Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...