Homeಮುಖಪುಟಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಪಟಾಕಿ ನಿಷೇಧ ಸ್ವಾಗತಿಸಿದ್ದ ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಕಂಗನಾ ರಾಣಾವತ್ ಮೀಸಲಾತಿಯನ್ನು ಎಳೆದುತಂದು ವಿವಾದಕ್ಕೀಡಾಗಿದ್ದಾರೆ.

- Advertisement -
- Advertisement -

ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧದ ಕುರಿತು ಆರಂಭವಾದ ಚರ್ಚೆ ಕೊನೆಗೆ ಇವು ಮೀಸಲಾತಿಯ ಅಡ್ಡಪರಿಣಾಮಗಳು, ಮೀಸಲಾತಿ ತೆಗೆಯಬೇಕು ಎಂಬಲ್ಲಿಗೆ ಬಂದು ತಲುಪಿವೆ. ಅದರಲ್ಲಿಯೂ ಸದಾ ವಿವಾದದಲ್ಲಿರುವ ಬಾಲಿವುಟ್‌ ನಟಿ ಕಂಗನಾ ರಾಣವತ್ ಮೀಸಲಾತಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ತೀವ್ರ ಟೀಕೆಗೆ ಒಳಗಾಗಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಕೋವಿಡ್ ಹರಡುವ ಭೀತಿ ಮತ್ತು ಪರಿಸರ ಮಾಲಿನ್ಯದ ದೃಷ್ಟಿಯಿಂದ ಕೆಲ ರಾಜ್ಯಗಳು ಪಟಾಕಿ ನಿಷೇಧ ಹೇರಿದ್ದವು. ಆಗ ಕರ್ನಾಟಕದ ಐಪಿಎಸ್ ಅಧಿಕಾರಿ ಡಿ. ರೂಪರವರು “ಪಟಾಕಿ ನಿಷೇದ ಸರಿಯಾದ ಕ್ರಮ. ಇದನ್ನು ಕೆಲವರು ಹಿಂದೂ ಧರ್ಮದ ವಿರುದ್ಧ ಪಿತೂರಿ ಎನ್ನುತ್ತಿದ್ದಾರೆ. ಹಿಂದೂ ಧರ್ಮದ ಯಾವುದಾದರೂ ಪುರಾತನ ಗ್ರಂಥಗಳಲ್ಲೋ, ಶಾಸ್ತ್ರಗಳಲ್ಲೋ ಪಟಾಕಿ ಉಲ್ಲೇಖ ಇದ್ದರೆ ಕೊಡಿ, ನಾನು ಕ್ಷಮೆ ಕೇಳುತ್ತೇನೆ, ಇಲ್ಲವಾದಲ್ಲಿ ನೀವು ಕ್ಷಮೆ ಕೇಳಿ. ಸ್ವಯಂ ಹಿಂದುತ್ವವಾದಿಗಳು ಅಂದುಕೊಂಡವರು ಇತರ ಹಿಂದುಗಳನ್ನು ದಾರಿತಪ್ಪಿಸಬೇಡಿ” ಎಂದು ಫೇಸ್‌ಬುಕ್‌ನಲ್ಲಿ ದೀರ್ಘ ಪೋಸ್ಟ್ ಒಂದನ್ನು ಹಾಕಿದ್ದರು.

ಈ ಕುರಿತು ಟ್ವಿಟ್ಟರ್‌ನಲ್ಲಿ ದೀರ್ಘ ವಾದ – ವಿವಾದ ಆರಂಭವಾಗಿತ್ತು. ಆ ಸಂದರ್ಭದಲ್ಲಿ ತಮ್ಮೊಡನೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಿ ‘ಟ್ರು ಇಂಡೋಲಜಿ’ ಖಾತೆ ಬ್ಲಾಕ್ ಮಾಡುವಂತೆ ಡಿ. ರೂಪರವರು ದೂರು ನೀಡಿದ್ದರು. ಆ ಆಧಾರದಲ್ಲಿ ಟ್ವಿಟ್ಟರ್ ಆ ಖಾತೆಯನ್ನು ಬ್ಲಾಕ್ ಮಾಡಿತ್ತು. ಆಗ ಕೆಲವರು #BringBackTrueIndology ಎಂದು ಟ್ವಿಟ್ಟರ್ ಟ್ರೆಂಡ್ ಮಾಡಿದ್ದರು.

ಆ ಸಮಯದಲ್ಲಿ ಡಿ.ರೂಪರವರ ವಿರುದ್ಧ ಸರಣಿ ಟ್ವೀಟ್‌ಗಳನ್ನು ಮಾಡಿದ ಕಂಗನಾ ರಾಣವತ್ “ನೀವೆಲ್ಲಾ ಮೀಸಲಾತಿ ಅಡ್ಡಪರಿಣಾಮಗಳು” ಎಂದು ಮೂದಲಿಸಿದ್ದಾರೆ. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಸಮಾಜದಲ್ಲಿನ ಗಾಯಗಳನ್ನು ಶಮನಗೊಳಿಸುವ ಬದಲು ಮತ್ತಷ್ಟು ವ್ರಣಗೊಳಿಸುತ್ತಾರೆ. ರೂಪರವರ ವೈಯಕ್ತಿಕ ಬದುಕಿನ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ, ಆದರೆ ಅವರು ಅಸಾಮರ್ಥ್ಯದಿಂದಾಗಿ ಹತಾಶೆಗೊಳಗಾಗಿರುವುದಂತೂ ಖಾತ್ರಿ ಇದೆ” ಎಂದು ಟ್ವೀಟ್‌ ಮಾಡಿದ್ದರು.

ಕಂಗನಾರವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಪದ್ದತಿ, ಮೀಸಲಾತಿಯ ಬಗ್ಗೆ ಅರಿವಿರದೇ ಏಕೆ ಯಾವಾಗಲೂ ಸಂವಿಧಾನ ಮತ್ತು ಮೀಸಲಾತಿಯ ವಿರುದ್ಧ ಮಾತನಾಡುತ್ತೀರಿ? ಸರಿ ನೀವು ಎಲ್ಲಿಯವರೆಗೂ ಓದಿದ್ದೀರಿ? 16ನೇ ವಯಸ್ಸಿಗೆ ನಾವು SSLC ಓದುತ್ತಿದ್ದಾಗಲೇ ಬಾಲಿವುಡ್ ಪ್ರವೇಶಿಸಿದರೆ ಓದೋಕೆ ಸಮಯವಾದರೂ ಎಲ್ಲಿ ಸಿಗುತ್ತದೆ, ಸ್ವಲ್ಪ ಇತಿಹಾಸ ಓದಿ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯ ಬಗ್ಗೆ ನಿಮಗೆ ಮಾತನಾಡುವ ಹಕ್ಕಿಲ್ಲ. ಇಂದು ಮೀಸಲಾತಿ ಆಧಾರದಲ್ಲಿ ಉನ್ನತ ಹುದ್ದೆಗಳಿಗೆ ಬರುವವರು ಸಹ ಸಾಕಷ್ಟು ಪ್ರತಿಭಾವಂತರು, ಕಠಿಣ ಶ್ರಮ ಹಾಕುವವರಾಗಿದ್ದಾರೆ. ಮೀಸಲಾತಿ ಪಡೆಯುವವರ ಕಟ್‌ಆಫ್ ಅಂಕ ಕೂಡ ಸಾಮಾನ್ಯ ವರ್ಗದ ಅಭ್ಯರ್ಥಿಗಳ ಸನಿಹವೇ ಇರುತ್ತದೆ. ಅಷ್ಟಿಲ್ಲದೇ ಯಾವ ಹುದ್ದೆ ಸಹ ಪಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಿ. ಒಬ್ಬ ಐಪಿಎಸ್ ಅಧಿಕಾರಿಯ ವಿರುದ್ಧ ಮಾತನಾಡುವ ನೀವು ಅದೇ ಐಪಿಎಸ್ ಪಾಸು ಮಾಡುವ ಸಾಮರ್ಥ್ಯ ಹೊಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಡಿ.ರೂಪರವರು ಬ್ರಾಹ್ಮಣ ಸಮುದಾಯದವರು. ಇಷ್ಟು ಕನಿಷ್ಠ ಜ್ಞಾನವಿಲ್ಲದೆ ನೀವು ಏಕೆ ಮೀಸಲಾತಿಯನ್ನು ದೂರುತ್ತೀರಿ? ಅವರು 2000ನೇ ಇಸವಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಆಲ್ ಇಂಡಿಯಾ 43ನೇ ರ್ಯಾಂಕ್ ಪಡೆದಿದ್ದಾರೆ. ಸ್ವಲ್ಪ ತಿಳಿದು ನಂತರ ಟ್ವೀಟ್‌ ಮಾಡಿ ಎಂದು ವಿವೇಕ್ ಎಂಡಲಾ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಮೀಸಲಾತಿ ಕೊನೆಗೊಳಿಸುವುದರ ಕುರಿತು ಮಾತನಾಡುತ್ತಾರೆ. ಏಕೆ ಯಾರೋಬ್ಬರು ಜಾತಿಪದ್ದತಿ ಕೊನೆಗೊಳಿಸುವುದರ ಬಗ್ಗೆ ಮಾತನಾಡುವುದಿಲ್ಲ. ಕಂಗನಾ ಮೇಡಂ ನೀವ್ಯಾಕೆ ಮಾತನಾಡುವುದಿಲ್ಲ ಎಂದು ಚೇ ಗುವೆರಾ ಎಂಬುವವರು ಪ್ರಶ್ನಿಸಿದ್ದಾರೆ.

ನೀವು ಯಾವ ಮೀಸಲಾತಿ ಕುರಿತು ಮಾತನಾಡುತ್ತಿದ್ದೀರಿ? ನಿನ್ನೆ ಓದಿದ ವರದಿಯಲ್ಲಿ 21 ಭ್ರಷ್ಟ ಅಧಿಕಾರಿಗಳ ಪೈಕಿ ದಲಿತರ ಸಂಖ್ಯೆ ಕೇವಲ 02. ಹೀಗಿರುವಾಗ ಜಾತಿಪದ್ದತಿ ಇರುವವರೆಗೂ ಮೀಸಲಾತಿ ದಲಿತರ ಹಕ್ಕು ಎಂದು ಶರೀಫ್ ಗಬೇರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಪಟಾಕಿ ನಿಷೇಧದ ವಿಷಯಕ್ಕೆ ಕಂಗನಾ ರಾಣವತ್ ತಪ್ಪು ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸ್ವಲ್ಪವು ಪರಿಶೀಲಿಸದೇ ಮೀಸಲಾತಿ ವಿರುದ್ಧ ಮಾತನಾಡುವ ಮೂಲಕ ತಮ್ಮ ಅಹಂಕಾರವನ್ನು ಪ್ರದರ್ಶಿಸಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.


ಇದನ್ನೂ ಓದಿ; ಸಮುದಾಯಗಳ ನಡುವೆ ದ್ವೇಷ ಬಿತ್ತುವ ಆರೋಪ: ಕಂಗನಾ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...