Homeಮುಖಪುಟಕರ್ನಾಟಕ ಚುನಾವಣೆ: ಬಿಜೆಪಿ ಇದುವರೆಗೂ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳಿವು

ಕರ್ನಾಟಕ ಚುನಾವಣೆ: ಬಿಜೆಪಿ ಇದುವರೆಗೂ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳಿವು

- Advertisement -
- Advertisement -

ಬಿಜೆಪಿ ಪಕ್ಷವು ಪ್ರಪಂಚದ ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಂಡಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆದರೂ ದಕ್ಷಿಣದ ರಾಜ್ಯಗಳಲ್ಲಿ ಅದು ಪೂರ್ಣ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಗೋವಾ ಮತ್ತು ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಅಧಿಕಾರ ನಡೆಸಿದರೂ ಕೂಡ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದು ಅಧಿಕಾರದ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ದಕ್ಷಿಣದ ಜನ ಅಷ್ಟು ಸುಲಭಕ್ಕೆ ಬಿಜೆಪಿಯ ರಾಷ್ಟ್ರೀಯತೆ ಮತ್ತು ಹಿಂದುತ್ವ ಸಿದ್ದಾಂತಗಳನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ.

ಇನ್ನೂ ಕರ್ನಾಟಕದಲ್ಲಿ ಬಿಜೆಪಿ 1983ರಲ್ಲಿ 18 ಸೀಟು ಗೆದ್ದು ಜನತಾಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅದು ಪದೇ ಪದೇ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ 1985ರಲ್ಲಿ ಸರ್ಕಾರ ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಿ ಸ್ವತಂತ್ರವಾಗಿ ಜನತಾಪಕ್ಷ ಅಧಿಕಾರ ಹಿಡಿದಿತ್ತು. ಆ ನಂತರ 2004ರಲ್ಲಿ 79 ಸ್ಥಾನ ಗೆದ್ದರೂ ಪ್ರತಿಪಕ್ಷದಲ್ಲಿ ಕೂರಬೇಕಾಗಿತ್ತು. 2006ರಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಅಧಿಕಾರದಲ್ಲಿತ್ತು. ಆದರೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರಿಸದೇ ಸರ್ಕಾರ ವಿಸರ್ಜಿಸಿದರು. ಇದರಿಂದ ಯಡಿಯೂರಪ್ಪನವರ ಮೇಲಿನ ಅನುಕಂಪದಿಂದ 2008ರಲ್ಲಿ ಬಿಜೆಪಿ 110 ಸ್ಥಾನ ಗೆದ್ದಿತ್ತು. ಆದರೂ ಬಹುಮತಕ್ಕೆ 03 ಸೀಟುಗಳ ಕೊರತೆಯಿತ್ತು. ಆಗ ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು.

ಇನ್ನು 2013ರಲ್ಲಿ ಬಿಜೆಪಿ 40 ಸ್ಥಾನಗಳಿಗೆ ಕುಸಿದಿತ್ತು. 2018ರಲ್ಲಿ 104 ಸ್ಥಾನ ಗೆದ್ದರೂ ಸರಳ ಬಹುಮತ ಸಿಗದೇ ವಿರೋಧ ಪಕ್ಷವಾಗಿತ್ತು. ಆದರೆ 2019ರಲ್ಲಿ ಮತ್ತೆ ಆಪರೇ‍ಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂತು. ಆದರೆ ಇತ್ತೀಚಿನ ಕರ್ನಾಟಕ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದೆ. ಕೇವಲ 66 ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಇಷ್ಟೆಲ್ಲ ಆದರೂ ಬಿಜೆಪಿ ಕರ್ನಾಟಕ ಸುಮಾರು 43 ಕ್ಷೇತ್ರಗಳಲ್ಲಿ ಒಮ್ಮೆಯೂ ಗೆದ್ದು ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ 41 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಅಂತಹ ಕ್ಷೇತ್ರಗಳ ಪಟ್ಟಿ ಇಲ್ಲಿದೆ.

