Homeಕರೋನಾ ತಲ್ಲಣಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ರೋಗದ ದಾಳಿ ಇನ್ನೂ ಮುಗಿದಿಲ್ಲ. ಆದರೆ ಈ ವಿಶ್ವ ನಾಯಕರು ಈಗಾಗಲೇ ಮಾರಣಾಂತಿಕ ಕೊರೋನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲವಾದ ಕಾರಣ ಇತಿಹಾಸದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

- Advertisement -
- Advertisement -

ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲರಾದ ಐವರು ವಿಶ್ವನಾಯಕರ ಆಡಳಿತ ಶೈಲಿ ಕುರಿತು ಇಲ್ಲಿ ವಿಶ್ಲೇಷಣೆಯಿದೆ. ಭಾರತೀಯರಾದ ಪ್ರೊ. ಸುಮಿತ್ ಗಂಗೂಲಿ ಸೇರಿದಂತೆ ಹಲವು ದೇಶಗಳ ತಜ್ಞರು, ಪ್ರೊಫೆಸ್‌ರ್‌ಗಳು ಮತ್ತು ವೈದ್ಯರ ನಡುವೆ ನಡೆದ ಚರ್ಚೆಯನ್ನು ‘ದಿ ವೈರ್’ ಸಂಗ್ರಹಿಸಿ ಕೊಟ್ಟಿದೆ.

‘ಕೆಲವು ಪ್ರಸ್ತುತ ಮತ್ತು ಮಾಜಿ ವಿಶ್ವ ನಾಯಕರು ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅಲಕ್ಷ್ಯ ಮಾಡುವ ಮೂಲಕ, ವಿಜ್ಞಾನವನ್ನು ಕಡೆಗಣಿಸುವ ಮೂಲಕ, ಸಾಮಾಜಿಕ ದೂರ ಮತ್ತು ಮಾಸ್ಕ್‌ಗಳಂತಹ ಆರೋಗ್ಯದ ಮಧ್ಯಸ್ಥಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತಮ್ಮ ದೇಶದಲ್ಲಿ ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಈ ಪಟ್ಟಿಯಲ್ಲಿರುವ ಐವರೂ ಪುರುಷ ಸಿಂಹಗಳೇ! ಭಾರತದ ನರೇಂದ್ರ ಮೋದಿ ಅದರಲ್ಲಿ ಒಬ್ಬರು ಎನ್ನುತ್ತಾರೆ’ ಇಂಡಿಯಾನಾ ವಿಶ್ವವಿದ್ಯಾಲಯದ ಪ್ರೊ. ಸುಮಿತ್ ಗಂಗೂಲಿ.

ಭಾರತವು ಜಾಗತಿಕ ಸಾಂಕ್ರಾಮಿಕದ ಹೊಸ ಕೇಂದ್ರಬಿಂದುವಾಗಿದ್ದು, ಮೇ 2021 ರ ಹೊತ್ತಿಗೆ ದಿನಕ್ಕೆ ಸುಮಾರು 4 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳು ಸಾಯುತ್ತಿದ್ದಾರೆ, ಏಕೆಂದರೆ ಆಮ್ಲಜನಕವಿಲ್ಲ ಮತ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳಿಲ್ಲ ಮತ್ತು ವೆಂಟಿಲೇಟರ್‌ಗಳೂ ಇಲ್ಲ. ಜೊತೆಗೆ ಉಚಿತ ಹಾಸಿಗೆಗಳೇ ಲಭ್ಯವಿಲ್ಲ.

ದೇಶದ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸುತ್ತಾರೆ: ಪ್ರಧಾನಿ ನರೇಂದ್ರ ಮೋದಿ!

