Homeಚಳವಳಿನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

ನಾವು ಮರೆತಿರುವ ಮಹಿಳೆಯರಿವರು.. ಸಂವಿಧಾನ ರಚನಾ ಸಭೆಯಲ್ಲಿ ಮಹಿಳೆಯರ ಪಾತ್ರ. ಭಾಗ 1

- Advertisement -
- Advertisement -

ಭಾರತದ ಸಂವಿಧಾನವನ್ನು 1949ರ ನವಂಬರ್ 26ರಂದು ಚುನಾಯಿತ ಸಂವಿಧಾನ ಸಭೆಯು ಅಂಗೀಕರಿಸಿತು. ಅದು ಜನವರಿ 26, 1950ರಲ್ಲಿ ಜಾರಿಗೆ ಬಂತು. ಸಂವಿಧಾನ ಸಭೆಯಲ್ಲಿ ಒಟ್ಟು 389 ಸದಸ್ಯರಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ಶಿಲ್ಪಿ ಎಂದು ನೆನಪಿಸಿಕೊಳ್ಳಲಾಗುತ್ತದೆ. ಆದರೆ, ಸಂವಿಧಾನ ಸಭೆಯಲ್ಲಿದ್ದ 15 ಮಹಿಳೆಯರನ್ನು ನಾವು ಸಂಪೂರ್ಣ ಮರೆತುಬಿಟ್ಟಿದ್ದೇವೆ. ಅವರಲ್ಲಿ ಐವರ ಕಿರುಪರಿಚಯವನ್ನು ಈ ಮೊದಲ ಭಾಗದಲ್ಲಿ ನೀಡಲಾಗಿದೆ. 

ಕೃಪೆ: ಫೆಮಿನಿಸಂ ಇನ್‌ ಇಂಡಿಯಾ

ಅನುವಾದ: ನಿಖಿಲ್ ಕೋಲ್ಪೆ

1. ಅಮ್ಮು ಸ್ವಾಮಿನಾಥನ್

ಅಮ್ಮು ಸ್ವಾಮಿನಾಥನ್ ಅವರು ಕೇರಳದ ಪಾಲಕ್ಕಾಡ್ ಜಿಲ್ಲೆಯ ಆನಕ್ಕರ ಎಂಬಲ್ಲಿ ಮೇಲ್ಜಾತಿಯ ಹಿಂದೂ ಕುಟುಂಬವೊಂದರಲ್ಲಿ ಜನಿಸಿದರು. ಅವರು 1917ರಲ್ಲಿ ಅನ್ನಿ ಬೆಸೆಂಟ್, ಮಾರ್ಗರೆಟ್ ಕಸಿನ್ಸ್, ಮಾಲತಿ ಪಟವರ್ಧನ್, ದಾದಾಭೋಯ್ ಮತ್ತು ಅಂಬುಜಮ್ಮಾಳ್ ಅವರ ಜೊತೆ ಸೇರಿ ವುಮನ್ಸ್ ಇಂಡಿಯಾ ಅಸೋಸಿಯೇಷನ್ ಎಂಬ ಸಂಘಟನೆಯನ್ನು ಕಟ್ಟಿದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಡಾ. ಬಿ.ಆರ್. ಅಂಬೇಡ್ಕರ್ ಅವರು 24 ನವೆಂಬರ್ 1949ರಲ್ಲಿ ಕರಡು ಸಂವಿಧಾನವನ್ನು ಅಂಗೀಕರಿಸುವ ಗೊತ್ತುವಳಿಯನ್ನು ಮಂಡಿಸಿದಾಗ ಆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅಮ್ಮು ಸ್ವಾಮಿನಾಥನ್ ಅವರು, “ಭಾರತವು ತನ್ನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕೊಟ್ಟಿಲ್ಲ ಎಂದು ಹೊರಗಿನವರು ಹೇಳುತ್ತಿದ್ದರು. ಆದರೆ, ಭಾರತೀಯ ಜನರು ತಮ್ಮ ಸ್ವಂತ ಸಂವಿಧಾನವನ್ನು ರೂಪಿಸಿದಾಗ ಮಹಿಳೆಯರಿಗೆ ದೇಶದ ಯಾವುದೇ ನಾಗರಿಕನಿಗೆ ಇರುವಷ್ಟೇ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ನಾವೀಗ ಹೇಳಬಹುದು” ಎಂದು ಹೇಳಿದ್ದರು.

