Homeಕರ್ನಾಟಕಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಹಲವು ಜಿಲ್ಲೆಗಳಲ್ಲಿ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದೆ ರೈತರು ಕಂಗಾಲಾಗಿದ್ದಾರೆ.

- Advertisement -
- Advertisement -

ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆನಾಶದಿಂದಾಗಿ ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು ನಗರದ ಹಲವೆಡೆ ಮನೆಗೋಡೆಗಳು ಕುರಿದು ಬಿದ್ದಿವೆ. ಕಾಡುಗೋಡಿ ಸಮೀಪದ ರೈಲ್ವೆ ಹಳಿ ಸಮೀಪದ ಅಂಗಡಿಯೊಂದು ಕುಸಿದಿದ್ದು, ಕಟ್ಟಡದಲ್ಲೇ ಮಲಗಿದ್ದ ವೃದ್ಧರೊಬ್ಬರನ್ನು ಮುಂಜಾಗ್ರತೆ ವಹಿಸಿ ರಕ್ಷಿಸಲಾಗಿದೆ. ಶಂಕರಮಠ ವಾರ್ಡ್‌ನ ಆಂಜನೇಯ ಗುಡ್ಡ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪಾದರಾಯನಪುರದ ಹರಿಶ್ಚಂದ್ರ ದೇವಸ್ಥಾನ ಸಮೀಪ ಮಂಜುಗಡ್ಡೆ ತಯಾರಿಕಾ ಕಾರ್ಖಾನೆಯ ಗೋದಾಮಿನ ಗೋಡೆ ನೆಲಕ್ಕುರುಳಿದ್ದು, ಪಕ್ಕದಲ್ಲಿದ್ದ ಆಟೋಗಳು ಜಖಂಗೊಂಡಿವೆ.  ಹಲವೆಡೆ ಮರಗಳು ಮುರಿದುಬಿದ್ದಿರುವ ವರದಿಗಳಾಗಿವೆ. ಕ್ವೀನ್‌ ರಸ್ತೆ, ಮಹಾವೀರ ರಸ್ತೆಯಲ್ಲಿ ವಾರ್ತಾ ಇಲಾಖೆ ಕಚೇರಿ ಸಮೀಪ, ಥಣಿಸಂದ್ರ, ಕೆ.ಆರ್‌‌.ಪುರದಿಂದ ಟಿ.ಸಿ.ಪಾಳ್ಯಕ್ಕೆ ರಸ್ತೆ, ಬನಶಂಕರಿ 2ನೇ ಹಂತದಲ್ಲಿ ಮರಗಳು ಮುರಿದುಬಿದ್ದಿವೆ. ಬಹುತೇಕ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರಾ ಮಳೆಗೆ ರಸ್ತೆಗಳು ಕಾಣದಂತಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ತತ್ತರ

ಮೈಸೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಡಗಳು ಸಂಭವಿಸಿವೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕಳೆದ ಅಕ್ಟೋಬರ್‌ 19ರಂದು ಬೆಟ್ಟದ ನಂದಿ ಮಾರ್ಗದಲ್ಲಿ ಮೊದಲ ಬಾರಿಗೆ ಕುಸಿತ ಉಂಟಾಗಿತ್ತು. ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಭಾರಿಗೆ ಬೆಟ್ಟ ಕುಸಿದಿದೆ. ರಸ್ತೆ ಕುಸಿತದಿಂದಾಗಿ ಕೆಲವೆಡೆ ಮರಗಳು ನೆಲಕ್ಕುರುಳಿವೆ.

ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿ ಮನೆ ಛಾವಣಿ ಕುಸಿದಿದೆ. ಅಶೋಕರಸ್ತೆಯಲ್ಲಿ ಮಳಿಗೆಯ ಗೋಡೆ ಕುಸಿದಿದೆ. ಅಶೋಕ ರಸ್ತೆಯಲ್ಲಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಸಮೀಪದಲ್ಲೇ ಇದ್ದವರಿಗೆ ಗೋಡೆ ಅಲುಗಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದರಿಂದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ಮನೆಗೋಡೆ ಕುಸಿದು, ಬಡ ಕುಟುಂಬ ಕಂಗಾಲಾಗಿದೆ.

ಬೆಳೆನಾಶ, ರೈತ ಕಂಗಾಲು

ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ರಾಗಿ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿವೆ. 14,500 ಹೆಕ್ಟೇರ್‌ ಬೆಳೆ ಕೈತಪ್ಪಿದೆ ಎಂದು ತುಮಕೂರು ಜಿಲ್ಲಾ ವರದಿ ಹೇಳಿದೆ. ಚಿಕ್ಕ ಬಳ್ಳಾಪುರದಲ್ಲಿ 905.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ.

ಕೋಲಾರ ಜಿಲ್ಲೆಯೊಂದರಲ್ಲಿಯೇ ರಾಗಿ 36 ಸಾವಿರ ಹೆಕ್ಟೇರ್‌ ರಾಗಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ. 5.78 ಕೋಟಿ ಮೌಲ್ಯದ ತರಕಾರಿ, ಸುಮಾರು 1,370 ಹೆಕ್ಟೇರ್‌ಗಳಲ್ಲಿ ಕೊಳೆತು ಹೋಗುತ್ತಿದೆ. ರಾಗಿ, ಮುಸುಕಿನ ಜೋಳ, ನೆಲಗಡಲೆ, ತೊಗರಿ, ಭತ್ತ ಸೇರಿದಂತೆ 34,554 ಹೆಕ್ಟೇರ್‌ ಬೆಳೆ ರೈತರ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಚೆನ್ನಮ್ಮನ ಕಿತ್ತೂರು, ಬೆಳಗಾವಿ ಜಿಲ್ಲೆಗಳಲ್ಲಿ 2,150 ಹೆಕ್ಟೇ‌ರ್‌ ಪ್ರದೇಶದ ಭತ್ತ ರೈತರ ಕೈ ಸೇರುವುದು ಅನುಮಾನ. ಶಿವಮೊಗ್ಗ ಜಿಲ್ಲೆಯಲ್ಲಿ ಕಟಾವಿಗೆ ಅಡ್ಡಿಉಂಟಾಗಿದೆ. ಜಿಲ್ಲೆಯಲ್ಲಿನ ಕೃಷಿ ಭೂಮಿಯಲ್ಲಿ 78,100 ಹೆಕ್ಟೇರ್‌‌ನಲ್ಲಿ ಭತ್ತ, 52,000 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕಟಾವು ಮಾಡಲಾಗದೆ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಪರಿಸ್ಥಿತಿ ಇದೇ ರೀತಿ ಇದೆ. ಹಾಸನ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ರಾಗಿ ಮತ್ತು ಮೆಕ್ಕೆಜೋಳ ಬೆಳೆದಿದ್ದ ರೈತರು ಪರಿತಪಿಸುತ್ತಿದ್ದಾರೆ. 675 ಹೆಕ್ಟೇರ್‌‌ ಮೆಕ್ಕೆಜೋಳ, 19,403 ಹೆಕ್ಟೇರ್‌‌ ರಾಗಿ ನೆಲಕಚ್ಚಿದೆ.

ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಪರಿಸ್ಥಿತಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಅಂದರಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಾಮರಾಜನಗರ ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳಲ್ಲಿ ನ.19, 20ರಂದು ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಮೂರು ದಶಕಗಳಲ್ಲಿಯೇ ಅತಿ ಹೆಚ್ಚು ಮಳೆ ದಾಖಲಾಗಿದ ಎಂದು ವರದಿಗಳು ಹೇಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿರಿ: ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...