ಜನವರಿ 2021ರಲ್ಲಿ, ಮೋದಿ ಜಾಗತಿಕ ವೇದಿಕೆಯಲ್ಲಿ ಭಾರತವು “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿ ಗೆದ್ದಿದೆ” ಎಂದು ಘೋಷಿಸಿದರು. ಮಾರ್ಚ್‌ನಲ್ಲಿ ಅವರ ಆರೋಗ್ಯ ಸಚಿವರು ಸಾಂಕ್ರಾಮಿಕ ರೋಗವು “ಎಂಡ್ ಗೇಮ್” ತಲುಪುತ್ತಿದೆ ಎಂದು ಘೋಷಿಸಿದರು. ವಾಸ್ತವವಾಗಿ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಕೊರೊನಾ ಶಕ್ತಿಯನ್ನು ಪಡೆಯುತ್ತಿತ್ತು. ಆದರೆ ಮೋದಿ ಸರ್ಕಾರವು ಸಂಭವನೀಯ ಆಕಸ್ಮಿಕಗಳಿಗೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ.

ದೇಶದಲ್ಲಿ ಕೋವಿಡ್ ಎರಡನೆ ಅಲೆ ತೀವ್ರವಾಗುವ ಸಂದರ್ಭದಲ್ಲಿ ಮೋದಿ ಮತ್ತು ಅವರ ಪಕ್ಷದ ಇತರ ಸದಸ್ಯರು ಏಪ್ರಿಲ್ ಚುನಾವಣೆಗೆ ಮುಂಚಿತವಾಗಿ ಹೊರಾಂಗಣ ಪ್ರಚಾರ ರ‍್ಯಾಲಿಗಳನ್ನು ನಡೆಸಿದರು. ಆ ರ‍್ಯಾಲಿಗಳಲ್ಲಿ ಮಾಸ್ಕ್ ಇರಲಿಲ್ಲ, ದೈಹಿಕ ಅಂತರ ಇರಲು ಸಾಧ್ಯವೇ? ಜನವರಿಯಿಂದ ಮಾರ್ಚ್‌ವರೆಗೆ ಲಕ್ಷಾಂತರ ಜನರನ್ನು ಸೆಳೆಯುವ ಕುಂಭಮೇಳ ಉತ್ಸವಕ್ಕೂ ಮೋದಿ ಅವಕಾಶ ನೀಡಿದರು. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು, ತಜ್ಞರು ಈಗ ಉತ್ಸವವು ಒಂದು ಸೂಪರ್-ಸ್ಪ್ರೆ ಡರ್ ಆಗಿದೆ ಎನ್ನುತ್ತಿದ್ದಾರೆ.

ಕಳೆದ ವರ್ಷ ಮೋದಿಯವರು ತಮ್ಮ ಯಶಸ್ಸನ್ನು ತಿಳಿಸಿದಂತೆ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಭಾರತವು 10 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೆರೆಯ ದೇಶಗಳಿಗೆ ಕಳುಹಿಸಿತು. ಭಾರತದ 139 ಕೋಟಿ ಜನರಲ್ಲಿ ಕೇವಲ 1.9% ರಷ್ಟು ಜನರು ಮೇ ಆರಂಭದಲ್ಲಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

ಬ್ರೆಜಿಲ್‌ನ ಜೈರ್ ಬೋಲ್ಸನಾರೊ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಕೋವಿಡ್ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡಿದರು. ಕೊರೊನಾ ‘ಬರೀ ಜ್ವರ ಬಿಡಿ’ ಎಂದು ಪರಿಸ್ಥಿತಿಯನ್ನ ಹದಗೆಡಿಸಿದರು.

