Homeಚಳವಳಿನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

ನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ಶಿಲ್ಪಿ ಎಂದು ನೆನಪಿಸಿಕೊಳ್ಳಲಾಗುತ್ತದೆ. ಆದರೆ, ಸಂವಿಧಾನ ಸಭೆಯಲ್ಲಿದ್ದ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಐವರ ಕಿರುಪರಿಚಯವನ್ನು ಈ ಮೊದಲ ಭಾಗದಲ್ಲಿ ನೀಡಲಾಗಿದೆ. 

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

1. ಅಮ್ಮು ಸ್ವಾಮಿನಾಥನ್

ಅಮ್ಮು ಸ್ವಾಮಿನಾಥನ್ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಆನಕ್ಕರ ಎಂಬಲ್ಲಿ ಮೇಲ್ಜಾತಿಯ ಹಿಂದೂ ಕುಟುಂಬವೊಂದರಲ್ಲಿ ಜನಿಸಿದರು. ಅವರು 1917ರಲ್ಲಿ ಅನ್ನಿ ಬೆಸೆಂಟ್, ಮಾರ್ಗರೆಟ್ ಕಸಿನ್ಸ್, ಮಾಲತಿ ಪಟವರ್ಧನ್, ದಾದಾಭೋಯ್ ಮತ್ತು ಅಂಬುಜಮ್ಮಾಳ್ ಅವರ ಜೊತೆ ಸೇರಿ ವುಮನ್ಸ್ ಇಂಡಿಯಾ ಅಸೋಸಿಯೇಷನ್ ಎಂಬ ಸಂಘಟನೆಯನ್ನು ಕಟ್ಟಿದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಡಾ. ಬಿ.ಆರ್. ಅಂಬೇಡ್ಕರ್ ಅವರು 24 ನವೆಂಬರ್ 1949ರಲ್ಲಿ ಕರಡು ಸಂವಿಧಾನವನ್ನು ಅಂಗೀಕರಿಸುವ ಗೊತ್ತುವಳಿಯನ್ನು ಮಂಡಿಸಿದಾಗ ಆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅಮ್ಮು ಸ್ವಾಮಿನಾಥನ್ ಅವರು, “ಭಾರತವು ತನ್ನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕೊಟ್ಟಿಲ್ಲ ಎಂದು ಹೊರಗಿನವರು ಹೇಳುತ್ತಿದ್ದರು. ಆದರೆ, ಭಾರತೀಯ ಜನರು ತಮ್ಮ ಸ್ವಂತ ಸಂವಿಧಾನವನ್ನು ರೂಪಿಸಿದಾಗ ಮಹಿಳೆಯರಿಗೆ ದೇಶದ ಯಾವುದೇ ನಾಗರಿಕನಿಗೆ ಇರುವಷ್ಟೇ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ನಾವೀಗ ಹೇಳಬಹುದು” ಎಂದು ಹೇಳಿದ್ದರು.

ಅವರು 1952ರಲ್ಲಿ ಲೋಕಸಭೆಗೆ ಮತ್ತು 1954ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಚಲನಚಿತ್ರ ಚಿತ್ರಗಳಲ್ಲಿ ಅತ್ಯಂತ ಆಸಕ್ತಿಯಿದ್ದ ಅವರು 1959ರಲ್ಲಿ  ಫೆಡರೇಷನ್ ಆಫ್ ಫಿಲ್ಮ್ ಸೊಸೈಟೀಸ್‌ನ ಉಪಾಧ್ಯಕ್ಷರಾದರು. ಆಗ ಸತ್ಯಜಿತ್ ರಾಯ್ ಅಧ್ಯಕ್ಷರಾಗಿದ್ದರು. ಅವರು ಸೆನ್ಸಾರ್ ಮಂಡಳಿ ಮತ್ತು ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ (1960-65) ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು.

2. ದಾಕ್ಷಾಯಣಿ ವೇಲಾಯುಧನ್

ದಾಕ್ಷಾಯಣಿ ವೇಲಾಯುಧನ್ ಅವರು 1912ರ ಜುಲೈ 4ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ಜನಿಸಿದರು. ಅತ್ಯಂತ ಅವಗಣಿತ ಪುಲಯ ಸಮುದಾಯದ ನಾಯಕಿಯಾಗಿದ್ದ ಅವರು ಈ ಸಮುದಾಯದ ಮೊದಲ ತಲೆಮಾರಿನ ವಿದ್ಯಾವಂತೆಯಾಗಿದ್ದು, ಈ ಸಮುದಾಯದಲ್ಲಿ ರವಕೆ ಧರಿಸಿದ ಮೊದಲ ಮಹಿಳೆ.

