Homeಕರ್ನಾಟಕಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಹಲವು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದೆ ರೈತರು ಕಂಗಾಲಾಗಿದ್ದಾರೆ.

- Advertisement -
- Advertisement -

ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆನಾಶದಿಂದಾಗಿ ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು ನಗರದ ಹಲವೆಡೆ ಮನೆಗೋಡೆಗಳು ಕುರಿದು ಬಿದ್ದಿವೆ. ಕಾಡುಗೋಡಿ ಸಮೀಪದ ರೈಲ್ವೆ ಹಳಿ ಸಮೀಪದ ಅಂಗಡಿಯೊಂದು ಕುಸಿದಿದ್ದು, ಕಟ್ಟಡದಲ್ಲೇ ಮಲಗಿದ್ದ ವೃದ್ಧರೊಬ್ಬರನ್ನು ಮುಂಜಾಗ್ರತೆ ವಹಿಸಿ ರಕ್ಷಿಸಲಾಗಿದೆ. ಶಂಕರಮಠ ವಾರ್ಡ್‌ನ ಆಂಜನೇಯ ಗುಡ್ಡ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಾದರಾಯನಪುರದ ಹರಿಶ್ಚಂದ್ರ ದೇವಸ್ಥಾನ ಸಮೀಪ ಮಂಜುಗಡ್ಡೆ ತಯಾರಿಕಾ ಕಾರ್ಖಾನೆಯ ಗೋದಾಮಿನ ಗೋಡೆ ನೆಲಕ್ಕುರುಳಿದ್ದು, ಪಕ್ಕದಲ್ಲಿದ್ದ ಆಟೋಗಳು ಜಖಂಗೊಂಡಿವೆ.  ಹಲವೆಡೆ ಮರಗಳು ಮುರಿದುಬಿದ್ದಿರುವ ವರದಿಗಳಾಗಿವೆ. ಕ್ವೀನ್‌ ರಸ್ತೆ, ಮಹಾವೀರ ರಸ್ತೆಯಲ್ಲಿ ವಾರ್ತಾ ಇಲಾಖೆ ಕಚೇರಿ ಸಮೀಪ, ಥಣಿಸಂದ್ರ, ಕೆ.ಆರ್‌‌.ಪುರದಿಂದ ಟಿ.ಸಿ.ಪಾಳ್ಯಕ್ಕೆ ರಸ್ತೆ, ಬನಶಂಕರಿ 2ನೇ ಹಂತದಲ್ಲಿ ಮರಗಳು ಮುರಿದುಬಿದ್ದಿವೆ. ಬಹುತೇಕ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರಾ ಮಳೆಗೆ ರಸ್ತೆಗಳು ಕಾಣದಂತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ತತ್ತರ

ಮೈಸೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿವೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕಳೆದ ಅಕ್ಟೋಬರ್‌ 19ರಂದು ಬೆಟ್ಟದ ನಂದಿ ಮಾರ್ಗದಲ್ಲಿ ಮೊದಲ ಬಾರಿಗೆ ಕುಸಿತ ಉಂಟಾಗಿತ್ತು. ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಭಾರಿಗೆ ಬೆಟ್ಟ ಕುಸಿದಿದೆ. ರಸ್ತೆ ಕುಸಿತದಿಂದಾಗಿ ಕೆಲವೆಡೆ ಮರಗಳು ನೆಲಕ್ಕುರುಳಿವೆ.

ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿ ಮನೆ ಛಾವಣಿ ಕುಸಿದಿದೆ. ಅಶೋಕರಸ್ತೆಯಲ್ಲಿ ಮಳಿಗೆಯ ಗೋಡೆ ಕುಸಿದಿದೆ. ಅಶೋಕ ರಸ್ತೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಸಮೀಪದಲ್ಲೇ ಇದ್ದವರಿಗೆ ಗೋಡೆ ಅಲುಗಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ಮನೆಗೋಡೆ ಕುಸಿದು, ಬಡ ಕುಟುಂಬ ಕಂಗಾಲಾಗಿದೆ.

ಬೆಳೆನಾಶ, ರೈತ ಕಂಗಾಲು

ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ರಾಗಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ. 14,500 ಹೆಕ್ಟೇರ್‌ ಬೆಳೆ ಕೈತಪ್ಪಿದೆ ಎಂದು ತುಮಕೂರು ಜಿಲ್ಲಾ ವರದಿ ಹೇಳಿದೆ. ಚಿಕ್ಕ ಬಳ್ಳಾಪುರದಲ್ಲಿ 905.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ.

ಕೋಲಾರ ಜಿಲ್ಲೆಯೊಂದರಲ್ಲಿಯೇ ರಾಗಿ 36 ಸಾವಿರ ಹೆಕ್ಟೇರ್‌ ರಾಗಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ. 5.78 ಕೋಟಿ ಮೌಲ್ಯದ ತರಕಾರಿ, ಸುಮಾರು 1,370 ಹೆಕ್ಟೇರ್‌ಗಳಲ್ಲಿ ಕೊಳೆತು ಹೋಗುತ್ತಿದೆ. ರಾಗಿ, ಮುಸುಕಿನ ಜೋಳ, ನೆಲಗಡಲೆ, ತೊಗರಿ, ಭತ್ತ ಸೇರಿದಂತೆ 34,554 ಹೆಕ್ಟೇರ್‌ ಬೆಳೆ ರೈತರ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಚೆನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆಗಳಲ್ಲಿ 2,150 ಹೆಕ್ಟೇ‌ರ್‌ ಪ್ರದೇಶದ ಭತ್ತ ರೈತರ ಕೈ ಸೇರುವುದು ಅನುಮಾನ. ಶಿವಮೊಗ್ಗ ಜಿಲ್ಲೆಯಲ್ಲಿ ಕಟಾವಿಗೆ ಅಡ್ಡಿಉಂಟಾಗಿದೆ. ಜಿಲ್ಲೆಯಲ್ಲಿನ ಕೃಷಿ ಭೂಮಿಯಲ್ಲಿ 78,100 ಹೆಕ್ಟೇರ್‌‌ನಲ್ಲಿ ಭತ್ತ, 52,000 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕಟಾವು ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಹಾಸನ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಾಗಿ ಮತ್ತು ಮೆಕ್ಕೆಜೋಳ ಬೆಳೆದಿದ್ದ ರೈತರು ಪರಿತಪಿಸುತ್ತಿದ್ದಾರೆ. 675 ಹೆಕ್ಟೇರ್‌‌ ಮೆಕ್ಕೆಜೋಳ, 19,403 ಹೆಕ್ಟೇರ್‌‌ ರಾಗಿ ನೆಲಕಚ್ಚಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಪರಿಸ್ಥಿತಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಅಂದರಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಾಮರಾಜನಗರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ನ.19, 20ರಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೂರು ದಶಕಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದ ಎಂದು ವರದಿಗಳು ಹೇಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿರಿ: ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...