ಅವರು 1952ರಲ್ಲಿ ಲೋಕಸಭೆಗೆ ಮತ್ತು 1954ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಚಲನಚಿತ್ರ ಚಿತ್ರಗಳಲ್ಲಿ ಅತ್ಯಂತ ಆಸಕ್ತಿಯಿದ್ದ ಅವರು 1959ರಲ್ಲಿ  ಫೆಡರೇಷನ್ ಆಫ್ ಫಿಲ್ಮ್ ಸೊಸೈಟೀಸ್‌ನ ಉಪಾಧ್ಯಕ್ಷರಾದರು. ಆಗ ಸತ್ಯಜಿತ್ ರಾಯ್ ಅಧ್ಯಕ್ಷರಾಗಿದ್ದರು. ಅವರು ಸೆನ್ಸಾರ್ ಮಂಡಳಿ ಮತ್ತು ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ (1960-65) ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು.

2. ದಾಕ್ಷಾಯಣಿ ವೇಲಾಯುಧನ್

ದಾಕ್ಷಾಯಣಿ ವೇಲಾಯುಧನ್ ಅವರು 1912ರ ಜುಲೈ 4ರಂದು ಕೊಚ್ಚಿಯ ಬೋಲ್ಗಟ್ಟಿ ದ್ವೀಪದಲ್ಲಿ ಜನಿಸಿದರು. ಅತ್ಯಂತ ಅವಗಣಿತ ಪುಲಯ ಸಮುದಾಯದ ನಾಯಕಿಯಾಗಿದ್ದ ಅವರು ಈ ಸಮುದಾಯದ ಮೊದಲ ತಲೆಮಾರಿನ ವಿದ್ಯಾವಂತೆಯಾಗಿದ್ದು, ಈ ಸಮುದಾಯದಲ್ಲಿ ರವಕೆ ಧರಿಸಿದ ಮೊದಲ ಮಹಿಳೆ.

1945ರಲ್ಲಿ ದಾಕ್ಷಾಯಣಿ ಅವರನ್ನು ರಾಜ್ಯ ಸರಕಾರ ಕೊಚ್ಚಿ ವಿಧಾನ ಮಂಡಳಿಗೆ ನಾಮಕರಣ ಮಾಡಿತು. 1946ರಲ್ಲಿ ಅವರು ಸಂವಿಧಾನ ಸಭೆಗೆ ಆಯ್ಕೆಯಾದ ಮೊದಲ ಮತ್ತು ಏಕೈಕ ದಲಿತ ಮಹಿಳೆ ಎನಿಸಿದರು. ಸಂವಿಧಾನ ಸಭೆಯ ಚರ್ಚೆಗಳ ವೇಳೆ ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಅಂಬೇಡ್ಕರ್ ಪರವಾಗಿ ನಿಂತಿದ್ದರು.

3. ಬೇಗಂ ಐಝಾಝ್ ರಸೂಲ್

ಮಾಲೇರ್ ಕೋಟ್ಲಾದ ರಾಜಮನೆತನದಲ್ಲಿ ಹುಟ್ಟಿದ ಅವರು ಯುವ ಜಮೀನ್ದಾರ ನವಾಬ್ ಐಝಾಝ್ ರಸೂಲ್ ಅವರನ್ನು ಮದುವೆಯಾದರು. ಅವರು ಸಂವಿಧಾನ ಸಭೆಯಲ್ಲಿದ್ದ ಏಕೈಕ ಮುಸ್ಲಿಂ ಮಹಿಳೆ. 1935ರ ಭಾರತ ಸರಕಾರ ಕಾಯಿದೆ ಜಾರಿಗೆ ಬಂದಾಗ ಬೇಗಂ ಹಾಗೂ ಅವರ ಗಂಡ ಮುಸ್ಲಿಂ ಲೀಗ್ ಸೇರಿ ಚುನಾವಣಾ ರಾಜಕೀಯಕ್ಕೆ ಧುಮುಕಿದರು. 1937ರ ಚುನಾವಣೆಯಲ್ಲಿ ಅವರು ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು.

