Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...