1945ರಲ್ಲಿ ದಾಕ್ಷಾಯಣಿ ಅವರನ್ನು ರಾಜ್ಯ ಸರಕಾರ ಕೊಚ್ಚಿ ವಿಧಾನ ಮಂಡಳಿಗೆ ನಾಮಕರಣ ಮಾಡಿತು. 1946ರಲ್ಲಿ ಅವರು ಸಂವಿಧಾನ ಸಭೆಗೆ ಆಯ್ಕೆಯಾದ ಮೊದಲ ಮತ್ತು ಏಕೈಕ ದಲಿತ ಮಹಿಳೆ ಎನಿಸಿದರು. ಸಂವಿಧಾನ ಸಭೆಯ ಚರ್ಚೆಗಳ ವೇಳೆ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಅಂಬೇಡ್ಕರ್ ಪರವಾಗಿ ನಿಂತಿದ್ದರು.

3. ಬೇಗಂ ಐಝಾಝ್ ರಸೂಲ್

ಮಾಲೇರ್ ಕೋಟ್ಲಾದ ರಾಜಮನೆತನದಲ್ಲಿ ಹುಟ್ಟಿದ ಅವರು ಯುವ ಜಮೀನ್ದಾರ ನವಾಬ್ ಐಝಾಝ್ ರಸೂಲ್ ಅವರನ್ನು ಮದುವೆಯಾದರು. ಅವರು ಸಂವಿಧಾನ ಸಭೆಯಲ್ಲಿದ್ದ ಏಕೈಕ ಮುಸ್ಲಿಂ ಮಹಿಳೆ. 1935ರ ಭಾರತ ಸರಕಾರ ಕಾಯಿದೆ ಜಾರಿಗೆ ಬಂದಾಗ ಬೇಗಂ ಹಾಗೂ ಅವರ ಗಂಡ ಮುಸ್ಲಿಂ ಲೀಗ್ ಸೇರಿ ಚುನಾವಣಾ ರಾಜಕೀಯಕ್ಕೆ ಧುಮುಕಿದರು. 1937ರ ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು.

ಚಿತ್ರಕೃಪೆ: ಎನ್‌ಡಿಟಿವಿ

1950ರಲ್ಲಿ ಭಾರತದಲ್ಲಿ ಮುಸ್ಲಿಂ ಲೀಗ್ ವಿಸರ್ಜನೆಗೊಂಡಾಗ ಬೇಗಂ ಐಝಾಝ್ ರಸೂಲ್ ಕಾಂಗ್ರೆಸ್ ಸೇರಿದರು. 1952ರಲ್ಲಿ ಅವರು ರಾಜ್ಯಸಭೆಗೆ ಆಯ್ಕೆಯಾದರು. ಅವರು 1969ರಿಂದ 1990ರ ತನಕವೂ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯೆಯಾಗಿದ್ದರು. 1971ರಿಂದ 1971ರ ತನಕ ಅವರು ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವೆಯಾಗಿದ್ದರು. 2000ದಲ್ಲಿ ಸಮಾಜಸೇವೆಗಾಗಿ ಅವರಿಗೆ ಪದ್ಮಭೂಷಣದ ಗೌರವ ಸಿಕ್ಕಿತು.

4. ದುರ್ಗಾಬಾಯಿ ದೇಶ್‌ಮುಖ್

ದುರ್ಗಾಬಾಯಿಯವರು 15 ಜುಲೈ 1909ರಲ್ಲಿ ರಾಜಮುಂದ್ರಿಯಲ್ಲಿ ಹುಟ್ಟಿದರು. 12ರ ಹರೆಯದಲ್ಲಿಯೇ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು. ಆಂಧ್ರ ಕೇಸರಿ ಟಿ. ಪ್ರಕಾಶಂ ಅವರ ಜೊತೆ 1930ರ ಮೇಯಲ್ಲಿ ಮದ್ರಾಸ್ ನಗರದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದರು. 1936ರಲ್ಲಿ ಅವರು ಆಂಧ್ರ ಮಹಿಳಾ ಸಭಾವನ್ನು ಸ್ಥಾಪಿದರು. ಅದು ಒಂದೇ ದಶಕದ ಅವಧಿಯಲ್ಲಿ ಮದ್ರಾಸಿನಲ್ಲಿ  ಮಹಾನ್ ಶೈಕ್ಷಣಿಕ ಮತ್ತು ಸಮಾಜಸೇವಾ ಸಂಸ್ಥೆ ಎನಿಸಿಕೊಂಡಿತು.