ಬಿಜೆಪಿ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳು

ಮಂಡ್ಯ
ಮದ್ದೂರು
ಮೇಲುಕೋಟೆ
ಶ್ರೀರಂಗಪಟ್ಟಣ
ನಾಗಮಂಗಲ
ಮಳವಳ್ಳಿ
ಕುಣಿಗಲ್
ಗುಬ್ಬಿ
ಮಧುಗಿರಿ
ಕೊರಟಗೆರೆ
ಪಾವಗಡ
ಚಿಂತಾಮಣಿ
ಶಿಡ್ಲಘಟ್ಟ
ಬಾಗೇಪಲ್ಲಿ
ಗೌರಿಬಿದನೂರು
ಮುಳಬಾಗಿಲು
ಶ್ರೀನಿವಾಸಪುರ
ಕೋಲಾರ
ದೇವನಹಳ್ಳಿ
ಹೆಚ್.ಡಿ ಕೋಟೆ
ಹನೂರು
ವರುಣ
ಚಾಮುಂಡೇಶ್ವರಿ
ಹೊಳೆನರಸೀಪುರ
ಶ್ರವಣಬೆಳಗೊಳ
ಅಫ್ಜಲಪುರ
ಗುರುಮಠಕಲ್
ಹಳಿಯಾಳ
ದಾವಣಗೆರೆ ದಕ್ಷಿಣ
ಶಹಾಪುರ
ಮಾನ್ವಿ
ಸಿಂಧನೂರು
ಯಮಕನಮರಡಿ
ಸಂಡೂರು
ಭದ್ರಾವತಿ
ಬ್ಯಾಟರಾಯಪುರ
ಪುಲಿಕೇಶಿನಗರ
ವಿಜಯನಗರ
ಸರ್ವಜ್ಞನಗರ
ಬಿಟಿಎಂ ಲೇಔಟ್
ಗಾಂಧಿನಗರ
ರಾಮನಗರ
ಕನಕಪುರ
ಇಷ್ಟು ಕ್ಷೇತ್ರಗಳಲ್ಲಿ ಒಮ್ಮೆಯೂ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇವುಗಳಲ್ಲಿ ಬಹುತೇಕ ಹಳೇ ಮೈಸೂರು ಪ್ರಾಂತ್ಯದ ಕ್ಷೇತ್ರಗಳಾಗಿವೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ ಹೊರತು ಬಿಜೆಪಿಗೆ ಮೂರನೇ ಸ್ಥಾನ. ಬಿಜೆಪಿಗೆ ಲಿಂಗಾಯತ ಸಮುದಾಯ ಕೆಲವೊಮ್ಮೆ ಹೆಚ್ಚಿನ ಬೆಂಬಲ ನೀಡಿದೆ. ಆದರೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯತರ ಪ್ರಾಬಲ್ಯವಿಲ್ಲ. ಅದು ಕೂಡ ಬಿಜೆಪಿ ಸೋಲಿಗೆ ಒಂದು ಕಾರಣವಾಗಿದೆ.

ಬಿಜೆಪಿ ಒಮ್ಮೆ ಮಾತ್ರ ಗೆಲುವು ಕಂಡ ಕ್ಷೇತ್ರಗಳಿವು

ಕೆ.ಆರ್ ಪೇಟೆ (2019 ಉಪ)
ನರಸಿಂಹರಾಜ (1994)
ಚನ್ನಪಟ್ಟಣ (2011 ಉಪ)
ಮಾಗಡಿ (1994)
ಶಾಂತಿನಗರ (2004)
ಚಾಮರಾಜ ಪೇಟೆ (1994)
ಗೋವಿಂದರಾಜನಗರ (2018)
ಅರಕಲಗೂಡು (1999)
ಅರಸೀಕೆರೆ (2004)
ಗದಗ (2008)
ಮುದ್ದೇಬಿಹಾಳ (2018)
ಬಬಲೇಶ್ವರ (1999)
ನಾಗಠಾಣ (2008)
ಇಂಡಿ (2008)
ಯಾದಗಿರಿ (2018)
ಬೆಳಗಾವಿ ಉತ್ತರ (2018)
ಆಳಂದ (2018)
ಕಂಪ್ಲಿ (2008)
ಹಗರಿಬೊಮ್ಮನಹಳ್ಳಿ (2008)
ಮಂಗಳೂರು ನಗರ (1994)
ಶಿರಾ (2020 ಉಪಚುನಾವಣೆ)
ಮೊಳಕಾಲ್ಮೂರು (2018)
ಹಿರಿಯೂರು (2018)
ಹೊಸದುರ್ಗ (2018)
ಚಿಕ್ಕೋಡಿ (2004)
ಕುಡಚಿ (2018)
ಚಿಕ್ಕಬಳ್ಳಾಪುರ (2019 ಉಪ)
ನೆಲಮಂಗಲ (2008)
ಹೊಸಕೋಟೆ (2008)
ಚಾಮರಾಜನಗರ (1999)
ನಂಜನಗೂಡು (2018)
ಕೊಳ್ಳೇಗಾಲ (2009 ಉಪ)
ಟಿ.ನರಸೀಪುರ (1999)
ಗುಂಡ್ಲುಪೇಟೆ (2018)
ಬಂಗಾರಪೇಟೆ (2011 ಉಪ)
ಕೊಪ್ಪಳ (2011 ಉಪ)
ಮಸ್ಕಿ (2008)
ಪಿರಿಯಾಪಟ್ಟಣ (1999)
ಚಿತ್ತಾಪುರ (2008)
ಜೇವರ್ಗಿ (2008)
ಕಲಬುರಗಿ ಉತ್ತರ (2004)

ಈ 41 ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆಪರೇಷನ್ ಕಮಲ ಕಾರಣಕ್ಕಾಗಿ ನಡೆದ ಚುನಾವಣೆಗಳೇ ಹೆಚ್ಚಾಗಿವೆ. ಇನ್ನು 2008ರಲ್ಲಿ ಯಡಿಯೂರಪ್ಪನವರಿಗೆ ಸಿಎಂ ಸ್ಥಾನ ಕೊಡದೇ ಮೋಸ ಮಾಡಲಾಯಿತು ಎಂಬ ಅನುಕಂಪದಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬಂದಿತ್ತು.

ಇದನ್ನೂ ಓದಿ: ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...