Homeಮುಖಪುಟಕರ್ನಾಟಕ ಚುನಾವಣೆ: ಬಿಜೆಪಿ ಇದುವರೆಗೂ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳಿವು

ಕರ್ನಾಟಕ ಚುನಾವಣೆ: ಬಿಜೆಪಿ ಇದುವರೆಗೂ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳಿವು

- Advertisement -
- Advertisement -

ಬಿಜೆಪಿ ಪಕ್ಷವು ಪ್ರಪಂಚದ ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಂಡಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆದರೂ ದಕ್ಷಿಣದ ರಾಜ್ಯಗಳಲ್ಲಿ ಅದು ಪೂರ್ಣ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಗೋವಾ ಮತ್ತು ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಅಧಿಕಾರ ನಡೆಸಿದರೂ ಕೂಡ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದು ಅಧಿಕಾರದ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ದಕ್ಷಿಣದ ಜನ ಅಷ್ಟು ಸುಲಭಕ್ಕೆ ಬಿಜೆಪಿಯ ರಾಷ್ಟ್ರೀಯತೆ ಮತ್ತು ಹಿಂದುತ್ವ ಸಿದ್ದಾಂತಗಳನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ.

ಇನ್ನೂ ಕರ್ನಾಟಕದಲ್ಲಿ ಬಿಜೆಪಿ 1983ರಲ್ಲಿ 18 ಸೀಟು ಗೆದ್ದು ಜನತಾಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅದು ಪದೇ ಪದೇ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ 1985ರಲ್ಲಿ ಸರ್ಕಾರ ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಿ ಸ್ವತಂತ್ರವಾಗಿ ಜನತಾಪಕ್ಷ ಅಧಿಕಾರ ಹಿಡಿದಿತ್ತು. ಆ ನಂತರ 2004ರಲ್ಲಿ 79 ಸ್ಥಾನ ಗೆದ್ದರೂ ಪ್ರತಿಪಕ್ಷದಲ್ಲಿ ಕೂರಬೇಕಾಗಿತ್ತು. 2006ರಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಅಧಿಕಾರದಲ್ಲಿತ್ತು. ಆದರೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರಿಸದೇ ಸರ್ಕಾರ ವಿಸರ್ಜಿಸಿದರು. ಇದರಿಂದ ಯಡಿಯೂರಪ್ಪನವರ ಮೇಲಿನ ಅನುಕಂಪದಿಂದ 2008ರಲ್ಲಿ ಬಿಜೆಪಿ 110 ಸ್ಥಾನ ಗೆದ್ದಿತ್ತು. ಆದರೂ ಬಹುಮತಕ್ಕೆ 03 ಸೀಟುಗಳ ಕೊರತೆಯಿತ್ತು. ಆಗ ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು.

ಇನ್ನು 2013ರಲ್ಲಿ ಬಿಜೆಪಿ 40 ಸ್ಥಾನಗಳಿಗೆ ಕುಸಿದಿತ್ತು. 2018ರಲ್ಲಿ 104 ಸ್ಥಾನ ಗೆದ್ದರೂ ಸರಳ ಬಹುಮತ ಸಿಗದೇ ವಿರೋಧ ಪಕ್ಷವಾಗಿತ್ತು. ಆದರೆ 2019ರಲ್ಲಿ ಮತ್ತೆ ಆಪರೇ‍ಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂತು. ಆದರೆ ಇತ್ತೀಚಿನ ಕರ್ನಾಟಕ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದೆ. ಕೇವಲ 66 ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಇಷ್ಟೆಲ್ಲ ಆದರೂ ಬಿಜೆಪಿ ಕರ್ನಾಟಕ ಸುಮಾರು 43 ಕ್ಷೇತ್ರಗಳಲ್ಲಿ ಒಮ್ಮೆಯೂ ಗೆದ್ದು ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ 41 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಅಂತಹ ಕ್ಷೇತ್ರಗಳ ಪಟ್ಟಿ ಇಲ್ಲಿದೆ.

