Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...