಸಮುದಾಯದ ನಾಯಕಿಯಾಗಿದ್ದ ಅವರು ಈ ಸಮುದಾಯದ ಮೊದಲ ತಲೆಮಾರಿನ ವಿದ್ಯಾವಂತೆಯಾಗಿದ್ದು, ಈ ಸಮುದಾಯದಲ್ಲಿ ರವಕೆ ಧರಿಸಿದ ಮೊದಲ ಮಹಿಳೆ.

1945ರಲ್ಲಿ ದಾಕ್ಷಾಯಣಿ ಅವರನ್ನು ರಾಜ್ಯ ಸರಕಾರ ಕೊಚ್ಚಿ ವಿಧಾನ ಮಂಡಳಿಗೆ ನಾಮಕರಣ ಮಾಡಿತು. 1946ರಲ್ಲಿ ಅವರು ಸಂವಿಧಾನ ಸಭೆಗೆ ಆಯ್ಕೆಯಾದ ಮೊದಲ ಮತ್ತು ಏಕೈಕ ದಲಿತ ಮಹಿಳೆ ಎನಿಸಿದರು. ಸಂವಿಧಾನ ಸಭೆಯ ಚರ್ಚೆಗಳ ವೇಳೆ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಅಂಬೇಡ್ಕರ್ ಪರವಾಗಿ ನಿಂತಿದ್ದರು.

3. ಬೇಗಂ ಐಝಾಝ್ ರಸೂಲ್

ಮಾಲೇರ್ ಕೋಟ್ಲಾದ ರಾಜಮನೆತನದಲ್ಲಿ ಹುಟ್ಟಿದ ಅವರು ಯುವ ಜಮೀನ್ದಾರ ನವಾಬ್ ಐಝಾಝ್ ರಸೂಲ್ ಅವರನ್ನು ಮದುವೆಯಾದರು. ಅವರು ಸಂವಿಧಾನ ಸಭೆಯಲ್ಲಿದ್ದ ಏಕೈಕ ಮುಸ್ಲಿಂ ಮಹಿಳೆ. 1935ರ ಭಾರತ ಸರಕಾರ ಕಾಯಿದೆ ಜಾರಿಗೆ ಬಂದಾಗ ಬೇಗಂ ಹಾಗೂ ಅವರ ಗಂಡ ಮುಸ್ಲಿಂ ಲೀಗ್ ಸೇರಿ ಚುನಾವಣಾ ರಾಜಕೀಯಕ್ಕೆ ಧುಮುಕಿದರು. 1937ರ ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು.

ಚಿತ್ರಕೃಪೆ: ಎನ್‌ಡಿಟಿವಿ

1950ರಲ್ಲಿ ಭಾರತದಲ್ಲಿ ಮುಸ್ಲಿಂ ಲೀಗ್ ವಿಸರ್ಜನೆಗೊಂಡಾಗ ಬೇಗಂ ಐಝಾಝ್ ರಸೂಲ್ ಕಾಂಗ್ರೆಸ್ ಸೇರಿದರು. 1952ರಲ್ಲಿ ಅವರು ರಾಜ್ಯಸಭೆಗೆ ಆಯ್ಕೆಯಾದರು. ಅವರು 1969ರಿಂದ 1990ರ ತನಕವೂ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯೆಯಾಗಿದ್ದರು. 1971ರಿಂದ 1971ರ ತನಕ ಅವರು ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವೆಯಾಗಿದ್ದರು. 2000ದಲ್ಲಿ ಸಮಾಜಸೇವೆಗಾಗಿ ಅವರಿಗೆ ಪದ್ಮಭೂಷಣದ ಗೌರವ ಸಿಕ್ಕಿತು.

4. ದುರ್ಗಾಬಾಯಿ ದೇಶ್‌ಮುಖ್

ದುರ್ಗಾಬಾಯಿಯವರು 15 ಜುಲೈ 1909ರಲ್ಲಿ ರಾಜಮುಂದ್ರಿಯಲ್ಲಿ ಹುಟ್ಟಿದರು. 12ರ ಹರೆಯದಲ್ಲಿಯೇ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು. ಆಂಧ್ರ ಕೇಸರಿ ಟಿ. ಪ್ರಕಾಶಂ ಅವರ ಜೊತೆ 1930ರ ಮೇಯಲ್ಲಿ ಮದ್ರಾಸ್ ನಗರದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದರು. 1936ರಲ್ಲಿ ಅವರು ಆಂಧ್ರ ಮಹಿಳಾ ಸಭಾವನ್ನು ಸ್ಥಾಪಿದರು. ಅದು ಒಂದೇ ದಶಕದ ಅವಧಿಯಲ್ಲಿ ಮದ್ರಾಸಿನಲ್ಲಿ  ಮಹಾನ್ ಶೈಕ್ಷಣಿಕ ಮತ್ತು ಸಮಾಜಸೇವಾ ಸಂಸ್ಥೆ ಎನಿಸಿಕೊಂಡಿತು.