ಚಿತ್ರಕೃಪೆ: ಎನ್‌ಡಿಟಿವಿ

1950ರಲ್ಲಿ ಭಾರತದಲ್ಲಿ ಮುಸ್ಲಿಂ ಲೀಗ್ ವಿಸರ್ಜನೆಗೊಂಡಾಗ ಬೇಗಂ ಐಝಾಝ್ ರಸೂಲ್ ಕಾಂಗ್ರೆಸ್ ಸೇರಿದರು. 1952ರಲ್ಲಿ ಅವರು ರಾಜ್ಯಸಭೆಗೆ ಆಯ್ಕೆಯಾದರು. ಅವರು 1969ರಿಂದ 1990ರ ತನಕವೂ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯೆಯಾಗಿದ್ದರು. 1971ರಿಂದ 1971ರ ತನಕ ಅವರು ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವೆಯಾಗಿದ್ದರು. 2000ದಲ್ಲಿ ಸಮಾಜಸೇವೆಗಾಗಿ ಅವರಿಗೆ ಪದ್ಮಭೂಷಣದ ಗೌರವ ಸಿಕ್ಕಿತು.

4. ದುರ್ಗಾಬಾಯಿ ದೇಶ್‌ಮುಖ್

ದುರ್ಗಾಬಾಯಿಯವರು 15 ಜುಲೈ 1909ರಲ್ಲಿ ರಾಜಮುಂದ್ರಿಯಲ್ಲಿ ಹುಟ್ಟಿದರು. 12ರ ಹರೆಯದಲ್ಲಿಯೇ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು. ಆಂಧ್ರ ಕೇಸರಿ ಟಿ. ಪ್ರಕಾಶಂ ಅವರ ಜೊತೆ 1930ರ ಮೇಯಲ್ಲಿ ಮದ್ರಾಸ್ ನಗರದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದರು. 1936ರಲ್ಲಿ ಅವರು ಆಂಧ್ರ ಮಹಿಳಾ ಸಭಾವನ್ನು ಸ್ಥಾಪಿದರು. ಅದು ಒಂದೇ ದಶಕದ ಅವಧಿಯಲ್ಲಿ ಮದ್ರಾಸಿನಲ್ಲಿ  ಮಹಾನ್ ಶೈಕ್ಷಣಿಕ ಮತ್ತು ಸಮಾಜಸೇವಾ ಸಂಸ್ಥೆ ಎನಿಸಿಕೊಂಡಿತು.

ಚಿತ್ರಕೃಪೆ: ವಿಮೆನ್ಸ್‌ ವೆಬ್‌

ಅವರು ಕೇಂದ್ರೀಯ ಸಮಾಜ ಕಲ್ಯಾಣ ಮಂಡಳಿ, ರಾಷ್ಟ್ರೀಯ ಮಹಿಳಾ ಶಿಕ್ಷಣ ಮಂಡಳಿ, ಹೆಣ್ಣು ಮಕ್ಕಳು ಮತ್ತು ಮಹಿಳಾ ಶಿಕ್ಷಣ ರಾಷ್ಟ್ರೀಯ ಸಮಿತಿ ಮುಂತಾದ ಸಂಸ್ಥೆಗಳ ಅಧ್ಯಕ್ಷೆಯಾಗಿದ್ದರು. ಅವರು ಸಂಸದೆಯೂ, ಯೋಜನಾ ಆಯೋಗದ ಸದಸ್ಯೆಯೂ ಆಗಿದ್ದರು.

