Homeಕರ್ನಾಟಕಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಹಲವು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದೆ ರೈತರು ಕಂಗಾಲಾಗಿದ್ದಾರೆ.

- Advertisement -
- Advertisement -

ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆನಾಶದಿಂದಾಗಿ ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು ನಗರದ ಹಲವೆಡೆ ಮನೆಗೋಡೆಗಳು ಕುರಿದು ಬಿದ್ದಿವೆ. ಕಾಡುಗೋಡಿ ಸಮೀಪದ ರೈಲ್ವೆ ಹಳಿ ಸಮೀಪದ ಅಂಗಡಿಯೊಂದು ಕುಸಿದಿದ್ದು, ಕಟ್ಟಡದಲ್ಲೇ ಮಲಗಿದ್ದ ವೃದ್ಧರೊಬ್ಬರನ್ನು ಮುಂಜಾಗ್ರತೆ ವಹಿಸಿ ರಕ್ಷಿಸಲಾಗಿದೆ. ಶಂಕರಮಠ ವಾರ್ಡ್‌ನ ಆಂಜನೇಯ ಗುಡ್ಡ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಾದರಾಯನಪುರದ ಹರಿಶ್ಚಂದ್ರ ದೇವಸ್ಥಾನ ಸಮೀಪ ಮಂಜುಗಡ್ಡೆ ತಯಾರಿಕಾ ಕಾರ್ಖಾನೆಯ ಗೋದಾಮಿನ ಗೋಡೆ ನೆಲಕ್ಕುರುಳಿದ್ದು, ಪಕ್ಕದಲ್ಲಿದ್ದ ಆಟೋಗಳು ಜಖಂಗೊಂಡಿವೆ.  ಹಲವೆಡೆ ಮರಗಳು ಮುರಿದುಬಿದ್ದಿರುವ ವರದಿಗಳಾಗಿವೆ. ಕ್ವೀನ್‌ ರಸ್ತೆ, ಮಹಾವೀರ ರಸ್ತೆಯಲ್ಲಿ ವಾರ್ತಾ ಇಲಾಖೆ ಕಚೇರಿ ಸಮೀಪ, ಥಣಿಸಂದ್ರ, ಕೆ.ಆರ್‌‌.ಪುರದಿಂದ ಟಿ.ಸಿ.ಪಾಳ್ಯಕ್ಕೆ ರಸ್ತೆ, ಬನಶಂಕರಿ 2ನೇ ಹಂತದಲ್ಲಿ ಮರಗಳು ಮುರಿದುಬಿದ್ದಿವೆ. ಬಹುತೇಕ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರಾ ಮಳೆಗೆ ರಸ್ತೆಗಳು ಕಾಣದಂತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ತತ್ತರ

ಮೈಸೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿವೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕಳೆದ ಅಕ್ಟೋಬರ್‌ 19ರಂದು ಬೆಟ್ಟದ ನಂದಿ ಮಾರ್ಗದಲ್ಲಿ ಮೊದಲ ಬಾರಿಗೆ ಕುಸಿತ ಉಂಟಾಗಿತ್ತು. ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಭಾರಿಗೆ ಬೆಟ್ಟ ಕುಸಿದಿದೆ. ರಸ್ತೆ ಕುಸಿತದಿಂದಾಗಿ ಕೆಲವೆಡೆ ಮರಗಳು ನೆಲಕ್ಕುರುಳಿವೆ.

ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿ ಮನೆ ಛಾವಣಿ ಕುಸಿದಿದೆ. ಅಶೋಕರಸ್ತೆಯಲ್ಲಿ ಮಳಿಗೆಯ ಗೋಡೆ ಕುಸಿದಿದೆ. ಅಶೋಕ ರಸ್ತೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಸಮೀಪದಲ್ಲೇ ಇದ್ದವರಿಗೆ ಗೋಡೆ ಅಲುಗಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ಮನೆಗೋಡೆ ಕುಸಿದು, ಬಡ ಕುಟುಂಬ ಕಂಗಾಲಾಗಿದೆ.

ಬೆಳೆನಾಶ, ರೈತ ಕಂಗಾಲು

ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ರಾಗಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ. 14,500 ಹೆಕ್ಟೇರ್‌ ಬೆಳೆ ಕೈತಪ್ಪಿದೆ ಎಂದು ತುಮಕೂರು ಜಿಲ್ಲಾ ವರದಿ ಹೇಳಿದೆ. ಚಿಕ್ಕ ಬಳ್ಳಾಪುರದಲ್ಲಿ 905.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ.

ಕೋಲಾರ ಜಿಲ್ಲೆಯೊಂದರಲ್ಲಿಯೇ ರಾಗಿ 36 ಸಾವಿರ ಹೆಕ್ಟೇರ್‌ ರಾಗಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ. 5.78 ಕೋಟಿ ಮೌಲ್ಯದ ತರಕಾರಿ, ಸುಮಾರು 1,370 ಹೆಕ್ಟೇರ್‌ಗಳಲ್ಲಿ ಕೊಳೆತು ಹೋಗುತ್ತಿದೆ. ರಾಗಿ, ಮುಸುಕಿನ ಜೋಳ, ನೆಲಗಡಲೆ, ತೊಗರಿ, ಭತ್ತ ಸೇರಿದಂತೆ 34,554 ಹೆಕ್ಟೇರ್‌ ಬೆಳೆ ರೈತರ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಚೆನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆಗಳಲ್ಲಿ 2,150 ಹೆಕ್ಟೇ‌ರ್‌ ಪ್ರದೇಶದ ಭತ್ತ ರೈತರ ಕೈ ಸೇರುವುದು ಅನುಮಾನ. ಶಿವಮೊಗ್ಗ ಜಿಲ್ಲೆಯಲ್ಲಿ ಕಟಾವಿಗೆ ಅಡ್ಡಿಉಂಟಾಗಿದೆ. ಜಿಲ್ಲೆಯಲ್ಲಿನ ಕೃಷಿ ಭೂಮಿಯಲ್ಲಿ 78,100 ಹೆಕ್ಟೇರ್‌‌ನಲ್ಲಿ ಭತ್ತ, 52,000 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕಟಾವು ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಹಾಸನ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಾಗಿ ಮತ್ತು ಮೆಕ್ಕೆಜೋಳ ಬೆಳೆದಿದ್ದ ರೈತರು ಪರಿತಪಿಸುತ್ತಿದ್ದಾರೆ. 675 ಹೆಕ್ಟೇರ್‌‌ ಮೆಕ್ಕೆಜೋಳ, 19,403 ಹೆಕ್ಟೇರ್‌‌ ರಾಗಿ ನೆಲಕಚ್ಚಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಪರಿಸ್ಥಿತಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಅಂದರಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಾಮರಾಜನಗರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ನ.19, 20ರಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೂರು ದಶಕಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದ ಎಂದು ವರದಿಗಳು ಹೇಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿರಿ: ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...