Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...