ಚಿತ್ರಕೃಪೆ: ವಿಮೆನ್ಸ್‌ ವೆಬ್‌

ಅವರು ಕೇಂದ್ರೀಯ ಸಮಾಜ ಕಲ್ಯಾಣ ಮಂಡಳಿ, ರಾಷ್ಟ್ರೀಯ ಮಹಿಳಾ ಶಿಕ್ಷಣ ಮಂಡಳಿ, ಹೆಣ್ಣು ಮಕ್ಕಳು ಮತ್ತು ಮಹಿಳಾ ಶಿಕ್ಷಣ ರಾಷ್ಟ್ರೀಯ ಸಮಿತಿ ಮುಂತಾದ ಸಂಸ್ಥೆಗಳ ಅಧ್ಯಕ್ಷೆಯಾಗಿದ್ದರು. ಅವರು ಸಂಸದೆಯೂ, ಯೋಜನಾ ಆಯೋಗದ ಸದಸ್ಯೆಯೂ ಆಗಿದ್ದರು.

ಅವರು ದಿಲ್ಲಿಯ ಆಂಧ್ರ ಎಜುಕೇಶನಲ್ ಸೊಸೈಟಿಯೊಂದಿಗೆ ಸಂಬಂಧ ಹೊಂದಿದ್ದರು. ಭಾರತದಲ್ಲಿ ಸಾಕ್ಷರತೆಗೆ ಅವರ ಅಮೋಘ ಕೊಡುಗೆಗಾಗಿ 1971ರಲ್ಲಿ ಅವರಿಗೆ ನಾಲ್ಕನೇ ನೆಹರೂ ಸಾಹಿತ್ಯ ಪ್ರಶಸ್ತಿ ನೀಡಲಾಯಿತು. 1975ರಲ್ಲಿ ಅವರಿಗೆ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.

5. ಹಂಸಾ ಜೀವರಾಜ್ ಮೆಹ್ತಾ

ಬರೋಡದ ದಿವಾನ ಮನುಭಾಯ್ ನಂದಶಂಕರ ಮೆಹ್ತಾ ಅವರ ಮಗಳಾಗಿ ಜೂನ್ 3, 1879ರಲ್ಲಿ ಹುಟ್ಟಿದ ಹಂಸಾ ಅವರು ಇಂಗ್ಲೆಂಡ್‌ನಲ್ಲಿ ಪತ್ರಿಕೋದ್ಯಮ ಮತ್ತು ಸಮಾಜಶಾಸ್ತ್ರ ಕಲಿತಿದ್ದರು. ಸಮಾಜ ಸುಧಾರಕಿ, ಕಾರ್ಯಕರ್ತೆ, ಶಿಕ್ಷಣ ತಜ್ಞೆ ಹಾಗೂ ಲೇಖಕಿಯಾಗಿಯೂ ಹೆಸರು ಪಡೆದಿದ್ದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಅವರು ಗುಜರಾತಿಯಲ್ಲಿ ಮಕ್ಕಳಿಗಾಗಿ ಹಲವಾರು ಪುಸ್ತಕಗಳನ್ನು ಬರೆದಿದ್ದು, ‘ಗಲಿವರ್‌ನ ಯಾತ್ರೆಗಳು’ ಸೇರಿದಂತೆ ಹಲವು ಇಂಗ್ಲಿಷ್ ಕತೆಗಳನ್ನು ಅನುವಾದಿಸಿದ್ದಾರೆ. ಅವರು 1926ರಲ್ಲಿ ಬಾಂಬೆ ಸ್ಕೂಲ್ ಕಮಿಟಿಗೆ ಆಯ್ಕೆಯಾದರು. 1945-46ರಲ್ಲಿ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್‌ನ ಅಧ್ಯಕ್ಷೆಯಾದರು. ಹೈದರಾಬಾದ್‌ನಲ್ಲಿ ನಡೆದ ಅದರ ಸಮಾವೇಶದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿ ಮಹಿಳಾ ಹಕ್ಕುಗಳ ಕುರಿತು ಕಾರ್ಯಕ್ರಮಪಟ್ಟಿಯನ್ನು ಮಂಡಿಸಿದ್ದರು.

ಅವರು 1945ರಿಂದ 1960ರ ತನಕ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ, ಅಖಿಲ ಭಾರತ ಮಾಧ್ಯಮಿಕ ಶಿಕ್ಷಣ ಮಂಡಳಿಯ ಸದಸ್ಯೆ, ಭಾರತೀಯ ಅಂತರವಿಶ್ವವಿದ್ಯಾಲಯ ಮಂಡಳಿಯ ಅಧ್ಯಕ್ಷೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದ ಉಪಕುಲಪತಿ ಇತ್ಯಾದಿಯಾಗಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...