ಅವರು ದಿಲ್ಲಿಯ ಆಂಧ್ರ ಎಜುಕೇಶನಲ್ ಸೊಸೈಟಿಯೊಂದಿಗೆ ಸಂಬಂಧ ಹೊಂದಿದ್ದರು. ಭಾರತದಲ್ಲಿ ಸಾಕ್ಷರತೆಗೆ ಅವರ ಅಮೋಘ ಕೊಡುಗೆಗಾಗಿ 1971ರಲ್ಲಿ ಅವರಿಗೆ ನಾಲ್ಕನೇ ನೆಹರೂ ಸಾಹಿತ್ಯ ಪ್ರಶಸ್ತಿ ನೀಡಲಾಯಿತು. 1975ರಲ್ಲಿ ಅವರಿಗೆ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.

5. ಹಂಸಾ ಜೀವರಾಜ್ ಮೆಹ್ತಾ

ಬರೋಡದ ದಿವಾನ ಮನುಭಾಯ್ ನಂದಶಂಕರ ಮೆಹ್ತಾ ಅವರ ಮಗಳಾಗಿ ಜೂನ್ 3, 1879ರಲ್ಲಿ ಹುಟ್ಟಿದ ಹಂಸಾ ಅವರು ಇಂಗ್ಲೆಂಡ್‌ನಲ್ಲಿ ಪತ್ರಿಕೋದ್ಯಮ ಮತ್ತು ಸಮಾಜಶಾಸ್ತ್ರ ಕಲಿತಿದ್ದರು. ಸಮಾಜ ಸುಧಾರಕಿ, ಕಾರ್ಯಕರ್ತೆ, ಶಿಕ್ಷಣ ತಜ್ಞೆ ಹಾಗೂ ಲೇಖಕಿಯಾಗಿಯೂ ಹೆಸರು ಪಡೆದಿದ್ದರು.

ಚಿತ್ರಕೃಪೆ: ದಿಇಂಡಿಯನ್‌ ಎಕ್ಸ್‌ಪ್ರೆಸ್‌

ಅವರು ಗುಜರಾತಿಯಲ್ಲಿ ಮಕ್ಕಳಿಗಾಗಿ ಹಲವಾರು ಪುಸ್ತಕಗಳನ್ನು ಬರೆದಿದ್ದು, ‘ಗಲಿವರ್‌ನ ಯಾತ್ರೆಗಳು’ ಸೇರಿದಂತೆ ಹಲವು ಇಂಗ್ಲಿಷ್ ಕತೆಗಳನ್ನು ಅನುವಾದಿಸಿದ್ದಾರೆ. ಅವರು 1926ರಲ್ಲಿ ಬಾಂಬೆ ಸ್ಕೂಲ್ ಕಮಿಟಿಗೆ ಆಯ್ಕೆಯಾದರು. 1945-46ರಲ್ಲಿ ಆಲ್ ಇಂಡಿಯಾ ವುಮನ್ಸ್ ಕಾನ್ಫರೆನ್ಸ್‌ನ ಅಧ್ಯಕ್ಷೆಯಾದರು. ಹೈದರಾಬಾದ್‌ನಲ್ಲಿ ನಡೆದ ಅದರ ಸಮಾವೇಶದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿ ಮಹಿಳಾ ಹಕ್ಕುಗಳ ಕುರಿತು ಕಾರ್ಯಕ್ರಮಪಟ್ಟಿಯನ್ನು ಮಂಡಿಸಿದ್ದರು.

ಅವರು 1945ರಿಂದ 1960ರ ತನಕ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಉಪಕುಲಪತಿ, ಅಖಿಲ ಭಾರತ ಮಾಧ್ಯಮಿಕ ಶಿಕ್ಷಣ ಮಂಡಳಿಯ ಸದಸ್ಯೆ, ಭಾರತೀಯ ಅಂತರವಿಶ್ವವಿದ್ಯಾಲಯ ಮಂಡಳಿಯ ಅಧ್ಯಕ್ಷೆ ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದ ಉಪಕುಲಪತಿ ಇತ್ಯಾದಿಯಾಗಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ಸಂವಿಧಾನ ರಚನಾ ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಸಾಧಕಿಯರಿವರು… : ಭಾಗ -2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...