Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...