ಬಿಜೆಪಿ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳು

ಮಂಡ್ಯ
ಮದ್ದೂರು
ಮೇಲುಕೋಟೆ
ಶ್ರೀರಂಗಪಟ್ಟಣ
ನಾಗಮಂಗಲ
ಮಳವಳ್ಳಿ
ಕುಣಿಗಲ್
ಗುಬ್ಬಿ
ಮಧುಗಿರಿ
ಕೊರಟಗೆರೆ
ಪಾವಗಡ
ಚಿಂತಾಮಣಿ
ಶಿಡ್ಲಘಟ್ಟ
ಬಾಗೇಪಲ್ಲಿ
ಗೌರಿಬಿದನೂರು
ಮುಳಬಾಗಿಲು
ಶ್ರೀನಿವಾಸಪುರ
ಕೋಲಾರ
ದೇವನಹಳ್ಳಿ
ಹೆಚ್.ಡಿ ಕೋಟೆ
ಹನೂರು
ವರುಣ
ಚಾಮುಂಡೇಶ್ವರಿ
ಹೊಳೆನರಸೀಪುರ
ಶ್ರವಣಬೆಳಗೊಳ
ಅಫ್ಜಲಪುರ
ಗುರುಮಠಕಲ್
ಹಳಿಯಾಳ
ದಾವಣಗೆರೆ ದಕ್ಷಿಣ
ಶಹಾಪುರ
ಮಾನ್ವಿ
ಸಿಂಧನೂರು
ಯಮಕನಮರಡಿ
ಸಂಡೂರು
ಭದ್ರಾವತಿ
ಬ್ಯಾಟರಾಯಪುರ
ಪುಲಿಕೇಶಿನಗರ
ವಿಜಯನಗರ
ಸರ್ವಜ್ಞನಗರ
ಬಿಟಿಎಂ ಲೇಔಟ್
ಗಾಂಧಿನಗರ
ರಾಮನಗರ
ಕನಕಪುರ
ಇಷ್ಟು ಕ್ಷೇತ್ರಗಳಲ್ಲಿ ಒಮ್ಮೆಯೂ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇವುಗಳಲ್ಲಿ ಬಹುತೇಕ ಹಳೇ ಮೈಸೂರು ಪ್ರಾಂತ್ಯದ ಕ್ಷೇತ್ರಗಳಾಗಿವೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ ಹೊರತು ಬಿಜೆಪಿಗೆ ಮೂರನೇ ಸ್ಥಾನ. ಬಿಜೆಪಿಗೆ ಲಿಂಗಾಯತ ಸಮುದಾಯ ಕೆಲವೊಮ್ಮೆ ಹೆಚ್ಚಿನ ಬೆಂಬಲ ನೀಡಿದೆ. ಆದರೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯತರ ಪ್ರಾಬಲ್ಯವಿಲ್ಲ. ಅದು ಕೂಡ ಬಿಜೆಪಿ ಸೋಲಿಗೆ ಒಂದು ಕಾರಣವಾಗಿದೆ.

ಬಿಜೆಪಿ ಒಮ್ಮೆ ಮಾತ್ರ ಗೆಲುವು ಕಂಡ ಕ್ಷೇತ್ರಗಳಿವು

ಕೆ.ಆರ್ ಪೇಟೆ (2019 ಉಪ)
ನರಸಿಂಹರಾಜ (1994)
ಚನ್ನಪಟ್ಟಣ (2011 ಉಪ)
ಮಾಗಡಿ (1994)
ಶಾಂತಿನಗರ (2004)
ಚಾಮರಾಜ ಪೇಟೆ (1994)
ಗೋವಿಂದರಾಜನಗರ (2018)
ಅರಕಲಗೂಡು (1999)
ಅರಸೀಕೆರೆ (2004)
ಗದಗ (2008)
ಮುದ್ದೇಬಿಹಾಳ (2018)
ಬಬಲೇಶ್ವರ (1999)
ನಾಗಠಾಣ (2008)
ಇಂಡಿ (2008)
ಯಾದಗಿರಿ (2018)
ಬೆಳಗಾವಿ ಉತ್ತರ (2018)
ಆಳಂದ (2018)
ಕಂಪ್ಲಿ (2008)
ಹಗರಿಬೊಮ್ಮನಹಳ್ಳಿ (2008)
ಮಂಗಳೂರು ನಗರ (1994)
ಶಿರಾ (2020 ಉಪಚುನಾವಣೆ)
ಮೊಳಕಾಲ್ಮೂರು (2018)
ಹಿರಿಯೂರು (2018)
ಹೊಸದುರ್ಗ (2018)
ಚಿಕ್ಕೋಡಿ (2004)
ಕುಡಚಿ (2018)
ಚಿಕ್ಕಬಳ್ಳಾಪುರ (2019 ಉಪ)
ನೆಲಮಂಗಲ (2008)
ಹೊಸಕೋಟೆ (2008)
ಚಾಮರಾಜನಗರ (1999)
ನಂಜನಗೂಡು (2018)
ಕೊಳ್ಳೇಗಾಲ (2009 ಉಪ)
ಟಿ.ನರಸೀಪುರ (1999)
ಗುಂಡ್ಲುಪೇಟೆ (2018)
ಬಂಗಾರಪೇಟೆ (2011 ಉಪ)
ಕೊಪ್ಪಳ (2011 ಉಪ)
ಮಸ್ಕಿ (2008)
ಪಿರಿಯಾಪಟ್ಟಣ (1999)
ಚಿತ್ತಾಪುರ (2008)
ಜೇವರ್ಗಿ (2008)
ಕಲಬುರಗಿ ಉತ್ತರ (2004)

ಈ 41 ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆಪರೇಷನ್ ಕಮಲ ಕಾರಣಕ್ಕಾಗಿ ನಡೆದ ಚುನಾವಣೆಗಳೇ ಹೆಚ್ಚಾಗಿವೆ. ಇನ್ನು 2008ರಲ್ಲಿ ಯಡಿಯೂರಪ್ಪನವರಿಗೆ ಸಿಎಂ ಸ್ಥಾನ ಕೊಡದೇ ಮೋಸ ಮಾಡಲಾಯಿತು ಎಂಬ ಅನುಕಂಪದಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬಂದಿತ್ತು.

ಇದನ್ನೂ ಓದಿ: ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...