ಚಿತ್ರಕೃಪೆ: ವಿಮೆನ್ಸ್‌ ವೆಬ್‌

ಅವರು ಕೇಂದ್ರೀಯ ಸಮಾಜ ಕಲ್ಯಾಣ ಮಂಡಳಿ, ರಾಷ್ಟ್ರೀಯ ಮಹಿಳಾ ಶಿಕ್ಷಣ ಮಂಡಳಿ, ಹೆಣ್ಣು ಮಕ್ಕಳು ಮತ್ತು ಮಹಿಳಾ ಶಿಕ್ಷಣ ರಾಷ್ಟ್ರೀಯ ಸಮಿತಿ ಮುಂತಾದ ಸಂಸ್ಥೆಗಳ ಅಧ್ಯಕ್ಷೆಯಾಗಿದ್ದರು. ಅವರು ಸಂಸದೆಯೂ, ಯೋಜನಾ ಆಯೋಗದ ಸದಸ್ಯೆಯೂ ಆಗಿದ್ದರು.

ಅವರು ದಿಲ್ಲಿಯ ಆಂಧ್ರ ಎಜುಕೇಶನಲ್ ಸೊಸೈಟಿಯೊಂದಿಗೆ ಸಂಬಂಧ ಹೊಂದಿದ್ದರು. ಭಾರತದಲ್ಲಿ ಸಾಕ್ಷರತೆಗೆ ಅವರ ಅಮೋಘ ಕೊಡುಗೆಗಾಗಿ 1971ರಲ್ಲಿ ಅವರಿಗೆ ನಾಲ್ಕನೇ ನೆಹರೂ ಸಾಹಿತ್ಯ ಪ್ರಶಸ್ತಿ ನೀಡಲಾಯಿತು. 1975ರಲ್ಲಿ ಅವರಿಗೆ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.

5. ಹಂಸಾ ಜೀವರಾಜ್ ಮೆಹ್ತಾ

ಬರೋಡದ ದಿವಾನ ಮನುಭಾಯ್ ನಂದಶಂಕರ ಮೆಹ್ತಾ ಅವರ ಮಗಳಾಗಿ ಜೂನ್ 3, 1879ರಲ್ಲಿ ಹುಟ್ಟಿದ ಹಂಸಾ ಅವರು ಇಂಗ್ಲೆಂಡ್‌ನಲ್ಲಿ ಪತ್ರಿಕೋದ್ಯಮ ಮತ್ತು ಸಮಾಜಶಾಸ್ತ್ರ ಕಲಿತಿದ್ದರು. ಸಮಾಜ ಸುಧಾರಕಿ, ಕಾರ್ಯಕರ್ತೆ, ಶಿಕ್ಷಣ ತಜ್ಞೆ ಹಾಗೂ ಲೇಖಕಿಯಾಗಿಯೂ ಹೆಸರು ಪಡೆದಿದ್ದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಅವರು ಗುಜರಾತಿಯಲ್ಲಿ ಮಕ್ಕಳಿಗಾಗಿ ಹಲವಾರು ಪುಸ್ತಕಗಳನ್ನು ಬರೆದಿದ್ದು, ‘ಗಲಿವರ್‌ನ ಯಾತ್ರೆಗಳು’ ಸೇರಿದಂತೆ ಹಲವು ಇಂಗ್ಲಿಷ್ ಕತೆಗಳನ್ನು ಅನುವಾದಿಸಿದ್ದಾರೆ. ಅವರು 1926ರಲ್ಲಿ ಬಾಂಬೆ ಸ್ಕೂಲ್ ಕಮಿಟಿಗೆ ಆಯ್ಕೆಯಾದರು. 1945-46ರಲ್ಲಿ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್‌ನ ಅಧ್ಯಕ್ಷೆಯಾದರು. ಹೈದರಾಬಾದ್‌ನಲ್ಲಿ ನಡೆದ ಅದರ ಸಮಾವೇಶದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿ ಮಹಿಳಾ ಹಕ್ಕುಗಳ ಕುರಿತು ಕಾರ್ಯಕ್ರಮಪಟ್ಟಿಯನ್ನು ಮಂಡಿಸಿದ್ದರು.

ಅವರು 1945ರಿಂದ 1960ರ ತನಕ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ, ಅಖಿಲ ಭಾರತ ಮಾಧ್ಯಮಿಕ ಶಿಕ್ಷಣ ಮಂಡಳಿಯ ಸದಸ್ಯೆ, ಭಾರತೀಯ ಅಂತರವಿಶ್ವವಿದ್ಯಾಲಯ ಮಂಡಳಿಯ ಅಧ್ಯಕ್ಷೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದ ಉಪಕುಲಪತಿ ಇತ್ಯಾದಿಯಾಗಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...