ಆರೋಗ್ಯ ಸಚಿವಾಲಯದ ಆಡಳಿತಾತ್ಮಕ ವಿಷಯಗಳಾದ ಕ್ಲಿನಿಕಲ್ ಪ್ರೋಟೋಕಾಲ್‌ಗಳು, ಡೇಟಾ ಬಹಿರಂಗಪಡಿಸುವಿಕೆ ಮತ್ತು ಲಸಿಕೆ ಸಂಗ್ರಹಣೆಗಳಲ್ಲಿ ಬೋಲ್ಸೊನಾರೊ ಹಸ್ತಕ್ಷೇಪ ಮಾಡಿ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡರು. ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸುವ ಮತ್ತು ಸಾಂಕ್ರಾಮಿಕ ರೋಗದಿಂದ ಶಾಶ್ವತವಾಗಿ ಹಾನಿಗೊಳಗಾದ ಆರೋಗ್ಯ ವೃತ್ತಿಪರರಿಗೆ ಪರಿಹಾರ ನೀಡುವ ಶಾಸನವನ್ನು ಅವರು ರದ್ದು ಮಾಡಿದರು. ಸಾಮಾಜಿಕ ದೂರವನ್ನು ಉತ್ತೇಜಿಸುವ ಆಡಳಿತದ ಪ್ರಯತ್ನಗಳಿಗೆ ಅವರು ಅಡ್ಡಿಯುಂಟು ಮಾಡಿದರು. ಸ್ಪಾಗಳು ಮತ್ತು ಜಿಮ್‌ಗಳು ಸೇರಿದಂತೆ ಅನೇಕ ವ್ಯವಹಾರಗಳನ್ನು “ಅಗತ್ಯ” ಎಂದು ತೆರೆಯಲು ಅನುಮತಿ ನೀಡಿದರು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೋಲ್ಸೊನಾರೊ ಸಾಬೀತಾಗದ ಔಷಧಿಗಳನ್ನು, ಮುಖ್ಯವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಆಕ್ರಮಣಕಾರಿಯಾಗಿ ಉತ್ತೇಜಿಸಿದರು.

ಬೆಲಾರಸ್‌ನ ಅಲೆಕ್ಸಾಂಡರ್ ಲುಕಾಶೆಂಕೊ

ಬೆಲಾರಸ್‌ನ ದೀರ್ಘಕಾಲದ ಸರ್ವಾಧಿಕಾರಿ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಕೋವಿಡ್ ದುರಂತದ ಬೆದರಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಸಾಂಕ್ರಾಮಿಕ ರೋಗದ ಆರಂಭದಲ್ಲಿ, ಇತರ ದೇಶಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸುತ್ತಿದ್ದಂತೆ, ಲುಕಾಶೆಂಕೊ ಕೋವಿಡ್ ಹರಡುವುದನ್ನು ತಡೆಯಲು ಯಾವುದೇ ನಿರ್ಬಂಧಿತ ಕ್ರಮಗಳನ್ನು ಜಾರಿಗೊಳಿಸದಿರಲು ನಿರ್ಧರಿಸಿದರು. ಬದಲಾಗಿ, ವೋಡ್ಕಾ ಕುಡಿಯುವುದರಿಂದ, ಸೌನಾಕ್ಕೆ ಭೇಟಿ ನೀಡುವುದರಿಂದ ಮತ್ತು ಹೊಲಗಳಲ್ಲಿ ಕೆಲಸ ಮಾಡುವುದರಿಂದ ವೈರಸ್ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡೊನಾಲ್ಡ್ ಟ್ರಂಪ್

ಟ್ರಂಪ್ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ಸಾಂಕ್ರಾಮಿಕ ರೋಗವನ್ನು ಅವರು ತಪ್ಪಾಗಿ ನಿರ್ವಹಿಸಿದ್ದು ಅಮೆರಿಕಾದ ಮೇಲೆ- ವಿಶೇಷವಾಗಿ ಕಪ್ಪು ವರ್ಣದ ಸಮುದಾಯಗಳ ಮೇಲೆ- ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತಿದೆ.

ಸಾಂಕ್ರಾಮಿಕ ರೋಗದ ಆರಂಭಿಕ ನಿರಾಕರಣೆ, ಮಾಸ್ಕ್ ಮತ್ತು ಚಿಕಿತ್ಸೆಗಳ ಬಗ್ಗೆ ತಪ್ಪು ಸಂದೇಶಗಳನ್ನು ಅವರು ನೀಡುತ್ತ ಬಂದರು. ಮೋದಿಯವರಂತೆ ಅವರಿಗೂ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿತ್ತು.

ಆಫ್ರಿಕನ್ ಅಮೆರಿಕನ್ನರು ಮತ್ತು ಲ್ಯಾಟಿನೋಗಳು ಯುಎಸ್ ಜನಸಂಖ್ಯೆಯ ಕೇವಲ 31%ರಷ್ಟಿದ್ದಾರೆ. ಅವರು ಕೋವಿಡ್ ಪ್ರಕರಣಗಳಲ್ಲಿ 55% ಕ್ಕಿಂತ ಹೆಚ್ಚು ಇದ್ದಾರೆ. ಬಿಳಿಯರ ಮರಣ ಪ್ರಮಾಣಕ್ಕಿಂತ ಕಪ್ಪು ವರ್ಣದವರ ಮರಣ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಿತ್ತು.
ನಿರುದ್ಯೋಗ ಏರಿಕೆಯಲ್ಲೂ ಟ್ರಂಪ್ ಕಾರಣವಾದರು. ಇದು ಹೆಚ್ಚಾಗಿ ತಟ್ಟಿದ್ದು ಬಿಳಿಯರಲ್ಲದ ಅಮೆರಿಕನ್ ಪ್ರಜೆಗಳಿಗೆ.

ಮೆಕ್ಸಿಕೊದ ಆಂಡ್ರೆಸ್

ಮೆಕ್ಸಿಕೊವು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಸಾವಿನ ಪ್ರಮಾಣವನ್ನು ಹೊಂದಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಇದು 6,17,000 ಸಾವುಗಳನ್ನು ಅನುಭವಿಸಿದೆ. ಭಾರತ ಮತ್ತು ಅಮೆರಿಕ ಕೂಡ ಸಾವಿನ ಸಂಖ್ಯೆಯಲ್ಲಿ ಮುಂದಿವೆ.

ಮೆಕ್ಸಿಕೊದ ದೀರ್ಘಕಾಲದ, ವಿಪರೀತ ಕೋವಿಡ್ ಏಕಾಏಕಿಗಳಿಗೆ ಅಸಮರ್ಪಕ ರಾಷ್ಟ್ರೀಯ ನಾಯಕತ್ವ ಕಾರಣವಾಗಿದೆ.

ಸಾಂಕ್ರಾಮಿಕ ರೋಗದುದ್ದಕ್ಕೂ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮೆಕ್ಸಿಕೊದ ಪರಿಸ್ಥಿತಿಯ ಸಂಕಷ್ಟವನ್ನು ಮುಚ್ಚಿ ಇಡಲು ನೋಡಿದರು. ಆರಂಭದಲ್ಲಿ, ಅವರು ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೆ ವಿರೋಧಿಸಿದರು ಮತ್ತು ಅಂತಿಮವಾಗಿ ಮಾರ್ಚ್ 23, 2020 ರಂದು ಮೆಕ್ಸಿಕೊ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವಂತೆ ಮಾಡಿದರು. ಅವರು ಆಗಾಗ್ಗೆ ಮಾಸ್ಕ್ ಧರಿಸಲು ನಿರಾಕರಿಸಿದರು.

ಸಾಂಕ್ರಾಮಿಕ ರೋಗವು ಸ್ಫೋಟಗೊಳ್ಳುವ ಮೊದಲೇ, ಲೋಪೆಜ್ ಒಬ್ರಡಾರ್ ಜಾರಿಗೆ ತಂದ ಹಣಕಾಸು ನೀತಿ ಆರೋಗ್ಯ ಬಿಕ್ಕಟ್ಟನ್ನು ಇನ್ನಷ್ಟು ದುಸ್ತರವಾಗಿಸಿದೆ. ನಮ್ಮಲ್ಲಿ ಮೋದಿಯವರ ನೋಟ್‌ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ನೀತಿಗಳು ಕೂಡ ಭಾರತಕ್ಕೆ ಈಗ ಕಾಡುತ್ತಿವೆ.

(ಕೃಪೆ: ದಿ ವೈರ್)


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...